ಕನ್ನಡಪ್ರಭ ವಾರ್ತೆ ಮೈಸೂರು
ಎಸ್ಜೆಸಿಇ ಆವರಣದಲ್ಲಿರುವ ಜೆಎಸ್ಎಸ್ ಪಾಲಿಟೆಕ್ನಿಕ್ನಲ್ಲಿ ಶುಕ್ರವಾರ ವಾರ್ಷಿಕೋತ್ಸವ ಹಾಗೂ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಸುನೀತಾ ಅವರು ಎಲ್ಲಾ ಅಡತಡೆಗಳನ್ನು ಎದುರಿಸಿ, ಸಂಶೋಧನಾ ಕಾರ್ಯ ಕೈಗೊಂಡು ನಗುಮುಖದಿಂದಲೇ ಭೂಮಿಗೆ ಮರಳಿದ್ದಾರೆ ಎಂದು ಹರ್ಷಿಸಿದರು.
ಮುಖ್ಯ ಅತಿಥಿಯಾಗಿದ್ದ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಉಪ ನಿರ್ದೇಶಕಿ ಮೇಘಲಾ ಮಾತನಾಡಿ, ಓದಿ ಸರ್ಕಾರಿ ಅಥವಾ ಖಾಸಗಿ ನೌಕರಿ ಪಡೆಯುವುದಕ್ಕಿಂತ ಸ್ವಂತ ಉದ್ಯೋಗ ಆರಂಭಿಸಿ, ಹತ್ತಾರು ಜನರಿಗೆ ಕೆಲಸ ಕೊಡುವಂತೆ ಆಗಬೇಕು ಎಂದರು.ನವ ಉದ್ಯಮಿ ಆರಂಭಿಸಲು ಇಲಾಖೆಯಿಂದ ಹಲವಾರು ಯೋಜನೆಗಳಿದ್ದು, ಡಿಪ್ಲೋಮಾ ವ್ಯಾಸಂಗ ಪೂರೈಸಿರುವವರು ಇದರ ಪ್ರಯೋಜನ ಪಡೆಯಬೇಕು ಎಂದರು.
ಹುಣಸೂರು ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ಸಹಾಯಕ ನಿರ್ದೇಶಕಿ ಎಚ್.ಕೆ. ರೇಣುಕಾ ಮುಖ್ಯ ಅತಿಥಿಯಾಗಿದ್ದರು. ಹಾಸ್ಯ ಕಲಾವಿದ ಮೈಸೂರು ಆನಂದ್ ಅವರು ಸಭಿಕರನ್ನು ತಮ್ಮ ಹಾಸ್ಯ ಪ್ರಸಂಗಗಳ ಮೂಲಕ ನಕ್ಕು ನಲಿಸಿದರು.
ಜೆಎಸ್ಎಸ್ ಪಾಲಿಟೆಕ್ನಿಕ್ ಪ್ರಾಂಶುಪಾಲ ಕೆ.ಎಸ್. ಭಕ್ತವತ್ಸಲ ವಾರ್ಷಿಕ ವರದಿ ಓದಿದರು. ಉಪನ್ಯಾಸಕಿ ನಾಗಕನ್ಯೆ ಸ್ವಾಗತಿಸಿದರು.ಸಿಎಚ್. ನಿಧಿ ಮಹಿಳಾ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಆರ್, ತೇಜಸ್, ರೇವಂತ್ ಕುಮಾರ್, ನಿಧಿ ನಿರೂಪಿಸಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು.