ಕನ್ನಡಪ್ರಭ ವಾರ್ತೆ ಕುಶಾಲನಗರ
ಕಾವೇರಿ ನದಿಯಿಂದ ದೇವಿಯ ವಿಗ್ರಹದೊಂದಿಗೆ ಕಳಸ ತಂದು ಪ್ರತಿಷ್ಠಾಪನೆ ಮಾಡಲಾಯಿತು. ನಂತರ ದೇವಿಯ ಸನ್ನಿಧಿಯಲ್ಲಿ ಗಣಪತಿ ಹೋಮ ತೀರ್ಥಪ್ರಸಾದ ವಿನಿಯೋಗ ನಡೆಯಿತು.
ಗುರುವಾರ ಭಕ್ತಾದಿಗಳಿಗೆ ಅನ್ನದಾನ ಕಾರ್ಯಕ್ರಮ ನಡೆಯಿತು.-----------------------------------------
ಬಸವೇಶ್ವರ ದೇವಾಲಯದಲ್ಲಿ ಗೋ ಪೂಜೆಕನ್ನಡಪ್ರಭವಾರ್ತೆ, ಸೋಮವಾರಪೇಟೆವೀರಶೈವ ಸಮಾಜದ ವತಿಯಿಂದ ಶ್ರೀ ಬಸವೇಶ್ವರ ದೇವಾಲಯದಲ್ಲಿ ದೀಪಾವಳಿಯ ಬಲಿಪಾಡ್ಯಮಿ ದಿನ ಗೋ ಪೂಜೆ ನಡೆಯಿತು.
ದೇವಾಲಯದ ಅರ್ಚಕರಾದ ಶೇಖಯ್ಯ ಪೂಜಾರ್ ಪೂಜಾ ಕಾರ್ಯವನ್ನು ನಡೆಸಿದರು. ಈ ಸಂದರ್ಭ ಸಮಾಜದ ಯಜಮಾನರಾದ ಬಿ.ಪಿ. ಶಿವಕುಮಾರ್, ಶೆಟ್ರು ಬಿ.ಆರ್. ಮೃತ್ಯುಂಜಯ, ಕಾರ್ಯದರ್ಶಿ ಸಿ.ಸಿ. ನಾಗರಾಜ್ ಹಾಗೂ ಆಡಳಿತ ಮಂಡಳಿ ಸದಸ್ಯರಾದ ಕೆ.ಎನ್. ನಾಗೇಶ್, ರಮೇಶ್, ಸಮಾಜ ಬಾಂಧವರಾದ ಸರ್ವಜ್ಞ ಮೂರ್ತಿ, ಪೂರ್ಣಿಮಾ, ನಳಿನಿ, ನವನೇಶ್, ಯಶೋಧ, ವೇದಾವತಿ ಇದ್ದರು.