ಹೊಸಕೋಟೆ: ತಾಲೂಕಿನ ನಂದಗುಡಿ ಹೋಬಳಿಯ ಇಟ್ಟಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಈಸ್ತೂರು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಇರುವ ಮನೆಗೆ ಸಮರ್ಪಕ ರಸ್ತೆ ಇಲ್ಲದೆ ಪರದಾಡುತ್ತಿದ್ದು ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸಮಸ್ಯೆಗೆ ಪರಿಹಾರ ಕೊಡಿಸದೆ ನಿರ್ಲಕ್ಷಿಸಿದ್ದಾರೆಂದು ಗ್ರಾಮದ ನಿವಾಸಿ ಮುನೀಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರತಿದಿನ ಸಂಚರಿವ ವೇಳೆ ಅಕ್ಕ-ಪಕ್ಕದ ಮನೆಯವರು ವಿನಾಕಾರಣವಾಗಿ ಕಿರುಕುಳ ಕೊಡುತ್ತಿದ್ದಾರೆ. ನಮಗೆ ರಸ್ತೆ ನಿರ್ಮಾಣ ಮಾಡಿಕೊಡದಿದ್ದರೆ, ನಾವು ತಾಲೂಕು ಕಚೇರಿ ಎದುರು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೋಟ್.........ಮುನೀಂದ್ರ ಅವರ ಮನೆಯ ರಸ್ತೆ ಸಮಸ್ಯೆ ಬಗ್ಗೆ ದೂರು ಸಲ್ಲಿಸಿದ್ದಾರೆ. ಈಗಾಗಲೇ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿದ್ದಾರೆ. ಚುನಾವಣೆ ಮುಗಿದ ನಂತರ ಮುನೀಂದ್ರ ಅವರ ಮನೆ ಸೇರಿದಂತೆ ಅಕ್ಕ ಪಕ್ಕದ ಮನೆಯವರ ಜಾಗ ಸರ್ವೇ ಮಾಡಿ ರಸ್ತೆಗೆ ಅನುವು ಮಾಡಿಕೊಟ್ಟು ಸಮಸ್ಯೆಗೆ ತ್ವರಿತವಾಗಿ ಪರಿಹಾರ ಕಲ್ಪಿಸುತ್ತೇವೆ.
-ಮುರಳಿ, ಇಟ್ಟಸಂದ್ರ ಗ್ರಾಪಂ ಸದಸ್ಯಫೋಟೋ : 27 ಹೆಚ್ಎಸ್ಕೆ 1
ಹೊಸಕೋಟೆ ತಾಲೂಕಿನ ಈಸ್ತೂರು ನಿವಾಸಿ ಮುನೀಂದ್ರ ಮನೆಗೆ ಹೋಗಲು ರಸ್ತೆ ಇಲ್ಲದೆ ಪರದಾಡುತ್ತಿದ್ದು ಅಧಿಕಾರಿಗಳು ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದ್ದಾರೆ.