ಕಲ್ಮಾಡಿ ಚರ್ಚ್‌ನ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

KannadaprabhaNewsNetwork |  
Published : Aug 15, 2026, 03:45 AM IST
ವೆಲಂಕಣಿ ಆರೋಗ್ಯ ಮಾತೆಯ ಮೂರ್ತಿ ಭವ್ಯ ಮೆರವಣಿಗೆಗೆ ವಂ|ಫ್ರಾಂಕ್ಲಿನ್ ಡಿಸೋಜಾ ಚಾಲನೆನೀಡಿದರು | Kannada Prabha

ಸಾರಾಂಶ

ಮಲ್ಪೆಯ ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ಚರ್ಚ್‌ ನ ವೆಲಂಕಣಿ ಆರೋಗ್ಯ ಮಾತೆಯ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವ ಪ್ರಯುಕ್ತ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ಗುರುವಾರ ಆದಿ ಉಡುಪಿಯಿಂದ ಚರ್ಚ್‌ವರೆಗೆ ಅದ್ದೂರಿಯಾಗಿ ನಡೆಯಿತು.

ಉಡುಪಿ: ಮಲ್ಪೆಯ ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮಾರಿಸ್ ಚರ್ಚ್‌ ನ ವೆಲಂಕಣಿ ಆರೋಗ್ಯ ಮಾತೆಯ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವ ಪ್ರಯುಕ್ತ ವೆಲಂಕಣಿ ಮಾತೆಯ ಮೂರ್ತಿಯ ಮೆರವಣಿಗೆ ಗುರುವಾರ ಆದಿ ಉಡುಪಿಯಿಂದ ಚರ್ಚ್‌ವರೆಗೆ ಅದ್ದೂರಿಯಾಗಿ ನಡೆಯಿತು. ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಗುರುಗಳಾದ ವಂ.ಫ್ರಾಂಕ್ಲಿನ್ ಡಿಸೋಜ ವೆಲಂಕಣಿ ಮಾತೆಯ ಮೂರ್ತಿಯನ್ನು ಆಶೀರ್ವದಿಸಿ ಮೆರವಣಿಗೆಗೆ ಚಾಲನೆ ನೀಡಿದರು.

ವಾರ್ಷಿಕ ಹಬ್ಬಗಳ ಸಂದರ್ಭದಲ್ಲಿ ಚರ್ಚ್ ಗಳ ಪಾಲಕರ ಮಂಜೂಶಾ (ಮೂರ್ತಿ)ಗಳನ್ನು ಭಕ್ತರೊಂದಿಗೆ ಮೆರವಣಿಗೆಯಲ್ಲಿ ಕೊಂಡೊಯ್ದು ಗೌರವ ಸೂಚಿಸುವುದು ಕ್ರೈಸ್ತ ಸಂಪ್ರದಾಯದ ಒಂದು ಭಾಗವಾಗಿದೆ. ವೆಲಂಕಣಿ ಮಾತೆ ಪವಾಡದ ಮಾತೆ ಎಂದು ಜನಜನಿತವಾಗಿದ್ದು, ಆಕೆ ಮೂಲಕ ಯೇಸು ಕ್ರಿಸ್ತರ ಕೃಪಾಶೀರ್ವಾದ ಪ್ರತಿಯೊಬ್ಬರ ಮೇಲೆ ಹರಿದು ಬರಲಿ ಎಂದು ವಂ. ಫ್ರಾಂಕ್ಲಿನ್ ಡಿಸೋಜಾ ಆಶೀರ್ವಚನ ನೀಡಿದರು. ಮೆರವಣಿಗೆಯು ಆದಿ ಉಡುಪಿ ಮಾರ್ಗವಾಗಿ ಆರಂಭಗೊಂಡು ಚರ್ಚಿನ ತನಕ ಕಾಲ್ನಡಿಗೆಯ ಮೂಲಕ ನಡೆಯಿತು. ತದ ನಂತರ ನಡೆದ ಬಲಿಪೂಜೆಯನ್ನು ವಂ.ಫ್ರಾಂಕ್ಲಿನ್ ಡಿಸೋಜ ನೆರವೇರಿಸಿ ಸಂದೇಶ ನೀಡಿದರು. ವೆಲಂಕಣಿ ಮಾತೆಯ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಆ.15ರಂದು ನಡೆಯಲಿದ್ದು, ಬೆಳಗ್ಗೆ 10.30 ಗಂಟೆಗೆ ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ವಂ.ಡಾ. ಲೆಸ್ಲಿ ಕ್ಲಿಫರ್ಡ್ ಡಿಸೋಜಾ ಹಬ್ಬದ ಬಲಿಪೂಜೆ ನೆರೆವೇರಿಸಲಿರುವರು. ಪುಣ್ಯಕ್ಷೇತ್ರದ ರೆಕ್ಟರ್ ವಂ. ಬ್ಯಾಪ್ಟಿಸ್ಟ್ ಮಿನೇಜಸ್, ಚರ್ಚಿನ ಪಾಲನಾ ಮಂಡಳಿ ಉಪಾಧ್ಯಕ್ಷ ನವೀನ್ ಫರ್ನಾಂಡಿಸ್, ಕಾರ್ಯದರ್ಶಿ ಪ್ರೆಸಿಲ್ಲಾ ಆಳ್ವ, ಆಯೋಗಗಳ ಸಂಯೋಜಕ ಡೆನಿಸ್ ಲಸ್ರಾದೊ ಹಾಗೂ ಚರ್ಚಿನ ಮಹೋತ್ಸವ ಆಚರಣಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಚಿವ ನಾಗೇಂದ್ರ ರಾಜೀನಾಮೆಗೆ ಉಡುಪಿ ಬಿಜೆಪಿ ಆಗ್ರಹ
ಕರಾವಳಿಗೆ ಪ್ರತ್ಯೇಕ ನಿಯಮ ರೂಪಿಸಿ: ಗಂಟಿಹೊಳೆ