ಧಾರವಾಡ:
ಈ ಕುರಿತು ಪ್ರಕಟಣೆ ನೀಡಿರುವ ಅವರು, 2024-25ನೇ ಸಾಲಿನ ಆಯವ್ಯಯದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಸರ್ಕಾರ ಹೇಳಿತ್ತು. ಜಿಲ್ಲೆಯಲ್ಲಿ ಧಾರವಾಡ, ಹುಬ್ಬಳ್ಳಿ (ದಕ್ಷಿಣ), ಹುಬ್ಬಳ್ಳಿ (ಉತ್ತರ), ಅಣ್ಣಿಗೇರಿ, ಕುಂದಗೋಳ, ಕಲಘಟಗಿ ಮತ್ತು ನವಲಗುಂದ ಸೇರಿದಂತೆ ಒಟ್ಟು 7 ಸ್ಥಳಗಳಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಉಪನೋಂದಣಿ ಕಚೇರಿಗಳನ್ನು ಹೊಂದಿದೆ. ಇನ್ಮುಂದೆ ಜಿಲ್ಲೆಯ ಯಾವುದೇ ಭಾಗದ ಸ್ಥಿರಾಸ್ತಿ ದಸ್ತಾವೇಜುನ್ನು ಮಾಲೀಕರು ತಮಗೆ ಅನುಕೂಲ ಮತ್ತು ಸ್ಲಾಟ್ ಲಭ್ಯವಾಗುವ ನೋಂದಣಿ ಕಚೇರಿಗಳಲ್ಲಿ ನೋಂದಣಿ ಮಾಡಿಸಬಹುದು ಎಂದು ಹೇಳಿದ್ದಾರೆ.
ಪ್ರಸ್ತುತ ಸಾರ್ವಜನಿಕರು ತಮ್ಮ ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದೆ. ಆದರೆ, ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು. ಇದರಿಂದ ನೋಂದಣಿಯಲ್ಲಿ ಪಾರದರ್ಶಕತೆ, ವಿಳಂಬ ಆಗುವುದಕ್ಕೆ ತಡೆ, ಸಾರ್ವಜನಿಕರಿಗೆ ತಮಗೆ ಸಮೀಪದಲ್ಲಿರುವ ಉಪ ನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಿಕೊಳ್ಳಲು ಅವಕಾಶವಿದೆ. ನೋಂದಣಿಗೆ ಸ್ಲಾಟ್ ಲಭ್ಯವಿರುವ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳುವ ಅವಕಾಶವಿದೆ. ನೋಂದಣಿ ಪ್ರಕ್ರಿಯೆಯು ಸುಲಭವಾಗುವುದಲ್ಲದೆ, ಸಮಯವು ಸಹ ಉಳಿಯುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.