ಕನ್ನಡಪ್ರಭ ವಾರ್ತೆ ಮುಧೋಳ
ಶನಿವಾರ ಸಂಜೆ ಪಟ್ಟಣದ ಪೊಲೀಸ್ ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಎಲ್ಲ ತಾಲೂಕಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಧೋಳ, ಜಮಖಂಡಿ, ರಬಕವಿ-ಬನಹಟ್ಟಿ, ಬೀಳಗಿ, ಬಾಗಲಕೋಟ ಸೇರಿದಂತೆ ಎಲ್ಲ ಅಧಿಕಾರಿಗಳು ಪ್ರವಾಹ ಎದುರಿಸಲು ಸನ್ನದ್ಧರಾಗಬೇಕು. ಮುಖ್ಯವಾಗಿ ಕಂದಾಯ, ಆರೋಗ್ಯ, ಪಶು ಇಲಾಖೆ ಸೇರಿದಂತೆ ನೋಡಲ್ ಅಧಿಕಾರಿಗಳನ್ನು ನೇಮಿಸಬೇಕು, ಕಂಟ್ರೋಲ್ ರೂಂಗಳನ್ನು ತೆರೆದು ಆಗಾಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಹಗಲಿರುಳು ಎನ್ನದೆ ತಮಗೆ ವಹಿಸುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಪ್ರವಾಹ ಪೀಡಿತರಿಂದ ದೂರುಗಳು ಬಂದರೆ ಅವರ ಮೇಲೆ ಸೂಕ್ತಕ್ರಮ ಜರುಗಿಸಬೇಕಾಗುತ್ತದೆ ಎಂದು ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.
2019ರಲ್ಲಿನ ಪ್ರವಾಹವನ್ನು ನೆನಪಿಸಿಕೊಂಡು 2019ರ ಮಾರ್ಗಸೂಚನೆಯನ್ನು ಗಮನದಲ್ಲಿಟ್ಟು ಕೆಲಸ ಮಾಡಬೇಕು, ಗ್ರಾಮದಲ್ಲಿ ವಾಸ್ತವ್ಯ ಮಾಡುವ ಪ್ರಸಂಗ ಒದಗಿ ಬಂದರೆ ಗ್ರಾಮದಲ್ಲಿಯೇ ವಾಸ್ತವ್ಯ ಮಾಡಿ. ಸಂತ್ರಸ್ಥರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕೆಂದರು.ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಅವರು ಸಲಹೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಜಾನಕಿ.ಕೆ.ಎಂ ಮಾತನಾಡಿ, ತಾಲೂಕು ಮಟ್ಟದ ಅಧಿಕಾರಿಗಳು ತಮಗೆ ಒಪ್ಪಿಸಿರುವ ಕೆಲಸಗಳನ್ನು ಸರಿಯಾಗಿ ನಿರ್ವಹಿಸಬೇಕು.ಇಲ್ಲದಿದ್ದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಹೇಳಿದರು.