ಗದಗ: ಹುಬ್ಬಳ್ಳಿಯ ಅಂಜಲಿ ಹಾಗೂ ಸಂಬಂಧಿಕರು ಕೊಲೆ ಬೆದರಿಕೆ ಇದೆ ಎಂದು ದೂರು ನೀಡಿದ್ದರೂ ಆರೋಪಿಯನ್ನು ಬಂಧಿಸದೇ ಪೊಲೀಸರು ಪರೋಕ್ಷವಾಗಿ ಅಂಜಲಿ ಕೊಲೆಗೆ ಕಾರಣರಾಗಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಪೊಲೀಸರನ್ನು ರಾಜಕೀಯ ವಿರೋಧಿಗಳ ಧಮನಕ್ಕಾಗಿ ಬಳಕೆ ಮಾಡುತ್ತಿದ್ದಾರೆ. ವಿರೋಧ ಪಕ್ಷದ ಕಾರ್ಯಕರ್ತರ ಮೇಲೆ ಕೇಸ್ ಹಾಕಲು ಪೊಲೀಸರು ನಿರತರಾಗಿದ್ದಾರೆ.
ರಾಜ್ಯದಲ್ಲಿನ ಪೊಲೀಸರು ಇಸ್ಪೀಟು, ಮಟಕಾ, ಕ್ಲಬ್, ಮರಳು ದಂಧೆಯಲ್ಲಿ ಶಾಮಿಲಾಗಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಲಂಚ ಕೊಟ್ಟು ಪೋಸ್ಟಿಂಗ್ ಹಾಕಿಸಿಕೊಂಡು ಬಂದಿದ್ದಾರೆ, ಹಾಗಾಗಿ ಅಧಿಕಾರಿಗಳು ನೇರವಾಗಿ ಹಾಗೂ ರಾಜ್ಯ ಸರ್ಕಾರ ಪರೋಕ್ಷವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇಡೀ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಹದಗೆಡಲು ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯವೇ ಕಾರಣವಾಗಿದೆ.ಗೃಹ ಸಚಿವರು, ಮುಖ್ಯಮಂತ್ರಿಗಳ ವರ್ತನೆ ಗಮನಿಸಿ ಅವರು ರಾಜ್ಯದಲ್ಲಿ ಏನೂ ನಡದೇ ಇಲ್ಲ ಎನ್ನುವಂತೆ ವರ್ತಿಸುತ್ತಿದ್ದು, ಇದರಿಂದ ರಾಜ್ಯದಲ್ಲಿ ಗೂಂಡಾಗಳು ನಿರ್ಭಿತಿ, ನಿರ್ಭಯವಾಗಿ ಓಡಾಡುತ್ತಿದ್ದಾರೆ. ರಾಜ್ಯದಲ್ಲಿ ಸಾಮಾನ್ಯ ಜನರ, ಹೆಣ್ಣುಮಕ್ಕಳು ಸೇರಿದಂತೆ ಯಾರ ಪ್ರಾಣಕ್ಕೂ ಸುರಕ್ಷತೆ ಇಲ್ಲ. ರಾಜ್ಯದಲ್ಲಿ ಭಯದ ವಾತಾವರಣ, ಗೂಂಡಾ ವಾತಾವರಣ ಇದೆ. ನೇಹಾ ಪ್ರಕರಣದಲ್ಲಿ ನಾವು ರಾಜಕೀಯ ಮಾಡಿಲ್ಲ. ಹಾಡುಹಗಲೇ ಕಾಲೇಜ್ ಕ್ಯಾಂಪಸ್ ನಲ್ಲಿ ಕೊಲೆ ಆದರೆ ಸುಮ್ಮನೆ ಕುಳಿತುಕೊಳ್ಳಬೇಕಾ? ಕಾಂಗ್ರೆಸ್ ನವರು ವಿರೋಧ ಪಕ್ಷದಲ್ಲಿದ್ದರೆ ಸುಮ್ಮನೆ ಕೂಡುತ್ತಿದ್ದರಾ ? ಅಂಜಲಿ ಮನೆಗೆ ಹೊಕ್ಕು ಕೊಲೆ ಮಾಡುತ್ತಾರೆ ಅಂದರೆ ಪರಿಸ್ಥಿತಿ ಎಲ್ಲಿಗೆ ಬಂತು? ಎಲ್ಲಿದೆ ಕಾನೂನು ? ಎಲ್ಲಿದೆ ಪೊಲೀಸರ ಭಯ ಎಂದು ಪ್ರಶ್ನಿಸಿದರು.
ಸಮಾಜ ಘಾತುಕರೊಂದಿಗೆ ಕಾಂಗ್ರೆಸ್: