ವಾಹನ ಚಾಲಕರು, ಮೋಟರ್ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ

KannadaprabhaNewsNetwork |  
Published : Feb 16, 2025, 01:48 AM IST
ವಾಹನ ಚಾಲಕರು ಮತ್ತು ಮೋಟರ್ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ-ಸಹಕಾರ ಸಂಘ ಸ್ಥಾಪನೆಗೆ ನಿರ್ಣಯ | Kannada Prabha

ಸಾರಾಂಶ

ವಾಹನ ಚಾಲಕರು ಮತ್ತು ಮೋಟಾರ್‌ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ ನಡೆಯಿತು. ಗ್ರೂಪ್‌ ಇನ್ಸೂರೆನ್ಸ್‌ ಮಾಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಕನ್ನಡಪ್ರಭವಾರ್ತೆ ಸೋಮವಾರಪೇಟೆ

ಇಲ್ಲಿನ ವಾಹನ ಚಾಲಕರು ಮತ್ತು ಮೋಟರ್ ಕೆಲಸಗಾರರ ಸಂಘದ ವಾರ್ಷಿಕ ಮಹಾಸಭೆ ಬಾಲಕೃಷ್ಣ ಪೂಜಾರಿ ಅಧ್ಯಕ್ಷತೆಯಲ್ಲಿ ಮಾನಸ ಸಭಾಂಗಣದಲ್ಲಿ ಇತ್ತೀಚೆಗೆ ನಡೆಯಿತು.

ಸಭೆಯಲ್ಲಿ ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾನಿಧಿ ಹಾಗೂ ಸದಸ್ಯರಿಗೆ ಗ್ರೂಪ್ ಇನ್ಸೂರೆನ್ಸ್ ಮಾಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.

ಸಂಘದ ಈಗಾಗಲೇ ಸ್ವಂತ ಕಟ್ಟಡ ಹೊಂದಿದ್ದು ಮುಂದಿನ ದಿನಗಳಲ್ಲಿ ಸಂಘದ ಹೆಸರಿನಲ್ಲಿ ಸಹಕಾರ ಸಂಘ ನಿರ್ಮಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ಸಂಘದ ಸದಸ್ಯರ ಮರಣ ನಿಧಿ ರೂ.15000 ಹಾಗೂ ಸಂಘದ ಸದಸ್ಯರಿಗೆ ವೈದ್ಯಕೀಯ ಚಿಕಿತ್ಸೆಗೆ ರೂ. 3000 ನೀಡುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು. ನಂತರ ಸಂಘದ ಅಭಿವೃದ್ಧಿಯ ಬಗ್ಗೆ ಚರ್ಚಿಸಲಾಯಿತು.

ಸಂಘದ ಉಪಾಧ್ಯಕ್ಷ ರಂಗಸ್ವಾಮಿ, ಕಾರ್ಯದರ್ಶಿ ಮಣಿ ಕುಶಾಲಪ್ಪ, ಸಹ ಕಾರ್ಯದರ್ಶಿ ಕಿರಣ, ಖಜಾಂಜಿ ಡೊಮಿನಿಕ್, ಸಲಹೆಗಾರರಾದ ಎ.ಪಿ. ವೀರರಾಜು, ಟಿ.ಕೆ. ರಮೇಶ್, ವಿನ್ಸಿ ಪಿಂಟೊ, ವಿನ್ಸಿ ಡಿಸೋಜಾ, ಹಾಲಪ್ಪ, ಸುಭಾಷ್ ತಿಮ್ಮಯ್ಯ, ಚಕ್ರವರ್ತಿ ಸುರೇಶ್, ಜನಾರ್ಧನ್ ಪ್ರಭು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ