ಸೂಡಾದಿಂದ ಅಪಾರ್ಟ್‌ಮೆಂಟ್‌ ನಿರ್ಮಾಣ ಯೋಜನೆ: ಎಚ್.ಎಸ್.ಸುಂದರೇಶ್‌

KannadaprabhaNewsNetwork |  
Published : Aug 23, 2025, 02:00 AM IST
ಪೋಟೋ: 22ಎಸ್‌ಎಂಜಿಕೆಪಿ07ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಶುಕ್ರವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್.ಸುಂದರೇಶ್‌ ಮಾತನಾಡಿದರು. | Kannada Prabha

ಸಾರಾಂಶ

ಶಿವಮೊಗ್ಗ - ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಊರಗಡೂರಿನ ವಸತಿ ಬಡಾವಣೆಯಲ್ಲಿ 4 ಎಕರೆ ಪ್ರದೇಶದಲ್ಲಿ ಮತ್ತು ಸೋಮಿನಕೊಪ್ಪ ಸರ್ವೆ ನಂ.122 ಮತ್ತು 126/1ರಲ್ಲಿ 1 ಎಕರೆ 9 ಗುಂಟೆ ಪ್ರದೇಶದಲ್ಲಿ ಜನ ಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್.ಸುಂದರೇಶ್‌ ತಿಳಿಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಶಿವಮೊಗ್ಗ - ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಊರಗಡೂರಿನ ವಸತಿ ಬಡಾವಣೆಯಲ್ಲಿ 4 ಎಕರೆ ಪ್ರದೇಶದಲ್ಲಿ ಮತ್ತು ಸೋಮಿನಕೊಪ್ಪ ಸರ್ವೆ ನಂ.122 ಮತ್ತು 126/1ರಲ್ಲಿ 1 ಎಕರೆ 9 ಗುಂಟೆ ಪ್ರದೇಶದಲ್ಲಿ ಜನ ಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಪ್ರಾಧಿಕಾರದ ಅಧ್ಯಕ್ಷ ಎಚ್.ಎಸ್.ಸುಂದರೇಶ್‌ ತಿಳಿಸಿದರು.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ನಗರದ ಹೊರವಲಯದಲ್ಲಿರುವ ಗೋಪಶೆಟ್ಟಿಕೊಪ್ಪ ಗ್ರಾಮದ ವಿವಿಧ ಸ.ನಂ.ಗಳ 104 ಎಕರೆ ಭೂಪ್ರದೇಶದ ಪೈಕಿ ಶೇ.50:50ರ ಅನುಪಾತದಲ್ಲಿ ಒಪ್ಪಿಗೆ ಸೂಚಿಸಿರುವ 30 ಎಕರೆ ಜಮೀನನ್ನು ಮೊದಲ ಹಂತದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಸರ್ಕಾರದ ಪೂರ್ವಾನುಮೋದನೆಗಾಗಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸದರಿ ಪ್ರದೇಶದಲ್ಲಿನ ಉಳಿದ ಭೂಪ್ರದೇಶವನ್ನು ಪರಿವರ್ತಿಸಲೂ ಸಹ ಸರ್ಕಾರದಿಂದ ಒತ್ತಡವಿದ್ದು, ಪ್ರಕ್ರಿಯೆ ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದ ಅವರು, ಕೆಲವು ದಶಕಗಳ ಹಿಂದೆ ಸೂಡಾ ವ್ಯಾಪ್ತಿಯ ಭದ್ರಾವತಿ ಪಟ್ಟಣದಲ್ಲಿ ಸ್ವಾದೀನಪಡಿಸಿಕೊಂಡಿರುವ 34 ಎಕರೆ ಜಮೀನನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದ್ದು, ಶೀಘ್ರದಲ್ಲಿ ಕಾರ್ಯಾರಂಭಿಸಲಾಗುವುದು ಎಂದರು.

ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಹಾಯೋಜನೆ-11ರ ಕಾರ್ಯ ಪ್ರಗತಿಯಲ್ಲಿದ್ದು, ಹಾಲಿ ಭೂ ಉಪಯೋಗ ನಕ್ಷೆಗಳನ್ನು ತಯಾರಿಸಿ ಪ್ರಾಧಿಕಾರದಿಂದ ಅನುಮೋದಿಸಲಾಗಿದೆ. ಪ್ರಸ್ತಾವಿತ ಭೂ ಉಪಯೋಗ ನಕ್ಷೆ. ರಸ್ತೆ ಪರಿಚಲನ ನಕ್ಷೆಗಳನ್ನು ಸಿದ್ದಪಡಿಸಿ ತಾತ್ಕಾಲಿಕ ಅನುಮೋದನೆ ಪಡೆಯಲು ಸರ್ಕಾರಕ್ಕೆ ಸಲ್ಲಿಸಲು ಪ್ರಸ್ತಾವನೆಯನ್ನು ಸಿದ್ದಪಡಿಸಲಾಗಿದೆ ಎಂದರು.

ಸ್ವಾಮಿ ವಿವೇಕಾನಂದ ಬಡಾವಣೆಯ ಮಹಿಳಾ ಪಾಲಿಟೆಕ್ನಿಕ್ ಕಾಲೇಜು ಪಕ್ಕದಲ್ಲಿ 10 ಕೋಟಿ ಮೊತ್ತದಲ್ಲಿ ಮಾಲ್ ನಿರ್ಮಿಸಲು ಉದ್ದೇಶಿಸಲಾಗಿದೆ. ಜೆ.ಎಚ್ ಪಟೇಲ್ ಬಡಾವಣೆಯ ಸೋಮಿನಕೊಪ್ಪ ಮುಖ್ಯರಸ್ತೆಯಲ್ಲಿಯೂ ವಾಣಿಜ್ಯ ಸಂಕೀರ್ಣ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.

ಶಿವಮೊಗ್ಗ ನಗರದ ಯೋಜನಾ ಪ್ರದೇಶದ 3.20 ಕೋಟಿ ರು. ವೆಚ್ಚದಲ್ಲಿ ವ್ಯಾಪ್ತಿಯಲ್ಲಿ 4 ಕೆರೆಗಳನ್ನು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ 50 ಕೋಟಿ ರು. ವೆಚ್ಚದಲ್ಲಿ 22 ಕೆರೆಗಳನ್ನು ಅಭಿವೃದ್ಧಿಪಡಿಸಲು ಡಿ.ಪಿ.ಆರ್. ತಯಾರಿಸಲಾಗುತ್ತಿದೆ. ಶಿವಮೊಗ್ಗ ನಗರದ ಹೊರ ವರ್ತುಲ ರಸ್ತೆ ಅಭಿವೃದ್ಧಿಪಡಿಸಲು ಮತ್ತು ಶಿವಮೊಗ್ಗ ನಗರದ 3 ಮತ್ತು ಭದ್ರಾವತಿ ನಗರದ 3 ವೃತ್ತಗಳನ್ನು 40 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದರು.

ಪ್ರಾಧಿಕಾರದ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ 60 ಮೀ. ಅಗಲದ ಹೊರವರ್ತುಲ ರಸ್ತೆಯನ್ನು 50 ಲಕ್ಷ ರು. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಹಾಗೂ ಜೆ.ಎಚ್.ಪಟೇಲ್ ಬಡಾವಣೆ ಅಟಲ್ ಬಿಹಾರಿ ವಾಜಪೇಯಿ ಬಡಾವಣೆ ಮತ್ತು ನಿಧಿಗೆ-ಮಾಚೇನಹಳ್ಳಿ ಬಡಾವಣೆಯಲ್ಲಿ ಒಟ್ಟು 3 ಉದ್ಯಾನವನಗಳ ಅಭಿವೃದ್ಧಿಪಡಿಸಲು ಒಟ್ಟು 2.95 ಕೋಟಿ ಅಂದಾಜು ಮೊತ್ತದಲ್ಲಿ ಈಗಾಗಲೇ ಟೆಂಡರ್ ಕರೆಯಲಾಗಿದೆ. ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಒಟ್ಟು 57 ಉದ್ಯಾನವನಗಳು ಹಾಗೂ 25 ಆಟೋ ಶೆಲ್ಟರ್‌ಗಳನ್ನು ನಿರ್ಮಿಸಲು ಉದ್ದೇಶಿಸಲಾಗಿದೆ. ಅಲ್ಲದೇ ಪ್ರಾಧಿಕಾರಕ್ಕೆ ಅಟಲ್ ಬಿಹಾರಿ ವಾಜಪೇಯಿ (ಮಲ್ಲಿಗೇನಹಳ್ಳಿ) ವಸತಿ ಬಡಾವಣೆಯಲ್ಲಿ ಹೊಸ ಕಚೇರಿ ಕಟ್ಟಡವನ್ನು 10 ಕೋಟಿ ರು. ಮೊತ್ತದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ಪ್ರಾಧಿಕಾರದ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಲ್ಲಿ 50 ಲಕ್ಷ ರು. ಅಂದಾಜು ಮೊತ್ತದಲ್ಲಿ ಸ್ವಾಗತ ಕಮಾನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.

ಗೋಷ್ಠಿಯಲ್ಲಿ ಸೂಡಾ ಆಯುಕ್ತ ವಿಶ್ವನಾಥ ಮುದ್ದಜ್ಜಿ, ಸದಸ್ಯರಾದ ರವಿಕುಮಾರ್ ಎಚ್.ಚನ್ನಪ್ಪ ಮತ್ತಿತರರು ಉಪಸ್ಥಿತರಿದ್ದರು.

PREV

Recommended Stories

KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?