ಭಯೋತ್ಪಾದನಾ ವಿರೋಧಿ ದಿನದ ಪ್ರಮಾಣ ವಚನ

KannadaprabhaNewsNetwork |  
Published : May 24, 2025, 12:44 AM IST
23ಎಚ್‌ಪಿಟಿ6- ಹಂಪಿ ಕನ್ನಡ ವಿವಿ ಕುಲಪತಿ ಡಾ.ಡಿ.ವಿ. ಪರಮಶಿವಮೂರ್ತಿ ಅವರ ನೇತೃತ್ವದಲ್ಲಿ ಕುಲಸಚಿವರು ಹಾಗೂ ಸಿಬ್ಬಂದಿ ಸೇರಿ ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಪ್ರತಿಜ್ಞಾ ವಚನ ಸ್ವೀಕರಿಸಿದರು. | Kannada Prabha

ಸಾರಾಂಶ

ಹಂಪಿ ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿ ಮುಂಭಾಗದಲ್ಲಿ ಸರ್ಕಾರದ ಆದೇಶದಂತೆ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅವರ ನೇತೃತ್ವದಲ್ಲಿ ಕುಲಸಚಿವರು ಹಾಗೂ ಸಿಬ್ಬಂದಿ ಸೇರಿ ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಪ್ರತಿಜ್ಞಾ ವಚನ ಸ್ವೀಕಾರ ಕಾರ್ಯಕ್ರಮ ನಡೆಸಿದರು.

ಹೊಸಪೇಟೆ: ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿ ಮುಂಭಾಗದಲ್ಲಿ ಸರ್ಕಾರದ ಆದೇಶದಂತೆ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅವರ ನೇತೃತ್ವದಲ್ಲಿ ಕುಲಸಚಿವರು ಹಾಗೂ ಸಿಬ್ಬಂದಿ ಸೇರಿ ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಪ್ರತಿಜ್ಞಾ ವಚನ ಸ್ವೀಕಾರ ಕಾರ್ಯಕ್ರಮ ನಡೆಸಿದರು.

"ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆ ಎಂದು ಈ ಮೂಲಕ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ. ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆ ಒಡ್ಡುತ್ತಿರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ’’ ಎಂದು ಎಲ್ಲರೂ ಪ್ರತಿಜ್ಞಾ ವಚನ ಸ್ವೀಕರಿಸಿದರು.

ವಿಶ್ವವಿದ್ಯಾಲಯದ ಪ್ರತಿಯೊಂದು ವಿಭಾಗಗಳಲ್ಲಿ ಪ್ರತಿಜ್ಞಾ ವಚನ ಸ್ವೀಕಾರ ಕಾರ್ಯಕ್ರಮ ನಡೆಯಿತು.

ಕನ್ನಡ ವಿಶ್ವವಿದ್ಯಾಲಯದ ಕ್ರಿಯಾಶಕ್ತಿ ಮುಂಭಾಗದಲ್ಲಿ ಸರ್ಕಾರದ ಆದೇಶದಂತೆ ಕುಲಪತಿ ಡಾ. ಡಿ.ವಿ. ಪರಮಶಿವಮೂರ್ತಿ ಅವರ ನೇತೃತ್ವದಲ್ಲಿ ಕುಲಸಚಿವರು ಹಾಗೂ ಸಿಬ್ಬಂದಿ ಸೇರಿ ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ಪ್ರತಿಜ್ಞಾ ವಚನ ಸ್ವೀಕಾರ ಕಾರ್ಯಕ್ರಮ ನಡೆಸಿದರು.

ಕನ್ನಡ ವಿವಿ ಕುಲಸಚಿವ ಡಾ. ವಿಜಯ ಪೂಣಚ್ಚ ತಂಬಂಡ, ಪ್ರಾಧ್ಯಾಪಕ ಡಾ. ಎ.ಎಸ್. ಪ್ರಭಾಕರ, ಉಪಕುಲಸಚಿವ ಡಾ. ಎ. ವೆಂಕಟೇಶ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ