ಅಂಕಲಗಿ ಅಡವಿಸಿದ್ದೇಶ್ವರ ರಥೋತ್ಸವ ಅದ್ಧೂರಿ

KannadaprabhaNewsNetwork |  
Published : Mar 07, 2025, 11:46 PM IST
ಗೋಕಾಕ ತಾಲೂಕಿನ ಅಂಕಲಗಿ ಪಟ್ಟಣದ ಶ್ರೀ ಅಡವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಅದ್ಧೂರಿಯಿಂದ ಮಹಾರಥೋತ್ಸವ ನೆರವೇರಿತು. | Kannada Prabha

ಸಾರಾಂಶ

ಗೋಕಾಕ ತಾಲೂಕಿನ ಸುಕ್ಷೇತ್ರ ಅಂಕಲಗಿ ಪಟ್ಟಣದ ಶ್ರೀ ಅಡವಿಸಿದ್ದೇಶ್ವರ ಮಠದ ಜಾತ್ರೆ ನಿಮಿತ್ತ ಶುಕ್ರವಾರ ಶ್ರೀ ಅಡವಿಸಿದ್ದೇಶ್ವರರ ಮಹಾ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಗೋಕಾಕ ತಾಲೂಕಿನ ಸುಕ್ಷೇತ್ರ ಅಂಕಲಗಿ ಪಟ್ಟಣದ ಶ್ರೀ ಅಡವಿಸಿದ್ದೇಶ್ವರ ಮಠದ ಜಾತ್ರೆ ನಿಮಿತ್ತ ಶುಕ್ರವಾರ ಶ್ರೀ ಅಡವಿಸಿದ್ದೇಶ್ವರರ ಮಹಾ ರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.

ರಾಜ್ಯದ ನಾನಾ ಭಾಗಗಳಿಂದ ಆಗಮಿಸಿದ್ದ ಲಕ್ಷಾಂತರ ಭಕ್ತರು, ಶ್ರೀ ಅಡವಿಸಿದ್ದೇಶ್ವರನ ದರ್ಶನ ಪಡೆದರು. ಲಕ್ಷಾಂತರ ಭಕ್ತರು ಸಡಗರ ಸಂಭ್ರಮದಿಂದ ರಥವನ್ನು ಎಳೆದು ಭಕ್ತಿಭಾವ ಮೆರೆದರು. ಭಕ್ತರು ಹರ ಹರ ಮಾಹಾದೇವ, ಅಡವಿಸಿದ್ದೇಶ್ವರ ಮಹಾರಾಜ ಕೀ ಜೈ ಎಂದು ಘೋಷಣೆ ಕೂಗುತ್ತಾ ರಥ ಎಳೆದರು. ಮಹಿಳೆಯರು ಮಕ್ಕಳು ರಥಕ್ಕೆ ಬಾಳೆಹಣ್ಣು, ಉತ್ತತ್ತಿ ಎಸೆದು ಹರಕೆ ತೀರಿಸಿದರು. ಶ್ರೀ ಮಠದ ಮಠಾಧೀಶ ಡಾ. ಅಮರಸಿದ್ದೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಶ್ರೀ ಅಡವಿಸಿದ್ದೇಶ್ವರ ಮಠದ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಭವ್ಯ ದನಗಳ ಜಾತ್ರೆಯೂ ಕೂಡ ವೈಭವದಿಂದ ನಡೆಯಿತು. ಜಾತ್ರೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪಟ್ಟಣದಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ