- ಅನುಭವ ಮಂಟಪ ಉತ್ಸವ: 3 ಗಣ್ಯರಿಗೆ ರಾಷ್ಟ್ರೀಯ ಪ್ರಶಸ್ತಿ ಘೋಷಣೆ

KannadaprabhaNewsNetwork | Updated : Nov 11 2023, 01:19 AM IST

ಸಾರಾಂಶ

ಚನ್ನಬಸವಪಟ್ಟದ್ದೇವರು ಅನುಭವ ಮಂಟಪ ಪ್ರಶಸ್ತಿಗೆ ನಿವೃತ್ತ ನ್ಯಾ. ಶಿವರಾಜ ವಿ. ಪಾಟೀಲ ಅನುಭವ ಮಂಟಪ ರಾಷ್ಟ್ರೀಯ ಪುರಸ್ಕಾರಕ್ಕೆ ಇಸ್ರೋ ವಿಜ್ಞಾನಿ ಎಸ್.ಸೋಮನಾಥ ಎಂ.ಎಂ ಕಲಬುರಗಿ ಸಂಶೋಧನಾ ರಾಷ್ಟ್ರೀಯ ಪುರಸ್ಕಾರಕ್ಕೆ ಡಾ.ಶಿರೂರ ಆಯ್ಕೆ

ಬಸವಕಲ್ಯಾಣ: ಪ್ರತಿವರ್ಷ ಅನುಭವ ಮಂಟಪ ಉತ್ಸವದಲ್ಲಿ ಕೊಡ ಮಾಡುವ 3 ಪ್ರಶಸ್ತಿಗಳಿಗೆ ಈ ಕೆಳಕಂಡ ಗಣ್ಯರನ್ನು ಆಯ್ಕೆ ಮಾಡಲಾಗಿದೆ ಎಂದು ಅನುಭವ ಮಂಟಪದ ಅಧ್ಯಕ್ಷರಾದ ಡಾ.ಬಸವಲಿಂಗ ಪಟ್ಟದೇವರು ಹಾಗೂ ಕಾರ್ಯದರ್ಶಿ ಡಾ.ಎಸ್.ಬಿ ದುರ್ಗೆ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿ, 2023ನೇ ಸಾಲಿನ ಈ ಪ್ರಶಸ್ತಿಗಳು ನ.25 ಮತ್ತು 26ರಂದು ಬಸವಕಲ್ಯಾಣದ ಅನುಭವ ಮಂಟಪದಲ್ಲಿ ನಡೆಯುವ 44ನೇ ಶರಣ ಕಮ್ಮಟ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮೇಲಿನ ಮೂವರು ಗಣ್ಯರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಚನ್ನಬಸವ ಪಟ್ಟದ್ದೇವರು ಅನುಭವ ಮಂಟಪ ಪ್ರಶಸ್ತಿಯು 1 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಇದಕ್ಕೆ ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ.

ಅನುಭವ ಮಂಟಪ ರಾಷ್ಟ್ರೀಯ ಪುರಸ್ಕಾರ ಇದೇ ವರ್ಷದಿಂದ ಪ್ರಾರಂಭಿಸಲಾಗಿದ್ದು, ಇದು ಸಹ ಒಂದು ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಇದಕ್ಕೆ ಇಸ್ರೋ ವಿಜ್ಞಾನಿ ಎಸ್.ಸೋಮನಾಥ ಅವರನ್ನು ಆಯ್ಕೆ ಮಾಡಲಾಗಿದೆ.

ಎಂ.ಎಂ ಕಲಬುರಗಿ ಸಂಶೋಧನಾ ರಾಷ್ಟ್ರೀಯ ಪ್ರಶಸ್ತಿಯು 50 ಸಾವಿರ ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ. ಈ ಪ್ರಶಸ್ತಿಗೆ ಧಾರವಾಡ ವಿವಿಯ ಪ್ರಾಧ್ಯಾಪಕ ಡಾ. ಬಿ.ವಿ.ಶಿರೂರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಡಾ.ಬಸವಲಿಂಗ ಪಟ್ಟದೇವರು ತಿಳಿಸಿದ್ದಾರೆ.

Share this article