ಪೇರಲ, ಬಾರೆಹಣ್ಣಿನ ಊರು ಡಂಬಳಕ್ಕೆ ತೋಟಗಾರಿಕೆ ಕಾಲೇಜು ಘೋಷಣೆ

KannadaprabhaNewsNetwork |  
Published : Mar 07, 2025, 11:46 PM IST
ಪೋಟೊ ಕ್ಯಾಪ್ಸನ್: ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಶಾಸಕ ಜಿ.ಎಸ್.ಪಾಟೀಲ್.ಪೋಟೊ ಕ್ಯಾಪ್ಸನ್:ಡಂಬಳ ಗ್ರಾಮದಲ್ಲಿ ಅಡಕೆತೋಟ ಬೆಳದುನಿಂತಿರುವುದು. | Kannada Prabha

ಸಾರಾಂಶ

ಈ ಬಾರಿ ಮುಂಗಡಪತ್ರದಲ್ಲಿ ಸಿಎಂ ಸಿದ್ದರಾಮಯ್ಯನವರು ಗದಗ ಜಿಲ್ಲೆಯ ಡಂಬಳಕ್ಕೆ ತೋಟಗಾರಿಕೆ ಕಾಲೇಜು ಘೋಷಿಸಿರುವುದು ತೋಟಗಾರಿಕೆ ಬೆಳೆಗಾರರಲ್ಲಿ ಹುಮ್ಮಸ್ಸು ಮೂಡಿಸಿದ್ದು, ಸಚಿವ ಎಚ್.ಕೆ. ಪಾಟೀಲ ಹಾಗೂ ಶಾಸಕ ಜಿ.ಎಸ್. ಪಾಟೀಲರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ರಿಯಾಜಅಹ್ಮದ ದೊಡ್ಡಮನಿಕನ್ನಡಪ್ರಭ ವಾರ್ತೆ ಡಂಬಳ ಈ ಬಾರಿ ಮುಂಗಡಪತ್ರದಲ್ಲಿ ಸಿಎಂ ಸಿದ್ದರಾಮಯ್ಯನವರು ಗದಗ ಜಿಲ್ಲೆಯ ಡಂಬಳಕ್ಕೆ ತೋಟಗಾರಿಕೆ ಕಾಲೇಜು ಘೋಷಿಸಿರುವುದು ತೋಟಗಾರಿಕೆ ಬೆಳೆಗಾರರಲ್ಲಿ ಹುಮ್ಮಸ್ಸು ಮೂಡಿಸಿದ್ದು, ಸಚಿವ ಎಚ್.ಕೆ. ಪಾಟೀಲ ಹಾಗೂ ಶಾಸಕ ಜಿ.ಎಸ್. ಪಾಟೀಲರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ಮುಂಡರಗಿ ಅಂದರೆ ಬರ, ಗುಳೆ ಹೋಗುವುದು, ಮಳೆ ಅನಿಶ್ಚಿತತೆ, ರೈತ ಆತ್ಮಹತ್ಯೆ ಪರಿಸ್ಥಿತಿ ಮೊದಲಿನಿಂದ ಇತ್ತು. ಸಿಂಗಟಾಲೂರ ಯೋಜನೆ ಜಾರಿಗೆ ಬಂದಿದ್ದಷ್ಟೆ ತಡ ರೈತರು, ಗುಳೆ ಹೋಗುವುದು ತಪ್ಪಿದೆ. ರೈತರು ವಿವಿಧ ಬಗೆಯ ತರಕಾರಿ, ಈರುಳ್ಳಿ, ಬಾಳೆ, ಡ್ರ್ಯಾಗನ್ ಫ್ರೂಟ್ , ದಾಳಿಂಬೆ, ಮಾವು, ತೆಂಗು, ಪೇರಲ್, ಅಡಕೆ, ಬಾರೆ, ಲೀಚಿ, ಪಪ್ಪಾಯಿ ಹಣ್ಣುಗಳನ್ನು ಕೆರೆ ಪ್ರದೇಶದ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳೆಯುತ್ತಿದ್ದಾರೆ. ನೀರಾವರಿ ಕಾಲುವೆ ಹತ್ತಿರವಿರುವ ರೈತರು ಬೆಳೆದ ಹಣ್ಣಗಳು ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಡಾವಣಗೆರೆ ಸೇರಿದಂತೆ ಹೊರ ರಾಜ್ಯಗಳಿಗೆ ರಫ್ತಾಗುತ್ತಿದ್ದು, ಬೆಳೆಗಾರರು ಆರ್ಥಿಕವಾಗಿ ಸಬಲರಾಗಿದ್ದಾರೆ. ಇದಕ್ಕೆಲ್ಲ ಕಾರಣರಾದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಎಚ್.ಕೆ. ಪಾಟೀಲ್, ಶಾಸಕ ಜಿ.ಎಸ್. ಪಾಟೀಲರನ್ನು ನೆನೆಯಬೇಕೆನ್ನುವುದು ರೈತರ ಇಚ್ಛೆಯಾಗಿದೆ.

ಈ ಹಿಂದೆ ಕಾಂಗ್ರೆಸ್ ಸರ್ಕಾರ ಇದ್ದಾಗ ಸಿಂಗಟಾಲೂರ ಯೋಜನೆಯ ಮೂಲಕ ಡಂಬಳ, ತಾಮ್ರುಗುಂಡಿ, ಪೇಠಾ ಆಲೂರ, ಬಸಾಪೂರ, ಜಂತ್ಲಿ ಶಿರೂರ ಕೆರೆ ಭರ್ತಿಗೊಳಿಸಿದ ಹಿನ್ನೆಲೆ ತೋಟಗಾರಿಕಾ ಮತ್ತು ಕೃಷಿ ಬೆಳೆಗಳಲ್ಲಿ ಇಲ್ಲಿ ಕ್ರಾಂತಿ ಉಂಟಾಗಿದೆ. ಈಗ ತೋಟಗಾರಿಕೆ ಕಾಲೇಜು ಸಹ ಘೋಷಣೆಯಾಗಿರುವುದು ಸಹಜವಾಗಿಯೇ ಬೆಳೆಗಾರರಲ್ಲಿ ಮತ್ತು ತೋಟಗಾರಿಕೆ ವಿದ್ಯಾರ್ಥಿಗಳಲ್ಲಿ ಮತ್ತಷ್ಟು ಕನಸುಗಳನ್ನು ಗಟ್ಟಿಗೊಳಿಸಿದೆ.

ಡಾ. ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಆಶಯದಂತೆ ಡಂಬಳ ಹೋಬಳಿಯ ಗ್ರಾಮಸ್ಥರು ತೋಟಗಾರಿಕಾ ಬೆಳೆಗೆ ಹೆಚ್ಚು ಉತ್ತೇಜನ ಕೊಟ್ಟಿದ್ದಾರೆ. ಈ ಭಾಗದಲ್ಲಿ ತೋಟಗಾರಿಕಾ ಕಾಲೇಜು ಪ್ರಾರಂಭವಾದರೆ ವಿದ್ಯಾರ್ಥಿಗಳ ಭವಿಷ್ಯ ಮತ್ತು ರೈತರ, ನವಯುವ ರೈತರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಒಳ್ಳೆಯದಾಗುತ್ತದೆ ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡಿದ್ದೇವೆ ಹಾಗಾಗಿ ಅದರ ಸಂಪೂರ್ಣ ವರದಿಯನ್ನು ತರಿಸಿಕೊಂಡಿದ್ದು. ಇದೆ ಶೈಕ್ಷಣಿಕ ವರ್ಷದಲ್ಲಿ ತೋಟಗಾರಿಕೆ ಕಾಲೇಜು ಪ್ರಾರಂಭಿಸಲು ಶ್ರಮಿಸಲಾಗುವುದು ಎಂದು ಶಾಸಕ ಜಿ.ಎಸ್‌. ಪಾಟೀಲ ಹೇಳಿದರು.

ಶಾಸಕ ಜಿ.ಎಸ್. ಪಾಟೀಲರು ತೋಟಗಾರಿಕಾ ಕಾಲೇಜ್ ಯೋಜನೆಯ ರೂವಾರಿಗಳಾಗಿದ್ದು, ಅವರು ರೈತಾಪಿ ಕುಟುಂಬದಲ್ಲಿ ಹುಟ್ಟಿದ್ದರಿಂದ ರೈತರ ಕಷ್ಟ ಕಾರ್ಪಣ್ಯಗಳನ್ನು ಅರಿತಿದ್ದು ರೈತರ ಕಷ್ಟಗಳಿಗೆ ನೇರವಾಗಿ ಸಹಾಯ ಮಾಡುತ್ತಾರೆ. ಅವರು ತೋಟಗಾರಿಕಾ ಕಾಲೇಜು ತಂದ ಧೀಮಂತ ನಾಯಕರು ಎಂದು ಹಿರೇವಡ್ಡಟ್ಟಿ ಸಮಾಜ ಸೇವಕ ಅಬ್ದುಲ್‌ಸಾಬ ಕಲಕೇರಿ ಬಣ್ಣಿಸಿದರು.

ಕೆಲ ರಾಜಕಾರಣಿಗಳು ಕೇವಲ ತಮ್ಮ ಆರ್ಥಿಕ ಭದ್ರತೆಗಾಗಿ ರಾಜಕೀಯ ಮಾಡುತ್ತಾರೆ. ಆದರೆ, ಶಾಸಕ ಜಿ.ಎಸ್. ಪಾಟೀಲರು ರಾಜಕೀಯ ಮರೆತು ರೈತರ ಶ್ರೇಯಸ್ಸು, ಅಭಿವೃದ್ಧಿಗಾಗಿ ಶ್ರಮಿಸುತ್ತಾ ಬಂದಿದ್ದಾರೆ. ಈ ಭಾಗದ ತೋಟಗಾರಿಕೆಗೆ ಶಕ್ತಿ ನೀಡುವ ತೋಟಗಾರಿಕಾ ಕಾಲೇಜ್ ತಂದಿರುವುದು ಅವರ ಹೃದಯ ಶ್ರೀಮಂತಿಕೆಗೆ ಸಾಕ್ಷಿಯಾಗಿದೆ ರಾಜ್ಯ ರೈತ ಕೃಷಿ ಪುರಸ್ಕೃತ ಗೋಣಿಬಸಪ್ಪ ಕೊರ್ಲಹಳ್ಳಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ