ಹುಬ್ಬಳ್ಳಿ:
ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದ ಸಿಐಡಿ ತಂಡ ಗಿರೀಶನನ್ನು ಎಂಟು ದಿನ ತಮ್ಮ ಕಸ್ಟಡಿಗೆ ಪಡೆದಿತ್ತು. ಗುರುವಾರ ತಡರಾತ್ರಿ ವರೆಗೂ ಆರೋಪಿಯನ್ನು ತೀವ್ರ ವಿಚಾರಣೆಗೊಳಿಸಿತ್ತು. ಶುಕ್ರವಾರ ಮಧ್ಯಾಹ್ನ ಅಂಜಲಿ ಮನೆಗೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಕರೆದುಕೊಂಡು ಹೋದರು. ಅಲ್ಲಿ ಸ್ಥಳ ಮಹಜರು ನಡೆಸಿತು. ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು. ಆದರೂ ದಾರಿಯುದ್ಧಕ್ಕೂ ಜನತೆ ನಿಂತು ಆರೋಪಿಗೆ ಹಿಡಿಶಾಪ ಹಾಕುತ್ತಿದ್ದ ದೃಶ್ಯ ಕಂಡು ಬಂತು. ಆರೋಪಿಯನ್ನು ನಿಂದಿಸಿದರು.
ಈ ನಡುವೆ ಆರೋಪಿ ನೋಡುತ್ತಿದ್ದಂತೆ ಅಂಜಲಿ ಸಹೋದರಿ ಯಶೋದಾ ರೊಚ್ಚಿಗೆದ್ದು, ನನ್ನ ಅಕ್ಕ ಏನು ಮಾಡಿದ್ದಳು. ಅವಳನ್ನೇಕೆ ಕೊಂದೆ. ಅವಳನ್ನು ಕೊಂದಿರುವ ನಿನ್ನನ್ನು ಸುಮ್ಮನೆ ಬಿಡಲ್ಲ ಎಂದು ಕಿಡಿಕಾರಿದಳು. ಮಹಜರು ಮುಗಿದ ಮೇಲೆ ಆರೋಪಿಯನ್ನು ಸಿಐಡಿ ಪೊಲೀಸ್ ತಂಡ ಗೌಪ್ಯ ಸ್ಥಳಕ್ಕೆ ಕರೆದುಕೊಂಡು ಹೋಯಿತು.ಮೈಸೂರಿಗೂ ಪಯಣ:
ಈ ನಡುವೆ ಅಂಜಲಿ ಹತ್ಯೆ ಮಾಡಿದ ಆರೋಪಿ ಚಾಕುವನ್ನು ಎಲ್ಲೋ ಬಿಸಾಕಾಗಿದ್ದಾನೆ ಎಂದು ಹೇಳಲಾಗಿದೆ. ಆದರೆ ಎಲ್ಲಿ ಬಿಸಾಕಿದ್ದಾನೆ ಎಂಬುದು ಗೊತ್ತಾಗಿಲ್ಲ. ಆ ಚಾಕು ಈವರೆಗೂ ಸಿಐಡಿ ತಂಡಕ್ಕೆ ಸಿಕ್ಕಿಲ್ಲ ಎಂದು ಹೇಳಲಾಗಿದೆ. ಅದರ ಹುಡುಕಾಟವನ್ನು ತಂಡ ಮಾಡುತ್ತಿದೆ.
ನೇಹಾ ಹಿರೇಮಠ ಹಾಗೂ ಅಂಜಲಿ ಅಂಬಿಗೇರ ಹತ್ಯೆ ಆರೋಪಿಗಳ ಪರ ವಕಾಲತ್ತು ವಹಿಸಲು ಯಾವ ವಕೀಲರು ಮುಂದಾಗುತ್ತಿಲ್ಲ. ಇದು ಆರೋಪಿಗಳಿಗೆ ಸಂಕಟ ಎದುರಾಗಿದೆ. ಇಲ್ಲಿನ ವಕೀಲರ ನಡೆಗೆ ಸಾರ್ವಜನಿಕ ವಲಯದಲ್ಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ.ಏ. 18ರಂದು ಕಾಲೇಜ್ ಕ್ಯಾಂಪಸ್ನಲ್ಲಿ ನೇಹಾ ಹಿರೇಮಠ, ಮೇ 15ರಂದು ಅಂಜಲಿ ಅಂಬಿಗೇರ ಹತ್ಯೆಯಾಗಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಬಳಿಕ ಎರಡು ಪ್ರಕರಣಗಳನ್ನು ಸಿಐಡಿಗೆ ವಹಿಸಿತ್ತು. ನೇಹಾ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ಚಾರ್ಜ್ಶೀಟ್ ಸಲ್ಲಿಸುವುದು ಬಾಕಿಯುಳಿದಿದೆ. ಇನ್ನು ಅಂಜಲಿ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದೆ.ಎರಡು ಪ್ರಕರಣಗಳಲ್ಲಿ ಆರೋಪಿಗಳ ಪರವಾಗಿ ವಕಾಲತ್ತು ವಹಿಸಲು ವಕೀಲರು ಮುಂದೆ ಬರುತ್ತಿಲ್ಲ. ನೇಹಾ ಹತ್ಯೆ ಪ್ರಕರಣದಲ್ಲಂತೂ ಅವರ ಮನೆಗೆ ಹೋಗಿದ್ದ ಕೆಲ ವಕೀಲರ ನಿಯೋಗ ಆರೋಪಿ ಪರವಾಗಿ ವಕಾಲತ್ತು ವಹಿಸುವುದಿಲ್ಲ ತಿಳಿಸಿತ್ತು. ಇದೀಗ ಅಂಜಲಿ ಹತ್ಯೆ ಕೇಸ್ಲ್ಲೂ ವಕೀಲರು ವಕಾಲತ್ತು ವಹಿಸಲು ಮುಂದಾಗುತ್ತಿಲ್ಲ. ವಕೀಲರ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.