ಹಳ್ಳಿಮಾಳ ಪಿಎಸಿಎಂಎಸ್‌ ಅಧ್ಯಕ್ಷರಾಗಿ ಅನುಸೂಯಮ್ಮ ಆಯ್ಕೆ

KannadaprabhaNewsNetwork |  
Published : Jan 25, 2026, 01:15 AM IST
24ಕೆಆರ್ ಎಂಎನ್ 1.ಜೆಪಿಜಿರಾಮನಗರ ತಾಲೂಕಿನ ಹಳ್ಳಿಮಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷೆ ಅನುಸೂಯಮ್ಮ ಅವರನ್ನು ಮುಖಂಡರು ಅಭಿನಂದಿಸಿದರು. | Kannada Prabha

ಸಾರಾಂಶ

ರಾಮನಗರ: ತಾಲೂಕಿನ ಹಳ್ಳಿಮಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಅನುಸೂಯಮ್ಮ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.

ರಾಮನಗರ: ತಾಲೂಕಿನ ಹಳ್ಳಿಮಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಅನುಸೂಯಮ್ಮ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.

ಸಂಘದ ಅಧ್ಯಕ್ಷರಾಗಿದ್ದ ಕೃಷ್ಣೇಗೌಡರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶನಿವಾರ ಸಂಘದಲ್ಲಿ ನಡೆದ ಚುನಾವಣೆಗೆ ಅನುಸೂಯಮ್ಮ ಮತ್ತು ಪುಟ್ಟರಾಮು ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ 7 ಮತ ಪಡೆದ ಅನುಸೂಯಮ್ಮ ಅಧ್ಯಕ್ಷರಾದರು. ರಿಟರ್ನಿಂಗ್ ಅಧಿಕಾರಿ ಮಂಜುನಾಥ್ ಕರ್ತವ್ಯ ನಿರ್ವಹಿಸಿದರು. ಸಂಘದ ಸಿಇಒ ಪ್ರಕಾಶ್ ಇದ್ದರು.

ಮಳವಳ್ಳಿ ರಾಜು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಪ್ರಮುಖ ಪಾತ್ರ ವಹಿಸಿರುವ ಸಹಕಾರ ಕ್ಷೇತ್ರದಲ್ಲಿ ಸಹಕಾರ ಮತ್ತು ಸಹಬಾಳ್ವೆ, ಸಮನ್ವಯತೆ ಇದ್ದಾಗ ಮಾತ್ರ ಪಿಎಸಿಎಂಎಸ್ ಸಂಘಗಳು ಉಳಿಯಲು ಮತ್ತು ಆರ್ಥಿಕವಾಗಿ ಅಭಿವೃದ್ಧಿ ಕಾಣಲು ಸಾಧ್ಯ. ಅಂತಹ ಒಂದು ವಾತಾವರಣ ಹಳ್ಳಿಮಾಳ ಪಿಎಸಿಎಂಎಸ್ ನಲ್ಲಿ ಮೂಡಿ ಮಹಿಳೆ ಅನುಸೂಯಮ್ಮ ಅವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿದ ನಿರ್ದೇಶಕರಿಗೆ ಅಭಿನಂದನೆ ಸಲ್ಲಿಸಿದರು.

ನೂತನ ಅಧ್ಯಕ್ಷೆ ಅನುಸೂಯಮ್ಮ ಅವರನ್ನು ಜೆಡಿಎಸ್ ತಾಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಯ್ಯ, ಮುಖಂಡರಾದ ಮಳವಳ್ಳಿ ರಾಜು, ಕೆ.ಬಿ.ರಾಜಣ್ಣ, ನರಸಿಂಹ ಮೂರ್ತಿ, ಸಂಘದ ಉಪಾಧ್ಯಕ್ಷ ಮಾದಯ್ಯ ನಿರ್ದೇಶಕರಾದ ರವಿ, ಸಂದೀಪ್, ಚೈತ್ರಾ, ನಾಗಯ್ಯ ಮತ್ತಿತರರು ಅಭಿನಂದಿಸಿದರು.

24ಕೆಆರ್ ಎಂಎನ್ 1.ಜೆಪಿಜಿ

ರಾಮನಗರ ತಾಲೂಕಿನ ಹಳ್ಳಿಮಾಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷೆ ಅನುಸೂಯಮ್ಮ ಅವರನ್ನು ಮುಖಂಡರು ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!