ದೇವಿಯ ವಾರ್ಷಿಕ ಹಬ್ಬ, ಜಾತ್ರೋತ್ಸವ

KannadaprabhaNewsNetwork |  
Published : May 24, 2026, 02:45 AM IST
ಪೂಜಾ ಕಾರ್ಯಕ್ರಮ ಸಂದರ್ಭ | Kannada Prabha

ಸಾರಾಂಶ

ಕುಶಾಲನಗರ ತಾಲೂಕಿನ ತೊರೆನೂರು ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ದೊಡ್ಡಮ್ಮ ಹಾಗೂ ಶ್ರೀ ಚಿಕ್ಕಮ್ಮ ದೇವಿಯ ವಾರ್ಷಿಕ ಹಬ್ಬ ಹಾಗೂ ಜಾತ್ರೋತ್ಸವ ಶುಕ್ರವಾರ ರಾತ್ರಿ ಶ್ರದ್ಧಾಭಕ್ತಿಯೊಂದಿಗೆ ವಿಜೃಂಭಣೆಯಿಂದ ನೆರವೇರಿತು.

ಕನ್ನಡಪ್ರಭ ವಾರ್ತೆ ಕುಶಾಲನಗರ

ಕುಶಾಲನಗರ ತಾಲೂಕಿನ ತೊರೆನೂರು ಗ್ರಾಮದಲ್ಲಿ ಗ್ರಾಮ ದೇವತೆ ಶ್ರೀ ದೊಡ್ಡಮ್ಮ ಹಾಗೂ ಶ್ರೀ ಚಿಕ್ಕಮ್ಮ ದೇವಿಯ ವಾರ್ಷಿಕ ಹಬ್ಬ ಹಾಗೂ ಜಾತ್ರೋತ್ಸವ ಶುಕ್ರವಾರ ರಾತ್ರಿ ಶ್ರದ್ಧಾಭಕ್ತಿಯೊಂದಿಗೆ ವಿಜೃಂಭಣೆಯಿಂದ ನೆರವೇರಿತು.

ಶ್ರೀ ಬಸವೇಶ್ವರ ದೇವಸ್ಥಾನ ಟ್ರಸ್ಟ್ ವತಿಯಿಂದ ನಡೆದ ಗ್ರಾಮ ದೇವತೆ ಹಬ್ಬ ಹಾಗೂ ಜಾತ್ರಾ ಮಹೋತ್ಸವದಲ್ಲಿ ಸಾವಿರಾರು ಮಂದಿ ಭಾಗಿಯಾಗಿ ದೇವರ ದರ್ಶನ ಪಡೆದರು. ತೊರೆನೂರು ಗ್ರಾಮದ ದೇವಸ್ಥಾನ ಬಳಿಯಿಂದ ರಾತ್ರಿ ಆರಂಭಗೊಂಡ ದೇವರ ಉತ್ಸವ ಮೆರವಣಿಗೆ ಗ್ರಾಮದ ಪ್ರಮುಖ ಬೀದಿಯಲ್ಲಿ ಸಂಚರಿಸಿ ವಿರಕ್ತ ಮಠದ ಆವರಣದಲ್ಲಿರುವ ಗ್ರಾಮ ದೇವತೆಗಳ ಆವರಣಕ್ಕೆ ಶನಿವಾರ ಮುಂಜಾನೆ ತಲುಪಿತು. ಮೆರವಣಿಗೆಯಲ್ಲಿ ಕುಕ್ಕೆಯೊಂದಿಗೆ ಹರಕೆ ಹೊತ್ತ ಭಕ್ತರು ಅಗ್ನಿಕುಂಡ ಹಾಯ್ದು ಭಕ್ತಿಭಾವ ಮೆರೆದರು. ದೇವರಿಗೆ ಹಣ್ಣುತುಪ್ಪ ಸಮರ್ಪಿಸಿದರು. ರಾತ್ರಿ ಅಮ್ಮನವರ ದೇವಸ್ಥಾನದಲ್ಲಿ ಭಕ್ತರಿಗೆ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿತ್ತು.

ವಾರ್ಷಿಕ ಜಾತ್ರೋತ್ಸವ ಅಂಗವಾಗಿ ದೇವಸ್ಥಾನ ಸಮಿತಿ ಸೇರಿದಂತೆ ಗ್ರಾಮದ ವಿವಿಧ ಭಾಗಗಳಿಂದ ಆಗಮಿಸಿದ್ದ ವಿದ್ಯುದ್ದೀಪಗಳಿಂದ ಅಲಂಕರಿಸಿದ್ದ ಉತ್ಸವ ಮಂಟಪಗಳ ಮೆರವಣಿಗೆಯು ಹಬ್ಬಕ್ಕೆ ಮೆರಗು ನೀಡಿತು.ಮೆರವಣಿಗೆಯಲ್ಲಿ ಉತ್ಸವ ಮಂಟಪಗಳು ನೋಡುಗರ ಕಣ್ಮನಗಳನ್ನು ಸೆಳೆದವು. ಮೆರವಣಿಗೆ ಸಂದರ್ಭ ಗ್ರಾಮದ ಬಸ್ ನಿಲ್ದಾಣ ಬಳಿ ಸಿಡಿಸುವ ಬಣ್ಣ ಬಣ್ಣದ ಆಕರ್ಷಕ ಮದ್ದುಗುಂಡುಗಳ ಪ್ರದರ್ಶನ ಹಾಗೂ ಬಾಣ ಬಿರುಸುಗಳ ಚಿತ್ತಾರ ನೋಡುಗರ ಕಣ್ಮನ ಸೆಳೆಯಿತು. ಉತ್ಸವದಲ್ಲಿ ವಿವಿಧ ಭಾಗಗಳಲ್ಲಿ ನೆಲಸಿರುವ ಗ್ರಾಮಸ್ಥರು, ಮೈಸೂರು, ಹಾಸನ ಜಿಲ್ಲೆಗಳ ಗಡಿ ಭಾಗದ ಜನರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಹಬ್ಬದ ವಿವಿಧ ಧಾರ್ಮಿಕ ಕೈಕಂರ್ಯಗಳು ಹಾಗೂ ಉತ್ಸವವು ದೇವಸ್ಥಾನ ಸಮಿತಿ ಅಧ್ಯಕ್ಷ ಟಿ.ಬಿ. ಜಗದೀಶ್, ಉಪಾಧ್ಯಕ್ಷ ಟಿ.ಬಿ. ಚಿದಾನಂದ, ಕಾರ್ಯದರ್ಶಿ ಟಿ.ಎಲ್. ಮಹೇಶ್, ಪ್ರಮುಖರಾದ ಟಿ.ಡಿ. ಈಶ್ವರ್, ಟಿ.ಜಿ. ಶಿವಣ್ಣ, ಎಚ್.ಬಿ. ಚಂದ್ರಪ್ಪ, ಟಿ.ಟಿ. ಗೋವಿಂದ, ಟಿ.ಸಿ. ಶಿವಕುಮಾರ್, ತ್ರಿಣೇಶ್, ಟಿ.ಡಿ. ಶಿವರಾಜ್, ಮಂಜುನಾಥ್ ಹಾಗೂ ಸಮಿತಿ ಪದಾಧಿಕಾರಿಗಳು, ಸದಸ್ಯರ ನೇತೃತ್ವದಲ್ಲಿ ನಡೆಯಿತು.

ದೇವಸ್ಥಾನದಲ್ಲಿ ವಿವಿಧ ಪೂಜಾ ಕೈಂಕರ್ಯಗಳು ದೇವಾಲಯದ ಅರ್ಚಕರಾದ ಟಿ.ಎಲ್. ಸೋಮಶೇಖರ್ ಹಾಗೂ ಟಿ.ಎಚ್. ಸಂಜೀವಮೂರ್ತಿ ನೇತೃತ್ವದಲ್ಲಿ ನಡೆದವು.

ವಿರಕ್ತ ಮಠದ ಆವರಣದಲ್ಲಿ‌ ದೇವಸ್ಥಾನ ಬಳಿ ದಾನಿ ಟಿ.ಜಿ. ಶಿವಮೂರ್ತಿ ಕುಟುಂಬದ ವತಿಯಿಂದ ಪ್ರಸಾದ ವಿನಿಯೋಗ ಮಾಡಲಾಯಿತು.ಕ್ರೀಡೋತ್ಸವ:

ಗ್ರಾಮ ದೇವತೆ ಅಂಗವಾಗಿ ಕ್ರೀಡಾ ಸಮಿತಿ ವತಿಯಿಂದ ಶನಿವಾರ ಶಾಲಾ ಮೈದಾನದಲ್ಲಿ ಗುಡ್ಡಗಾಡು ಓಟ, ಕಬಡ್ಡಿ, ವಾಲಿಬಾಲ್, ಥ್ರೋಬಾಲ್, ಕ್ರಿಕೆಟ್ ಟೂರ್ನಿ ಸೇರಿದಂತೆ ವಿವಿಧ ಕ್ರೀಡೆಗಳನ್ನು ಏರ್ಪಡಿಸಲಾಗಿತ್ತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬ್ರಹ್ಮಾವರ ಜಿ ಎಮ್ ಶಾಲೆಯಲ್ಲಿ ರಾಜ್ಯ ತ್ರೋಬಾಲ್ ಆಯ್ಕೆ ಶಿಬಿರ
ಮೂಲ್ಕಿ: ನೂತನ ಪ್ಲಾಟ್‌ಫಾರ್ಮ್ ಲೋಕಾರ್ಪಣೆಗೆ ಸಿದ್ಧ