ಕನ್ನಡಪ್ರಭ ವಾರ್ತೆ ಮೂಡಿಗೆರೆ
ವರ್ಷವಿಡಿ ಗರ್ಭಗುಡಿಯಲ್ಲಿರುವ ದೇವರು ಬರುವಂತ ಭಕ್ತರಿಗೆ ದರ್ಶನ ಕೊಡುತ್ತಾಳೆ. ರಥೋತ್ಸವದ ವಿಷೇಶ ದಿನದಲ್ಲಿ ಜಗನ್ಮಾತೆ ಹೊರಬಂದು ದಿವ್ಯ ರಥದಲ್ಲಿ ಕುಳಿತು ಭಕ್ತರಿಗೆ ದರ್ಶನ ನೀಡುವುದೇ ರಥೋತ್ಸವದ ವಿಷೇಶವಾಗಿದೆ ಎಂದು ಶ್ರೀ ಕ್ಷೇತ್ರ ಹೊರನಾಡಿನ ಧರ್ಮಕರ್ತ ಡಾ.ಜಿ.ಭೀಮೇಶ್ವರ ಜೋಷಿ ತಿಳಿಸಿದರು.ಶ್ರೀ ಕ್ಷೇತ್ರದ ಹೊರನಾಡು ಅನ್ನಪೂರ್ಣೆಶ್ವರಿ ಅಮ್ಮನವರ ದಿವ್ಯ ರಥೋತ್ಸವದಲ್ಲಿ ಪಾಲ್ಗೊಂಡ ಭಕ್ತರಿಗೆ ರಥೋತ್ಸವದ ವಿವರಣೆ ನೀಡಿದ ಅವರು. ಶ್ರೀಕ್ಷೇತ್ರದಲ್ಲಿ ನಡೆಯುವ ರಥೋತ್ಸವದಲ್ಲಿ ಭಕ್ತರಿಗೆ ದೇವರ ದರ್ಶನ, ದೇವತಾ ಸಾನ್ನಿಧ್ಯ ಮತ್ತು ದೇವರ ಸೇವಾ ಕಾರ್ಯವು ನೇರವಾಗಿ ಲಭಿಸುವುದು. ಕ್ಷೇತ್ರಕ್ಕೆ ಬರುವ ಪ್ರತಿಯೊಬ್ಬ ಭಕ್ತರು ಏಕ ಮನಸ್ಸಿನಿಂದ ಜಾತಿ ಭೇದ ಮರೆತು ಭಕ್ತಿ ಪ್ರಧಾನವಾಗಿ ರಥ ಎಳೆಯುವುದರೊಂದಿಗೆ ದೇವರ ಕೃಪೆಗೆ ಪಾತ್ರರಾಗುತ್ತಾನೆ.
ರಥೋತ್ಸವಗಳಿಗೂ ಮಾನವ ಜೀವನದ ರಥಕ್ಕೂ ಒಂದಕ್ಕೊಂದು ಸಂಬಂಧವಿದೆ. ಜೀವನ-ಬದುಕು ಎಂಬ ರಥದಲ್ಲಿ ಸಂಸಾರದ ಒಳಗಿರುವ ಎಲ್ಲರು, ಏಕ ಮನಸ್ಸಿನಿಂದ ರಥ ಎಳೆದಾಗ ಹೇಗೆ ನಿರ್ದಿಷ್ಟ ಗುರಿ ತಲುಪಲು ಸಾಧ್ಯವೋ ಹಾಗೆಯೇ ರಥವನ್ನು ನಿಶ್ಕಲ್ಮಷದಿಂದ ಭಕ್ತಿಭಾವದಿಂದ ಎಳೆದಲ್ಲಿ ಒಳಗಿನ ಪರಮಾತ್ಮನನ್ನು ಕಾಣಲು ಸಾಧ್ಯ ಎಂದರು.ರಥಗಳಲ್ಲಿ ದೇವರು ಕುಳಿತಾಗ ಅದು ಪ್ರತಿಯೊಬ್ಬ ಮನುಷ್ಯನು ಹಂತಹಂತವಾಗಿ ಗುರಿ ತಲುಪುವುದರ ಮೂಲಕ ಎತ್ತರಕ್ಕೆ ಬೆಳೆಯ ಬೇಕೆಂಬ ಸಂದೇಶ ನೀಡುತ್ತದೆ. ರಥೋತ್ಸವ ಎಂದರೆ ಅದು ಒಂದು ಹಬ್ಬದ ವಾತವಾರಣ. ರಥೋತ್ಸವಕ್ಕೆ ಬರುವ ಭಕ್ತರು ರಥೋತ್ಸವದ ನೆನಪಿಗಾಗಿ ದೇವಾಲಯದ ಸುತ್ತಲೂ ವಸ್ತು ಖರೀದಿಸುವುದು ಒಂದು ವಿಶೇಷ. ರಥೋತ್ಸವದಲ್ಲಿ ರಾಜ್ಯದ ನಾನಾ ಭಾಗಗಳಿಂದ ಭಕ್ತರು ಆಗಮಿಸಿ, ಅಮ್ಮನವರ ಕೃಪೆಗೆ ಪಾತ್ರರಾದರು.
ಇದಕ್ಕೂ ಮುನ್ನಾ ದೇವಾಲಯದಲ್ಲಿ ಅನ್ನಪೂರ್ಣೆಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ಡಾ. ಜಿ.ಭೀಮೇಶ್ವರ ಜೋಷಿ ಮತ್ತು ರಾಜಲಕ್ಷ್ಮಿ ಬಿ.ಜೋಷಿ ದಂಪತಿಗಳು ವಿಷೇಶ ಪೂಜೆ ಸಲ್ಲಿಸಿ. ದೇವಾಲಯದ ಪ್ರಾಂಗಣದಲ್ಲಿ ಉತ್ಸವ ಮೂರ್ತಿಯನ್ನು ಪ್ರಧಾನ ಅರ್ಚಕರು ತಲೆಯ ಮೇಲೆ ಹೊತ್ತು. ವೇದ ಮಂತ್ರ ಘೋಷದೊಂದಿಗೆ ಮಂಗಳ ವಾದ್ಯದೊಂದಿಗೆ ಪ್ರದಕ್ಷಿಣೆ ಹಾಕಿಸಿ ನಂತರ ಅಮ್ಮನವರ ಮೂರ್ತಿಯನ್ನು ರಥ ದಲ್ಲಿ ಕುಳ್ಳರಿಸಿ ಎಳೆಯಲಾಯಿತು.ಈ ಸಂದರ್ಭದಲ್ಲಿ ಅಂಕರಕಣ ಗಣಪತಿ ದೇವಾಲಯದ ಧರ್ಮಕರ್ತ ರಾಮನಾರಾಯಣ ಜೋಷಿ, ರಾಜಗೋಪಾಲ ಜೋಷಿ, ಗಿರೀಜಾ ಶಂಕರ್ ಜೋಷಿ ಕುಟುಂಬ ಪಾಲ್ಗೊಂಡು ರಥೋತ್ಸವ ಯಶಸ್ವಿಗೊಳಿಸಿದರು. ರಾಜಲಕ್ಷೀ ಭಿ ಜೋಷಿ ಮತ್ತು ಕುಟುಂಬ ವರ್ಗದವರು ಮಹಿಳೆಯರಿಗೆ ಬಳೆ ಮತ್ತು ರವಿಕೆ ಕಣ ವಿತರಿಸಿದರು.