ಕನ್ನಡಪ್ರಭ ವಾರ್ತೆ ಮಧುಗಿರಿ
ಶನಿವಾರ ಮಧುಗಿರಿ ಮಾಲಿಮರಿಯಪ್ಪ ರಂಗಮಂದಿರದಲ್ಲಿ 10 ತಾಲೂಕುಗಳಿಂದ ಆಯ್ದ ವಿವಿಧ ಸಂಘಟನೆಗಳಿಂದ ಏರ್ಪಡಿಸಿದ್ದ ಎರಡು ದಿನಗಳ ಕಾಲ ನಡೆಯುವ 8ನೇ ಸಿಐಟಿಯು ತುಮಕೂರು ಜಿಲ್ಲಾ ಸಮ್ಮೇಳನದ ಬಹಿರಂಗ ಸಭೆಗೆ ಚಾಲನೆ ನೀಡಿ ಮಾತನಾಡಿದರು.
ಶ್ರಮಜೀವಿಗಳ ಸಹಕಾರವಿಲ್ಲದೆ ಯಾವ ವರ್ಗದವರು ತಮ್ಮ ಕೆಲಸ ಸಾಧಿಸಲು ಸಾಧ್ಯವಿಲ್ಲ. ಬಂಡವಾಳ ಶಾಹಿಗಳು ಕಾರ್ಮಿಕರ ಅವಶ್ಯಕತೆ ಇಲ್ಲವೆಂದು ನಿರಾಕರಿಸುತ್ತಿದ್ದು, ಸ್ವಯಂಘೋಷಿತ ಪ್ರಭುಗಳಾಗಲು ಹೊರಟಿದ್ದಾರೆ. ಸರ್ಕಾರಗಳು ತಮ್ಮ ಕಾರ್ಯ ಯಶಸ್ವಿಗೊಳಿಸಲು ಖಾಯಂ ಹೊರಗುತ್ತಿಗೆ ನೌಕರರನ್ನು ಬಳಸಿಕೊಳ್ಳುತ್ತಿದ್ದು, ಅವರ ಬದುಕಿನ ಸೇವಾ ಭದ್ರತೆಗೆ ಗಮನ ಹರಿಸದೆ ದುಡಿಸಿಕೊಳ್ಳುತ್ತಿರುವುದು ಯಾವ ನ್ಯಾಯ.? ಶೇ.70ರಷ್ಟು ಮಂದಿ ದುಡಿವ ಕೈಗಳಿಗೆ ಉದ್ಯೋಗವಿಲ್ಲ, ಅತಂತ್ರ ಸ್ಥಿತಿಯಲ್ಲಿ 20 ವರ್ಷ ತುಂಬಿದರು ಬಿಸಿಯೂಟ ನೌಕರರಿಗೆ 5 ಸಾವಿರ ವೇತನ ನೀಡುತ್ತಿಲ್ಲ, 50 ವರ್ಷ ದುಡಿದರು ಅಂಗನವಾಡಿ ನೌಕರರಿಗೆ 13 ಸಾವಿರ ವೇತನ ದಾಟಿಲ್ಲ, ಖಾಯಂ, ಗ್ರಾಚ್ಯುಟಿ ಇಲ್ಲ, ಸಮಾನ ಕೆಲಸಕ್ಕೆ ಸಮಾನ ವೇತನ ನೀಡದೇ ಕೈ ಚಲ್ಲಿವೆ, ಖಾಯಂ ಸ್ವರೂಪದ ಉದ್ಯೋಗಗಳು ಇಂದು ಬೇರೆ ಸ್ವರೂಪ ಪಡೆಯುತ್ತಿವೆ ಎಂದು ಸರ್ಕಾರಗಳ ಕಾರ್ಯ ವೈಖರಿ ವಿರುದ್ಧ ಕಿಡಿಕಾರಿದರು.ಜಿಲ್ಲಾಧ್ಯಕ್ಷ ಸೈಯದ್ ಮುಜೀಬ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರಗಳು ನಮ್ಮ ಬೇಡಿಕೆಗಳನ್ನು ಕೇಳಿಸಿಕೊಳ್ಳದೆ ಕಿವುಡತನ ತೋರುತ್ತಿವೆ.ಇ ದಕ್ಕಾಗಿಯೇ ನಮ್ಮಲ್ಲಿ ಒಗ್ಗಟ್ಟು-ಐಕ್ಯತೆ ಬೇಕು ಮಧುಗಿರಿ. ಪಾವಗಡ ಕೊರಟಗೆರೆ ಮತ್ತು ಶಿರಾ ತಾಲೂಕುಗಳು ಅತ್ಯಂತ ಬರಪೀಡಿತ ಪ್ರದೇಶಗಳಾಗಿವೆ. ಇಲ್ಲಿಗೆ ಏಕೆ ದೊಡ್ಡ ಪ್ರಮಾಣದ ಗಾರ್ಮೆಂಟ್ಸಗಳು ಬರುತ್ತಿಲ್ಲ,ಬೆಂಗಳೂರಲ್ಲೇ ಏಕೆ ಕೇಂದ್ರಿಕೃತವಾಗಿವೆ. ಈ ತಾಲೂಕುಗಳಿಂದ ದೊಡ್ಡ ಸಂಖ್ಯೆಯ ಹೆಣ್ಣುಮಕ್ಕಳು ಉದ್ಯೋಗ ಅರಸಿ ನಗರಗಳಿಗೆ ಹೋಗುತ್ತಿದ್ದಾರೆ. ಕೇಂದ್ರಕೃತ ವ್ಯವಸ್ಥೆಯನ್ನು ವೀಕೇಂದ್ರಿಕರಣಗೊಳಿಸಲು ಗಟ್ಟಿ ಹೋರಾಟಕ್ಕೆ ಸಜ್ಜಾಗಬೇಕು ಎಂದರು.
10 ತಾಲೂಕುಗಳಿಂದ ಆಗಮಿಸಿದ್ದ ಮಹಿಳೆಯರು ಇಲ್ಲಿನ ಖಾಸಗಿ ಬಸ್ ನಿಲ್ದಾಣದಲ್ಲಿ ಸಮಾವೇಶಗೊಂಡರು.ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ಶಂಕರಪ್ಪ ರ್ಯಾಲಿಗೆ ಚಾಲನೆ ನೀಡಿದರು. ನಂತರ ಎಲ್ಲರೂ ಪಟ್ಟಣದ ಪ್ರಮುಖ ಬೀದಿಗಳಲ್ಲಿ ರ್ಯಾಲಿ ನಡೆಸುವ ಮೂಲಕ ವೇದಿಕೆಗೆ ಬಂದರು.