ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್‌ ಸೋರಿಕೆಯಿಂದ ಆತಂಕ ಸೃಷ್ಟಿ

KannadaprabhaNewsNetwork |  
Published : Aug 15, 2024, 01:48 AM IST
14ಎಚ್‌ವಿಆರ್‌22ಆಕ್ಸಿಜನ್‌ ಸಿಲಿಂಡರ್‌ ಸೋರಿಕೆಯಿಂದ ಭಯಭೀತರಾಗಿ ಆಸ್ಪತ್ರೆಯಿಂದ ಹೊರ ಬಂದಿರುವ ರೋಗಿಗಳು. | Kannada Prabha

ಸಾರಾಂಶ

ಬೆಳಗ್ಗೆ 11ರ ಸುಮಾರಿಗೆ ಜಿಲ್ಲಾಸ್ಪತ್ರೆಯಲ್ಲಿ ಒಮ್ಮೇಲೆ ಸ್ಫೋಟದ ಸದ್ದು ಕೇಳಿಬಂದಿದೆ. ಜತೆಗೆ, ಆಕ್ಸಿಜನ್‌ ಸೋರಿಕೆಯಾಗಿದೆ. ಇದರಿಂದ ಭಯಭೀತಗೊಂಡ ಜನರು ಚಿಕಿತ್ಸೆ ಪಡೆಯುವುದನ್ನು ಬಿಟ್ಟು ಹೊರಗೆ ಓಡಿ ಬಂದಿದ್ದಾರೆ.

ಹಾವೇರಿ: ಜಿಲ್ಲಾಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಆಕ್ಸಿಜನ್‌ ಸಿಲಿಂಡರ್‌ ಸೋರಿಕೆಯಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದ ಘಟನೆ ಬುಧವಾರ ನಡೆಯಿತು.

ಬೆಳಗ್ಗೆ 11ರ ಸುಮಾರಿಗೆ ಜಿಲ್ಲಾಸ್ಪತ್ರೆಯಲ್ಲಿ ಒಮ್ಮೇಲೆ ಸ್ಫೋಟದ ಸದ್ದು ಕೇಳಿಬಂದಿದೆ. ಜತೆಗೆ, ಆಕ್ಸಿಜನ್‌ ಸೋರಿಕೆಯಾಗಿದೆ. ಇದರಿಂದ ಭಯಭೀತಗೊಂಡ ಜನರು ಚಿಕಿತ್ಸೆ ಪಡೆಯುವುದನ್ನು ಬಿಟ್ಟು ಹೊರಗೆ ಓಡಿ ಬಂದಿದ್ದಾರೆ. ಕೆಲ ಮಹಿಳೆಯರು ಹಸುಗೂಸುಗಳನ್ನು ಎತ್ತಿಕೊಂಡೇ ಏಳುತ್ತ ಬೀಳುತ್ತ ಆತಂಕದಲ್ಲೇ ಹೊರಕ್ಕೆ ಓಡಿದ್ದಾರೆ. ಬೆಡ್‌ ಮೇಲೆ ಮಲಗಿದ್ದ ಬಾಣಂತಿಯರನ್ನು ಕುಟುಂಬದವರು ಹೊರಗೆ ಕರೆತಂದಿದ್ದಾರೆ. ಆಸ್ಪತ್ರೆ ಹಾಸಿಗೆ ಮೇಲೆ ಮಲಗಿದ್ದ ಕೆಲವರು ಕೈಯಲ್ಲಿ ಸಲೈನ್‌ ಬಾಟಲಿ ಹಿಡಿದುಕೊಂಡೇ ಓಡಿದ್ದಾರೆ. ಇದರಿಂದ ಕೆಲ ಹೊತ್ತು ಜಿಲ್ಲಾಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಏನಾಗಿದೆ ಎಂಬುದೇ ಗೊತ್ತಿಲ್ಲದೇ ಕೆಲವರು ಓಡಿದ್ದಾರೆ. ಆಕ್ಸಿಜನ್‌ ಸೋರಿಕೆಯಿಂದ ಸದ್ದು ಕೇಳಿಬಂದಿದ್ದು, ಯಾವುದೇ ಅಪಾಯವಿಲ್ಲ ಎಂಬುದು ಅರಿತು ರೋಗಿಗಳಲ್ಲಿ ನಿರ್ಮಾಣವಾಗಿದ್ದ ಆತಂಕ ನಿವಾರಣೆಯಾಯಿತು. ಬಳಿಕ ಆಸ್ಪತ್ರೆ ಒಳಗೆ ತೆರಳಿದರು.

ಆಕ್ಸಿಜನ್‌ ಸಿಲಿಂಡರ್‌ ಮುಚ್ಚಳ ಓಪನ್‌ ಆಗಿ ಸೋರಿಕೆಯಾಗಿದೆ. ಸಿಲಿಂಡರ್‌ ಸ್ಫೋಟಗೊಂಡಿಲ್ಲ. ಓಪನ್‌ ಆಗಿದ್ದ ಶಬ್ಧ ಕೇಳಿ ಜನರು ಗಾಭರಿಯಾಗಿದ್ದಾರೆ. ಯಾರಿಗೂ ಯಾವುದೇ ಅಪಾಯವಾಗಿಲ್ಲ ಎಂದು ಜಿಲ್ಲಾಸ್ಪತ್ರೆ ಸರ್ಜನ್‌

ಡಾ. ಪಿ.ಆರ್‌. ಹಾವನೂರ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!