ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅತಿಮುಖ್ಯ. ಕ್ರೀಡಾಂಗಣವು ಮಕ್ಕಳಿಗೆ ಗೆಲುವು ಮತ್ತು ಸೋಲಿನ ಜೀವನದ ಪಾಠ ಕಲಿಸುತ್ತದೆ. ನಮ್ಮ ದೇಶದ ಧ್ಯಾನ್ಚಂದ್, ಸಚಿನ್, ಪಿ.ವಿ.ಸಿಂಧು ಅಂತಹ ಕ್ರೀಡಾಪಟುಗಳೆ ನನ್ನ ಶಾಲೆಯ ಮಕ್ಕಳ ಸಾಧನೆಗೆ ಸ್ಪೂರ್ತಿ ಎಂದು ಸಾರಂಗ ಅಕಾಡೆಮಿ ಅಧ್ಯಕ್ಷ ಅಜಯ್ಕುಮಾರ್ ತಿಳಿಸಿದರು.
ಕನ್ನಡಪ್ರಭ ವಾರ್ತೆ ಕೊರಟಗೆರೆ
ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಅತಿಮುಖ್ಯ. ಕ್ರೀಡಾಂಗಣವು ಮಕ್ಕಳಿಗೆ ಗೆಲುವು ಮತ್ತು ಸೋಲಿನ ಜೀವನದ ಪಾಠ ಕಲಿಸುತ್ತದೆ. ನಮ್ಮ ದೇಶದ ಧ್ಯಾನ್ಚಂದ್, ಸಚಿನ್, ಪಿ.ವಿ.ಸಿಂಧು ಅಂತಹ ಕ್ರೀಡಾಪಟುಗಳೆ ನನ್ನ ಶಾಲೆಯ ಮಕ್ಕಳ ಸಾಧನೆಗೆ ಸ್ಪೂರ್ತಿ ಎಂದು ಸಾರಂಗ ಅಕಾಡೆಮಿ ಅಧ್ಯಕ್ಷ ಅಜಯ್ಕುಮಾರ್ ತಿಳಿಸಿದರು.ಪಟ್ಟಣದ ಶ್ರೀರಾಘವೇಂದ್ರ ಇಂಟರ್ ನ್ಯಾಷನಲ್ ಸ್ಕೂಲ್ನಲ್ಲಿ ವಾರ್ಷಿಕ ಕ್ರೀಡಾ ಕಾರ್ಯಕ್ರಮದಡಿ ಮಂಗಳವಾರ ಏರ್ಪಡಿಸಲಾಗಿದ್ದ ರಾಘಕ್ರೀಡೆ-೨೦೨೫ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿಗೆ ಶಿಕ್ಷಕರ ಜೊತೆ ಪೋಷಕರ ಪಾತ್ರ ಬಹುಮುಖ್ಯ. ಪೋಷಕರು ಮಕ್ಕಳ ಶೈಕ್ಷಣಿಕ ಜೀವನದ ಬಗ್ಗೆ ಕಡ್ಡಾಯವಾಗಿ ಶಾಲೆಗೆ ಬೇಟಿ ನೀಡಿ ಪರಿಶೀಲನೆ ನಡೆಸಬೇಕಿದೆ ಎಂದರು. ರಾಘವೇಂದ್ರ ಶಾಲೆ ಆಡಳಿತ ಅಧಿಕಾರಿ ಕೆ.ಎನ್.ರುದ್ರೇಶ್ ಮಾತನಾಡಿ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆ ಕ್ರೀಡಾ ಚಟುವಟಿಕೆ ಬಹುಮುಖ್ಯ. ನಮ್ಮ ಶಾಲೆಯಲ್ಲಿ ಚಿಣ್ಣರಸಂತೆ, ಪುಡ್ಪೇಸ್ಟ್, ಜಂಗಲ್ ಡೇ, ರಾಘಕ್ರೀಡೆಗೆ ಪ್ರಾಮುಖ್ಯತೆ ನೀಡಲಾಗಿದೆ. ೯ಮತ್ತು ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲೇ ಸಿಇಟಿ, ನೀಟ್ ಮತ್ತು ಜೆಇಇ ತರಬೇತಿ ನೀಡಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡುತ್ತಿದ್ದೇವೆ ಎಂದರು.ರಾಘವೇಂದ್ರ ಇಂಟರ್ ನ್ಯಾಷನಲ್ ಶಾಲೆಯ ಪ್ರಾಂಶುಪಾಲೆ ಆರ್.ಸಿ.ಜಿನ್ನಿ ಮಾತನಾಡಿ ನಮ್ಮ ಶಾಲೆಯ ಎಲ್ಲಾ ಕಾರ್ಯಕ್ರಮಗಳಿಗೆ ಆಡಳಿತ ಮಂಡಳಿ ಸಹಕಾರ ನೀಡಿದೆ. ಕ್ರೀಡಾಕೂಟದಲ್ಲಿ ಪಾಲ್ಗೋಂಡ ಮಕ್ಕಳ ಆತ್ಮಸ್ಥೆರ್ಯ ಮತ್ತು ಸಡಗರ ಮುಗಿಲುಮುಟ್ಟಿದೆ. ರಾಘಕ್ರೀಡೆಯಲ್ಲಿ ವಿಜೇತರಾದ ಪೋಷಕರು ಮತ್ತು ವಿದ್ಯಾರ್ಥಿಗಳಿಗೆ ಶುಭವಾಗಲಿ ಎಂದರು.ವಿದ್ಯಾರ್ಥಿಗಳ ೪ತಂಡ ೧೫ ಆಟ.ವಿಶ್ವದ ಶ್ರೇಷ್ಟ ಹಾಕಿ ಆಟಗಾರ ಧ್ಯಾನ್ಚಂದ್, ಭಾರತದ ಕ್ರಾಂತಿಕಾರಿ ಸ್ವಾತಂತ್ರ ಹೋರಾಟಗಾರ ಚಂದ್ರಶೇಖರ್ ಆಜಾದ್, ದಿನದಲಿತರ ಶಿಕ್ಷಣದ ಹೋರಾಟಗಾರ್ತಿ ಜ್ಯೋತಿಬಾಪುಲೆ ರಾಷ್ಟ್ರಪತಿ ಮತ್ತು ಕ್ಷಿಪಣಿ ಮನುಷ್ಯ ಅಬ್ದುಲ್ ಕಲಾಂ ಹೆಸರಿನ ೪ತಂಡ ಮಾಡಿ ವಿದ್ಯಾರ್ಥಿಗಳಿಗೆ ೧೫ಕ್ಕೂ ಅಧಿಕ ಕ್ರೀಡಾ ಚಟುವಟಿಕೆ ಏರ್ಪಡಿಸಲಾಗಿತ್ತು. ಅತಿಹೆಚ್ಚು ಪದಕ ಪಡೆದ ಧ್ಯಾನ್ಚಂದ್ ತಂಡದ ವಿದ್ಯಾರ್ಥಿಗಳಿಗೆ ಸಾರಂಗ ಅಕಾಡೆಮಿಯ ಅಧ್ಯಕ್ಷ ಅಜಯ್ಕುಮಾರ್ ಮತ್ತು ಆಡಳಿತ ಅಧಿಕಾರಿ ಕೆ.ಎನ್.ರುದ್ರೇಶ್ ೧೫೦ಕ್ಕೂ ಅಧಿಕ ಮಕ್ಕಳಿಗೆ ಪದಕ ಮತ್ತು ಪ್ರಮಾಣ ಪತ್ರ ವಿತರಣೆ ಮಾಡಿದರು.ಮಕ್ಕಳ ಜೊತೆ ಪೋಷಕರಿಗೆ ಕ್ರೀಡೆ ರಾಘವೇಂದ್ರ ಶಾಲೆಯ ಪ್ರೀ ನರ್ಸರಿ ಮಕ್ಕಳಿಗೆ ಮನರಂಜನಾ ಆಟ, ೧ರಿಂದ ೪ನೇ ತರಗತಿಯ ಮಕ್ಕಳಿಗೆ ಅಂಡರ್ ಚೇರ್, ಕಪ್ ಅಂಡ್ ಬಾಲ್, ಬಾಲ್ ಅಂಡ್ ಸ್ಪೂನ್, ಕಪ್ ಟವರ್ ಗೇಮ್ ಆಟ ಮತ್ತು ೫ರಿಂದ ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ರನ್ನಿಂಗ್ರೇಸ್, ಕ್ರಿಕೇಟ್, ವಾಲಿಬಾಲ್, ಥ್ರೋಬಾಲ್, ಗುಂಡು ಎಸೆತ, ಚಕ್ರೆಸೆತ ಆಟ, ಪೋಷಕರಿಗೆ ಮ್ಯೂಸಿಕಲ್ ಚೇರ್, ಕಪಲ್ಗೇಮ್ಸ್ ಮತ್ತು ಇತರೇ ಕ್ರೀಡಾ ಚಟುವಟಿಕೆ ಏರ್ಪಡಿಸಲಾಗಿತ್ತು.ಕಾರ್ಯಕ್ರಮದಲ್ಲಿ ರಾಘವೇಂದ್ರ ಶಾಲೆಯ ವ್ಯವಸ್ಥಾಪಕ ರವಿಕುಮಾರ್, ಆಡಳಿತ ಸಂಯೋಜಕ ಕಾವ್ಯಶ್ರೀ.ಡಿ, ಉಪಪ್ರಾಂಶುಪಾಲೆ ಷಮೀನ ಖಾನಂ, ದೈಹಿಕ ಶಿಕ್ಷಕ ವೆಂಕಟೇಶ್, ನೂರಾರು ಜನ ಪೋಷಕರು, ವಿದ್ಯಾರ್ಥಿಗಳು ಸೇರಿದಂತೆ ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.