ಕನ್ನಡಪ್ರಭ ವಾರ್ತೆ ಮಂಡ್ಯನಗರದ ಪ್ರವಾಸಿ ಮಂದಿರದಲ್ಲಿ ರಾಜ್ಯ ರೈತ ಸಂಘ ತಾಲೂಕು ಅಧ್ಯಕ್ಷರಾಗಿ ಎಂ.ಎಸ್.ಅಣ್ಣಯ್ಯ ಮತ್ತು ಪ್ರದಾನ ಕಾರ್ಯದರ್ಶಿಯಾಗಿ ಆನಂದ್ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು.
ಯಾರ ಮೇಲೂ ದ್ವೇಷ ಕಟ್ಟಿಕೊಳ್ಳದೆ ರೈತರ ಸಂಘಕ್ಕೆ ದುಡಿದು ನ್ಯಾಯಯುತವಾಗಿ ಕೆಲಸ ಮಾಡಬೇಕು. ನಿಮಗೆ ನಾವು ಬೆಂಬಲವಾಗಿ ನಿಲ್ಲುತ್ತದೆ ಎಂದರು.
ಈ ವೇಳೆ ಬೂದನೂರು ಪುಟ್ಟಸ್ವಾಮಿ, ಭೂತನ ಹೊಸೂರು ಸಂತೋಷ್, ಮೊತ್ತಳ್ಳಿ ಮಾದೇಗೌಡ, ಮಾರಗೌಡನಹಳ್ಳಿ ನಿಂಗೇಗೌಡ, ಚಿಕ್ಕಬಳ್ಳಿ ನಿಂಗೇಗೌಡ, ಹಂಪಾಪುರ ನಾಗರಾಜ್ ಭಾಗವಹಿಸಿದ್ದರು.28ರಂದು ಒಂದು ದಿನದ ಕಾರ್ಯಾಗಾರ
ಲೈಂಗಿಕ ದೌರ್ಜನ್ಯ, ಕಿರುಕುಳದಿಂದ ಮಹಿಳೆಯರ ರಕ್ಷಣೆ ಕುರಿತು ಸರ್ಕಾರದ ಅಧಿಕಾರಿಗಳು, ಸಿಬ್ಬಂದಿ, ಆಂತರಿಕ ದೂರು ನಿವಾರಣಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರಿಗೆ ನಗರದ ಪಿಇಎಸ್ ಎಂಜಿನಿಯರಿಂಗ್ ಕಾಲೇಜು ಆವರಣದ ಪ್ಲೇಸ್ ಮೆಂಟ್ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಆಯೋಜಿಸಲಾಗಿದೆ. ನವದೆಹಲಿಯ ರಾಷ್ಟ್ರೀಯ ಮಹಿಳಾ ಆಯೋಗ, ಬೆಂಗಳೂರಿನ ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಅಂದು ಬೆಳಗ್ಗೆ ನಡೆಯುವ ಕಾರ್ಯಾಗಾರವನ್ನು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯ ಕಾರ್ಯದರ್ಶಿ ಮೀನಾಕ್ಷಿ ನೇಗಿ ಉದ್ಘಾಟಿಸಲಿದ್ದು, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ ನಾಗಲಕ್ಷ್ಮಿ ಚೌಧರಿ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಆರ್.ಲತಾ ಪ್ರಾಸ್ತಾವಿಕ ನುಡಿಯನ್ನು ನಡೆಸಲಿದ್ದಾರೆ.
ಮಂಡ್ಯ: