ಕನ್ನಡಪ್ರಭ ವಾರ್ತೆ ಬೆಂಗಳೂರು
ಸಿಆರ್ಪಿಸಿ ಸೆಕ್ಷನ್ 156(3) ಅಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿ ಮುಂದಿನ ವಿಚಾರಣೆಯನ್ನು ಮುಂಬರುವ ಅ.24ಕ್ಕೆ ಮುಂದೂಡಿದರು.
ನ್ಯಾಯಾಲಯದ ಆದೇಶ ತಲುಪಿದ ನಂತರ ಲೋಕಾಯುಕ್ತ ಪೊಲೀಸರು ಪ್ರಕರಣದ ತನಿಖೆ ಕೈಗೆತ್ತಿಗೊಳ್ಳಲಿದ್ದಾರೆ. ಗುರುವಾರ ಮೈಸೂರು ಲೋಕಾಯುಕ್ತ ಪೊಲೀಸರ ಕೈಗೆ ಆದೇಶ ತಲುಪುವ ನಿರೀಕ್ಷೆ ಇದೆ. ಹೀಗಾಗಿ ಗುರುವಾರ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ನಿರೀಕ್ಷೆ ಇದೆ.ಮುಡಾದಲ್ಲಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಪರಿಹಾರ ರೂಪದಲ್ಲಿ ಅಕ್ರಮವಾಗಿ ಸುಮಾರು 56 ಕೋಟಿ ರು. ಮೌಲ್ಯದ 14 ನಿವೇಶನಗಳನ್ನು ಮಂಜೂರು ಮಾಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಆರೋಪಿಸಿ ನ್ಯಾಯಾಲಯಕ್ಕೆ ಖಾಸಗಿ ದೂರು ನೀಡಿದ್ದರು. ಇದರ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ತೀರ್ಪನ್ನು ಕಾಯ್ದಿರಿಸಿತ್ತು. ಸಿದ್ದರಾಮಯ್ಯ ಅವರು ಹೈಕೋರ್ಟ್ ಮೊರೆ ಹೋಗಿದ್ದರಿಂದ ಆ ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ತೀರ್ಪನ್ನು ಪ್ರಕಟಿಸಿರಲಿಲ್ಲ. ಮಂಗಳವಾರ ಹೈಕೋರ್ಟ್ ತನಿಖೆಗೆ ಅನುಮತಿ ನೀಡಿದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಿ ತನಿಖೆಗೆ ಆದೇಶಿಸಿದೆ.ದೂರುದಾರರ ಪರವಾಗಿ ವಕೀಲ ಲಕ್ಷ್ಮೀ ಅಯ್ಯಂಗಾರ್ ವಾದ ಮಂಡಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ನೀಡಿರುವ ಪೂರ್ವಾನುಮತಿ ಹಾಗೂ ಅದನ್ನು ಪ್ರಶ್ನಿಸಿ ಸಿದ್ದರಾಮಯ್ಯನವರು ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ಮತ್ತು ಈ ಕುರಿತು ಹೈಕೋರ್ಟ್ ನೀಡಿರುವ ತೀರ್ಪನ್ನು ನ್ಯಾಯಾಲಯದ ಗಮನಕ್ಕೆ ತಂದರು.ಈ ವೇಳೆ ನ್ಯಾಯಾಧೀಶರು ಕಾನೂನು ಪ್ರಕ್ರಿಯೆಯನ್ನು ಹೊಸದಾಗಿ ಜಾರಿಯಾಗಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ಅಡಿ ಅಥವಾ ಈ ಮೊದಲು ಜಾರಿಯಲ್ಲಿದ್ದ ಕೋಡ್ ಆಫ್ ಕ್ರಿಮಿನಲ್ ಪ್ರೊಸಿಸರ್(ಸಿಆರ್ಪಿಸಿ) ಅಡಿ ಮುಂದುವರೆಸಬೇಕೆ ಎಂಬ ಪ್ರಶ್ನೆಯನ್ನು ಮುಂದಿಟ್ಟರು. ಈ ವೇಳೆ ಅರ್ಜಿದಾರರ ಪರ ವಕೀಲರು, ಹೊಸದಾಗಿ ಜಾರಿಯಾಗಿರುವ ಬಿಎನ್ಎಸ್ಎಸ್ ಅಡಿಯೇ ಕಾನೂನು ಪ್ರಕ್ರಿಯೆಗಳಿಗೆ ಆದೇಶ ನೀಡಬೇಕು ಎಂದು ಮನವಿ ಮಾಡಿದರು. ಒಂದು ವೇಳೆ ವಿಚಾರಣೆ ವೇಳೆ ಕಾನೂನಿನ ಸಂಘರ್ಷ ಎದುರಾದರೆ ಪದ್ಧತಿಯನ್ನು ಬದಲಾವಣೆ ಮಾಡಿಕೊಳ್ಳಲು ಅವಕಾಶವಿದೆ. ಸದ್ಯಕ್ಕೆ ಬಿಎನ್ಎಸ್ಎಸ್ ಅಡಿಯೇ ಕಾನೂನು ಪ್ರಕ್ರಿಯೆಗಳಿಗೆ ಸೂಚನೆ ನೀಡಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಈ ವೇಳೆ ನ್ಯಾಯಾಧೀಶರು ಕಲಾಪವನ್ನು ಕೆಲಕಾಲ ಮುಂದೂಡಿದರು.
==
ಯಾವ ಸೆಕ್ಷನ್ನಡಿ ತನಿಖೆಗೆ ಆದೇಶ?- ಸಿಆರ್ಪಿಸಿ ಸೆಕ್ಷನ್ 156(3) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಕೋರ್ಟ್ ಸೂಚನೆ- ಪ್ರಾಥಮಿಕ ತನಿಖೆ ಸಂಬಂಧ ತನಿಖೆಗೆ ಪೊಲೀಸರಿಗೆ ಆದೇಶ ನೀಡಲು ಈ ಸೆಕ್ಷನ್ನಡಿ ಅಧಿಕಾರವಿದೆ- ದೂರಿನ ಸತ್ಯಾಸತ್ಯತೆ ತಿಳಿಯಲು ಈ ಸೆಕ್ಷನ್ ಅಡಿ ನ್ಯಾಯಾಲಯ ತನಿಖೆಗೆ ಆದೇಶಿಸಬಹುದು- ಪ್ರಕರಣಕ್ಕೆ ಸಂಬಂಧಿಸಿದ ಸಾಂದರ್ಭಿಕ ಸಂಗತಿಗಳನ್ನು ಆಧರಿಸಿ ತನಿಖೆಗೆ ಆದೇಶ ನೀಡಲಾಗುತ್ತೆ