ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ: ಕಡಿವಾಣಕ್ಕೆ ಒತ್ತಾಯ

KannadaprabhaNewsNetwork |  
Published : Dec 30, 2025, 02:45 AM IST
29ಎಚ್‌ಪಿಟಿ4- ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಹೊಸಪೇಟೆಯಲ್ಲಿ ಸೋಮವಾರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್‌ ಅವರಿಗೆ ಸ್ಲಂ ಜನರ ಸಂಘಟನೆ ಕರ್ನಾಟಕ ವಿಜಯನಗರ ಜಿಲ್ಲಾ ಸಮಿತಿ ವತಿಯಿಂದ ಮನವಿಪತ್ರ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಅಕ್ಕಿ, ರಾಗಿ ನೀಡುತ್ತಿದ್ದು ಇದನ್ನು ಕೆಲವೊಂದು ಮಾಫಿಯಾಗಳು ಅಕ್ರಮವಾಗಿ ಕೊಂಡುಕೊಂಡು ಸ್ಲಂ ಜನರ ಅನ್ನಕ್ಕೆ ಕನ್ನ ಹಾಕುತ್ತಿವೆ.

ಹೊಸಪೇಟೆ: ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಅಕ್ಕಿ, ರಾಗಿ ನೀಡುತ್ತಿದ್ದು ಇದನ್ನು ಕೆಲವೊಂದು ಮಾಫಿಯಾಗಳು ಅಕ್ರಮವಾಗಿ ಕೊಂಡುಕೊಂಡು ಸ್ಲಂ ಜನರ ಅನ್ನಕ್ಕೆ ಕನ್ನ ಹಾಕುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಸ್ಲಂ ಜನರ ಸಂಘಟನೆ ಕರ್ನಾಟಕ ವಿಜಯನಗರ ಜಿಲ್ಲಾ ಸಮಿತಿಯಿಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್‌ ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.ರಾಜ್ಯದ ಯಾವುದೇ ಒಬ್ಬ ವ್ಯಕ್ತಿಯು ಹಸಿವಿನಿಂದ ಸಾಯಬಾರದು ಎನ್ನುವ ಸದುದ್ದೇಶದಿಂದ ರಾಜ್ಯ ಸರ್ಕಾರವು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಅಕ್ಕಿ, ರಾಗಿ ನೀಡುತ್ತಿದೆ. ಇದನ್ನು ಕೆಲವೊಂದು ಮಾಫಿಯಾಗಳು ಅಕ್ರಮವಾಗಿ ಕೊಂಡುಕೊಂಡು ಸ್ಲಂ ಜನರ ಅನ್ನಕ್ಕೆ ಕನ್ನ ಹಾಕುತ್ತಿದ್ದಾರೆ. ಅನ್ನಭಾಗ್ಯ ಅಕ್ಕಿ ಮಾಫಿಯಾ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಸಂಘದ ಅಧ್ಯಕ್ಷ ಎಚ್.ಶೇಷು, ಪ್ರಧಾನ ಕಾರ್ಯದರ್ಶಿ ಎನ್.ವೆಂಕಟೇಶ್, ಮಹಿಳಾ ಘಟಕದ ಅಧ್ಯಕ್ಷ ಎನ್.ಹುಲಿಗೆಮ್ಮ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗುತ್ತಿ ಕೈಲಾಸ್ ಮುಖಂಡ ಜೆ.ಬಿ. ರಘು ಇದ್ದರು.

ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿ ಹೊಸಪೇಟೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ರಿಯಾಜ್‌ ಅವರಿಗೆ ಮನವಿ ಸಲ್ಲಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸರ್ಕಾರಿ ಭೂಮಿ ಒತ್ತುವರಿಗೆ ಅವಕಾಶ ನೀಡಲ್ಲ: ಡಿಸಿಎಂ
ಏಕಾದಶಿ ಪ್ರಯುಕ್ತ ಶರವಣ ಟ್ರಸ್ಟ್‌ನಿಂದ ಲಕ್ಷ ಲಡ್ಡು ಹಂಚಿಕೆ