ಕನ್ನಡಪ್ರಭ ವಾರ್ತೆ ಉಡುಪಿ
ಮಹಾಲಕ್ಷ್ಮೀ ಬ್ಯಾಂಕ್ ಸಹಕಾರಿ ಇಲಾಖೆ ಹಾಗೂ ಆರ್ಬಿಐ ನಿಯಮಾವಳಿಯಂತೆ ಸಹಕಾರಿ ತತ್ವದಡಿ ಪಾರದರ್ಶಕ ರೀತಿಯಲ್ಲಿ ವ್ಯವಹಾರ ನಡೆಸುತ್ತಿದ್ದು, ಈ ಬಗ್ಗೆ ರಾಜ್ಯ ಸಹಕಾರ ಇಲಾಖೆ ಅಥವಾ ಇಡಿ, ಸಿಬಿಐ ಅಥವಾ ಇನ್ಯಾವುದೇ ಉನ್ನತ ಮಟ್ಟದ ತನಿಖೆಗೂ ಸಿದ್ಧವಿದೆ ಹಾಗೂ ಬ್ಯಾಂಕಿನ ವಿರುದ್ಧ ಆಧಾರರಹಿತ ಆರೋಪ ಮಾಡಿರುವ ವ್ಯಕ್ತಿಗಳ ವಿರುದ್ಧ ಕಾನೂನು ರೀತಿಯಲ್ಲೇ ಉತ್ತರ ನೀಡಲಾಗುವುದು ಎಂದು ಯಶ್ಪಾಲ್ ತಿಳಿಸಿದ್ದಾರೆ.------------------ಎಸ್ಐಟಿ ಮೂಲಕ ತನಿಖೆಯಾಗಬೇಕು: ರಘುಪತಿ ಭಟ್
ಕನ್ನಡಪ್ರಭ ವಾರ್ತೆ ಉಡುಪಿಮಹಾಲಕ್ಷ್ಮಿ ಕೋ- ಆಪರೇಟಿವ್ ಬ್ಯಾಂಕಿನ ಮಲ್ಪೆ ಶಾಖೆಯಿಂದ ನಿಯಮ ಮೀರಿ ಸಾಲ ನೀಡಿದ ಪ್ರಕರಣವನ್ನು ವಿಶೇಷ ತನಿಖಾ ದಳ (ಎಸ್ಐಟಿ) ಮೂಲಕ ತನಿಖೆ ನಡೆಸಬೇಕು ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಆಗ್ರಹಿಸಿದ್ದಾರೆ.2021ರಲ್ಲಿ 100ಕ್ಕೂ ಅಧಿಕ ಮಂದಿಗೆ 2 ಚೆಕ್, ಆಧಾರ್ - ಪಾನ್ ಕಾರ್ಡ್ ಪಡೆದು 20 ಸಾವಿರದಿಂದ 1 ಲಕ್ಷ ರು. ವರೆಗೆ ಸಾಲ ನೀಡಿ, ಇದೀಗ 2 ಲಕ್ಷ ರು. ಸಾಲ ಪಡೆದಿರುವುದಾಗಿ ಹೇಳಿ, ಮರುಪಾವತಿಗೆ ಕಿರುಕುಳ ನೀಡುತ್ತಿದ್ದಾರೆ ಎಂದವರು ಆರೋಪಿಸಿದರು.
9ರಂದು ಅಣೆ ಪ್ರಮಾಣ:ಈ ವಿಚಾರದ ಬಗ್ಗೆ ಬ್ಯಾಂಕಿನ ಅಧಿಕಾರಿಗಳು ನನಗೆ ಕರಂಬಳ್ಳಿ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡುವಂತೆ ಆಹ್ವಾನಿಸಿದ್ದು, ಅವರ ಸವಾಲನ್ನು ಸ್ವೀಕರಿಸಿದ್ದೇನೆ. ನ.9ರಂದು ಬೆಳಗ್ಗೆ 9.30ಕ್ಕೆ ಸಂತ್ರಸ್ತರೆಲ್ಲರೂ ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನಕ್ಕೆ ಆಗಮಿಸಿ ಸಂತ್ರಸ್ತರಿಂದ ಆಣೆ ಪ್ರಮಾಣ ಮಾಡಿಸಲು ಬದ್ಧನಾಗಿದ್ದು, ಬ್ಯಾಂಕಿನ ಅಧ್ಯಕ್ಷರು, ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿಬೇಕು ಎಂದವರು ಹೇಳಿದರು.