ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ಹೊರವಲಯದಲ್ಲಿರುವ ಖಾಸಗಿ ಹೊಟೇಲ್ನಲ್ಲಿ ಆಯೋಜಿತಗೊಂಡಿರುವ ನಿಪ್ಪಾಣಿ ಕ್ಷೇತ್ರದ ಪಿಕೆಪಿಎಸ್ ಸದಸ್ಯರ ಸಭೆಯಲ್ಲಿ ಸೋಮವಾರ ಭಾಗವಹಿಸಿ ಮಾತನಾಡಿದ ಅವರು, ಬಿಡಿಸಿಸಿ ಬ್ಯಾಂಕ್ ಅಧಿಕಾರ ಚುಕ್ಕಾಣಿ ಹಿಡಿಯಲು ಈಗಾಗಲೇ ರಣತಂತ್ರ ರೂಪಿಸಿದ್ದೇವೆ ಎಂದು ತಿಳಿಸಿದರು.
ನಿಪ್ಪಾಣಿ ಕ್ಷೇತ್ರದಲ್ಲಿ ಸುಮಾರು 119 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿದ್ದು, ಅವುಗಳಲ್ಲಿ ನಮ್ಮ ಪೆನೆಲ್ ಅಭ್ಯರ್ಥಿಯಾಗಿರುವ ಅಣ್ಣಾಸಾಹೇಬ ಜೊಲ್ಲೆಗೆ ಈಗಾಗಲೇ 72 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಬೆಂಬಲಿಸಿವೆ. ಇದರಿಂದ ಜೊಲ್ಲೆ ಆಯ್ಕೆ ಬಹುತೇಕ ಖಚಿತವಾಗಿದೆ. ಜಿಲ್ಲೆಯ ಎಲ್ಲ ಪಕ್ಷಗಳ ನಾಯಕರು ಪಕ್ಷ ಬೇಧ ಮರೆತು ಸಹಕಾರ ಮನೋಭಾವನೆಯಿಂದ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತಿದ್ದೇವೆ. ಜಿಲ್ಲೆಯ ಎಲ್ಲ ಹಿರಿಯರ ಮುಂದಾಳತ್ವದಲ್ಲಿ ಈ ಚುನಾವಣೆ ನಡೆಯಲಿದೆ. ಒಟ್ಟು 16 ಸ್ಥಾನಗಳ ಪೈಕಿ 12 ಸ್ಥಾನಗಳನ್ನು ಗೆಲ್ಲಿಸಲು ನಾವು ಪಣ ತೊಟ್ಟಿದ್ದೇವೆ ಎಂದರು.ಮಾಜಿ ಸಂಸದ, ನಿಪ್ಪಾಣಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ರೈತರ ಸಂಸ್ಥೆಯಾಗಿರುವ ಡಿಸಿಸಿ ಬ್ಯಾಂಕಿನ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ಹಾಕಿಕೊಂಡಿದ್ದೇವೆ. ರೈತರ ಸೇವೆಯೇ ನಮ್ಮ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.