
- ಆಕಾಶದತ್ತ ಮುಖ ಮಾಡಿದ ರೈತ
-ಮಳೆ ಕೈಕೊಟ್ಟು ಸಂಕಷ್ಟಕ್ಕೆ ಸಿಲುಕಿದ ರೈತರು । ಸರ್ಕಾರ ರೈತನ ಬದುಕಿಗೆ ಅಗತ್ಯ ನೆರವು ನೀಡಬೇಕು
-----ಕನ್ನಡಪ್ರಭ ವಾರ್ತೆ ಕರಜಗಿ
ಮುಂಗಾರು ಹಂಗಾಮಿನ ಆರಂಭದಲ್ಲಿ ಅಲ್ಲಲ್ಲಿ ಸುರಿದ ಮಳೆಯನ್ನು ನಂಬಿಕೊಂಡು ಬಿತ್ತನೆ ಮಾಡಿದ್ದ ರೈತರು, ಇದೀಗ ಮಳೆ ಕೈಕೊಟ್ಟ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಆದರೆ, ಕಳೆದ ಕೆಲವು ದಿನಗಳಿಂದ ಮಳೆಯಾಗದ ಕಾರಣ ಹೊಲಗಳಲ್ಲಿನ ತೇವಾಂಶ ಕಡಿಮೆಯಾಗಿದ್ದು, ಬೆಳೆಗಳು ಬಿಸಿಲಿನ ತಾಪಕ್ಕೆ ಬಾಡತೊಡಗಿವೆ.
ಆದರೆ, ಶೇ.94ರಷ್ಟು ಮಳೆ ಕೊರತೆಯಾಗಿರುವುದರಿಂದ ಮೊಳಕೆಯ ಹಂತದಲ್ಲೇ ಬೆಳೆಗಳು ಮುರುಟಿ ಹೋಗುವ ಆತಂಕ ರೈತರನ್ನು ಕಾಡುತ್ತಿದೆ. ಸೆಕೆಯ ವಾತಾ ವರಣ ಬೇಸಿಗೆಯ ಬಿಸಿಲನ್ನು ನೆನಪಿಸುತ್ತಿದೆ. ಮೋಡ ಕವಿದ ವಾತಾವರಣ ಕಂಡರೂ ಮಳೆ ಹನಿಯಾಗಿ ಭೂಮಿಗೆ ಬೀಳದಿರುವುದು ರೈತರಲ್ಲಿ ನಿರಾಸೆ ಮೂಡಿಸಿದೆ.
ಮುಂಗಾರು ಹಂಗಾಮಿನಲ್ಲಿ ಅಲ್ಲಲ್ಲಿ ಮಳೆಯಾದ ನಂತರ ರೈತರು ಹೆಸರು ಬಿತ್ತನೆ ಮಾಡಿದ್ದಾರೆ.
ಪ್ರತಿದಿನ ಬೆಳಿಗ್ಗೆ ಎದ್ದಾಕ್ಷಣ ಆಕಾಶದತ್ತ ನೋಡುತ್ತೇವೆ. ಎರಡು-ಮೂರು ದಿನಗಳಲ್ಲಿ ಮಳೆ ಸುರಿದರೆ ರೈತನ ಬದುಕು ಹಸಿರಾಗಲಿದೆ. ಬಿತ್ತನೆ ಮಾಡದ ರೈತರಿಗೆ ಮಳೆ ಬಾರದಿದ್ದರೆ ಏನು ಮಾಡಬೇಕು ಎಂಬ ಚಿಂತೆ ಕಾಡುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮಳೆಗಾಗಿ ಪೂಜೆ, ಪ್ರಾರ್ಥನೆಗಳು ನಡೆಯುತ್ತಿವೆ.
ರೈತರು ಸಾಲ ಮಾಡಿ ಬೀಜ, ಗೊಬ್ಬರ ಹಾಗೂ ಕೃಷಿ ಕಾರ್ಯಗಳಿಗೆ ಹಣ ವೆಚ್ಚ ಮಾಡಿದ್ದಾರೆ. ಉತ್ತಮ ಮಳೆಯ ನಿರೀಕ್ಷೆಯಲ್ಲಿ ಆರಂಭವಾದ ಕೃಷಿ ಚಟುವಟಿಕೆಗಳು ಇದೀಗ ಅನಿಶ್ಚಿತತೆಯ ಅಂಚಿಗೆ ತಲುಪಿವೆ. ಹೊಲಗಳಿಗೆ ಹೋದಾಗ ಹಸಿರಾಗಿರಬೇಕಿದ್ದ ಬೆಳೆಗಳು ಬಾಡುತ್ತಿರುವ ದೃಶ್ಯ ರೈತರ ಆತಂಕ ಮತ್ತಷ್ಟು ಹೆಚ್ಚಿಸಿದೆ. ಮುಂಗಾರು ಹಂಗಾಮಿನ ಕೃಷಿಯ ಯಶಸ್ಸು ಈಗ ಸಂಪೂರ್ಣವಾಗಿ ಮಳೆಯ ಮೇಲೆ ನಿಂತಿದೆ.
-ಶಾಂತಪ್ಪ ವಾಯಿ, ರೈತ ಮುಖಂಡ----
....ಕೋಟ್.....ಮುಂದಿನ ಕೆಲ ದಿನಗಳಲ್ಲಿ ಉತ್ತಮ ಮಳೆಯಾದರೆ ಮಾತ್ರ ಹೊಲಗಳಲ್ಲಿ ಮತ್ತೆ ಹಸಿರು ಚಿಗುರು ಮೂಡಲಿದೆ. ಇಲ್ಲದಿದ್ದರೆ ಅನ್ನದಾತನ ಶ್ರಮ ಮತ್ತು ಕನಸು ನುಚ್ಚು ನೂರಾಗುತ್ತದೆ. ಮಳೆಯ ಕೊರತೆ ಮುಂದುವರಿದರೆ ಬೆಳೆ ನಷ್ಟ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ತಕ್ಷಣವೇ ಬೆಳೆ ಸಮೀಕ್ಷೆ ನಡೆಸಬೇಕು.
ಅಗತ್ಯವಿದ್ದರೆ ಮಧ್ಯಂತರ ಪರಿಹಾರ ಘೋಷಿಸಬೇಕು. ಮರುಬಿತ್ತನೆ ಅನಿವಾರ್ಯವಾದರೆ ಗುಣಮಟ್ಟದ ಬೀಜ ಹಾಗೂ ಅಗತ್ಯ ಕೃಷಿ ಸಾಮಗ್ರಿಗಳನ್ನು ಒದಗಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.-ಬಸವರಾಜ ಮಹಾದೇವ ಸಂಗೋಳಗಿ, ರೈತ ಮುಖಂಡ