ಕನ್ನಡಪ್ರಭ ವಾರ್ತೆ ಸೊರಬ
ಪಟ್ಟಣದ ದಂಡಾವತಿ ಬ್ಲಾಕ್ನ ಆಲೇಕಲ್ ಸಭಾಂಗಣದಲ್ಲಿ ತಾಲೂಕು ಜೆಡಿಎಸ್ ಮುಖಂಡರ ಸಭೆ ನಡೆಸಿ ಅವರು ಮಾತನಾಡಿದರು. ಅಧಿಕಾರದ ದಾಹದಿಂದಾಗಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿ, ಈಗ ಅನುಷ್ಠಾನಕ್ಕೆ ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರ ಆರ್ಥಿಕ ಸಮಸ್ಯೆಗಳಿಂದ ತೊಳಲಾಡುತ್ತಿದೆ. ಈ ಕಾರಣದಿಂದ ಮುಂದಿನ ದಿನಗಳಲ್ಲಿ ಗ್ಯಾರಂಟಿ ಯೋಜನೆಗಳು ಸಂಪೂರ್ಣ ಹಳ್ಳ ಹಿಡಿಯಲಿವೆ ಎಂದರು.
ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದಾಗ ತಾಲೂಕಿನ ಮೂಡಿ, ಮೂಗೂರು ಏತ ನೀರಾವರಿ ಯೋಜನೆಗೆ ₹400 ಕೋಟಿ ಅನುದಾನ ನೀಡಿದ ಪರಿಣಾಮ ಯೋಜನೆ ಯಶಸ್ವಿಗೊಂಡಿದೆ. ಅನಂತರ ತಾಲೂಕಿನಲ್ಲಿ ಯಾವುದೇ ನೀರಾವರಿ ಯೋಜನೆಗಳು ಅನುಷ್ಠಾನಗೊಳ್ಳದಿರುವುದು ಸಚಿವ ಮಧು ಬಂಗಾರಪ್ಪ ಅವರಿಗೆ ರೈತರ ಮೇಲಿರುವ ಕಾಳಜಿ ಏನು ಎನ್ನುವುದನ್ನು ಎತ್ತಿ ತೋರಿಸುತ್ತದೆ ಎಂದು ಟೀಕಿಸಿದರು.ಗ್ಯಾರಂಟಿ ಯೋಜನೆಗಳ ಜಾರಿಯಲ್ಲಿ ಗುಂಡಿ ಬಿದ್ದಿರುವ ರಸ್ತೆಗೆ ದುರಸ್ತಿ ಮಾಡಲು ಸಹ ಸಾಧ್ಯವಾಗಿಲ್ಲ. ಅಭಿವೃದ್ಧಿ ಎನ್ನುವುದು ಮರೀಚಿಕೆಯಾಗಿದ್ದು, ಚುನಾವಣಾ ಸಮಯದಲ್ಲಿ ರೈತರ ಬಗೆಗಿನ ಕಾಳಜಿ ಮತ್ತು ಅಭಿವೃದ್ಧಿ ಮಂತ್ರ ಜಪಿಸಿ ಗೆಲುವು ಸಾಧಿಸಿದ ಮಧು ಬಂಗಾರಪ್ಪ ತಾಲೂಕನ್ನು ಅಭಿವೃದ್ಧಿ ಪಥದೆಡೆಗೆ ಸಾಗಿಸಲು ವಿಫಲರಾಗಿದ್ದಾರೆ ಎಂದು ಆರೋಪಿಸಿದ ಅವರು,
ಆಮ್ ಆದ್ಮಿ ಪಕ್ಷದ ಮುಖಂಡ ಓಂ ಪಿಕಲ್ಸ್ ಗಣೇಶ ತಮ್ಮ ಬೆಂಬಲಿಗರೊಂದಿಗೆ ಕೆ.ಅಜ್ಜಪ್ಪ ಅವರ ಮುಖಂಡತ್ವದಲ್ಲಿ ಜೆಡಿಎಸ್ಗೆ ಸೇರ್ಪಡೆಗೊಂಡರು.
- - - -31ಕೆಪಿಸೊರಬ01:
ಸೊರಬ ಪಟ್ಟಣದ ಆಲೇಕಲ್ ಸಭಾಂಗಣದಲ್ಲಿ ತಾಲೂಕು ಜೆಡಿಎಸ್ ಮುಖಂಡರ ಸಭೆಯಲ್ಲಿ ಪಕ್ಷದ ಹಿರಿಯ ಮುಖಂಡ ಕೆ. ಅಜ್ಜಪ್ಪ ಮಾತನಾಡಿದರು.