ಅಪ್ಪಣ್ಣ ಹೆಗ್ಡೆ ನಡೆದಾಡುವ ಜ್ಞಾನಭಂಡಾರವಿದ್ದಂತೆ: ಡಾ. ಎಂ. ಮೋಹನ್ ಆಳ್ವ

KannadaprabhaNewsNetwork |  
Published : Oct 24, 2024, 12:43 AM IST
'ಅಪ್ಪಣ್ಣ ಹೆಗ್ಡೆ-90' | Kannada Prabha

ಸಾರಾಂಶ

ಅಪ್ಪಣ್ಣ ಹೆಗ್ಡೆ - 90 ಕಾರ್ಯಕ್ರಮದ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು. ಈ ಸಂದರ್ಭ ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್‌ ಆಳ್ವ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಕುಂದಾಪುರ

ಅಪ್ಪಣ್ಣ ಹೆಗ್ಡೆಯವರು ನಡೆದಾಡುವ ಜ್ಞಾನಭಂಡಾರವಿದ್ದಂತೆ. ಅವರ ಸಾಮಾಜಿಕ ಬದುಕೇ ಒಂದು ಪಠ್ಯ ಶಾಲೆ. ವಿಶಾಲ ಮನೋಧರ್ಮ, ತ್ಯಾಗ, ನಾಯಕತ್ವ, ನ್ಯಾಯಿಕ ಪರಿಕಲ್ಪನೆ ಇರುವ ವ್ಯಕ್ತಿಗಳ ಸಾಲಿನಲ್ಲಿ ಬಸ್ರೂರು ಅಪ್ಪಣ್ಣ ಹೆಗ್ಡೆಯವರದು ಎತ್ತರದ ಸ್ಥಾನ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ, ಬಿ. ಅಪ್ಪಣ್ಣ ಹೆಗ್ಡೆ ಜನ್ಮ ದಿನೋತ್ಸವ ಸಮಿತಿಯ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಹೇಳಿದರು.

ವಕ್ವಾಡಿ ಗುರುಕುಲ‌ ಪಬ್ಲಿಕ್ ಸ್ಕೂಲ್ ನಲ್ಲಿ ಬುಧವಾರ ನಡೆದ ''''ಅಪ್ಪಣ್ಣ ಹೆಗ್ಡೆ-90'''' ಕಾರ್ಯಕ್ರಮದ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿರಿಯರಾದ ಬಸ್ರೂರು ಅಪ್ಪಣ್ಣ ಹೆಗ್ಡೆಯವರದು ಜಾತಿ, ಮತ, ಊರನ್ನು ಮೀರಿದ ವ್ಯಕ್ತಿತ್ವ. ಅವರ ಜನ್ಮ ದಿನವನ್ನು ಮಾದರಿ ಕಾರ್ಯಕ್ರಮವಾಗಿಸುವ ಮೂಲಕ ಸಂಭ್ರಮಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಡಿಸೆಂಬರ್ 24 ರಂದು ನಡೆಯುವ‌ 90ರ ಜನ್ಮದಿನೋತ್ಸವದ ಪೂರ್ವಭಾವಿಯಾಗಿ ಆರೋಗ್ಯ, ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.

ಕೋಟ ಗೀತಾನಂದ ಫೌಂಡೇಶನ್‌ನ ಪ್ರವರ್ತಕ ಆನಂದ ಸಿ. ಕುಂದರ್ ಮಾತನಾಡಿ, ಅನೇಕ ಶಿಕ್ಷಣ ಸಂಸ್ಥೆಗಳ ಹಾಗೂ ದೇವಸ್ಥಾನಗಳ ನಿರ್ಮಾಣದ ಬಗೀರಥರಂತೆ ಸೇವೆ ಸಲ್ಲಿಸಿದ ಬಸ್ರೂರು ಅಪ್ಪಣ್ಣ ಹೆಗ್ಡೆಯವರು ಸಮಾಜಕ್ಕೆ ಉಪಯೋಗವಾಗುವ ಎಲ್ಲ ಕ್ಷೇತ್ರಗಳಲ್ಲೂ ಸೈ ಎನಿಸಿಕೊಂಡಿದ್ದಾರೆ ಎಂದರು.

ಬಸ್ರೂರು ಅಪ್ಪಣ್ಣ ಹೆಗ್ಡೆ ಪ್ರತಿಷ್ಠಾನದ ರಾಮ್‌ರತನ್ ಹೆಗ್ಡೆ, ರಾಮ್ ಕಿಶನ್ ಹೆಗ್ಡೆ, ಅನುಪಮಾ ಎಸ್ ಶೆಟ್ಟಿ, ಪ್ರೀತಮ್ ಎಸ್ ರೈ, ಸುಶಾಂತ್ ರೈ, ಗುರುಕುಲ ವಿದ್ಯಾಸಂಸ್ಥೆಯ ಜಂಟಿ ಕಾರ್‍ಯನಿರ್ವಾಹಕರಾದ ಬಾಂಡ್ಯ ಸುಭಾಶ್ಚಂದ್ರ ಶೆಟ್ಟಿ, ಉದ್ಯಮಿ ಕಾಪು ಕಿಶೋರ್ ಶೆಟ್ಟಿ, ಉದಯ್ ಕುಮಾರ್ ಶೆಟ್ಟಿ ಪಡುಕೆರೆ, ಪತ್ರಕರ್ತ ಯು.ಎಸ್ ಶೆಣೈ ಇದ್ದರು.

ಅಪ್ಪಣ್ಣ ಹೆಗ್ಡೆ ಜನ್ಮ ದಿನೋತ್ಸವ ಸಮಿತಿಯ ವಸಂತ್ ಗಿಳಿಯಾರ್ ಸ್ವಾಗತಿಸಿದರು. ಶ್ರೀಕಾಂತ ಹೆಮ್ಮಾಡಿ ವಂದಿಸಿದರು. ಗುರುಕುಲ ವಿದ್ಯಾಸಂಸ್ಥೆಯ ವಿಶಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಒಂದೇ ವರ್ಷದಲ್ಲಿ ರನ್ಯಾಳಿಂದ 1.27 ಕ್ವಿಂಟಲ್‌ ಚಿನ್ನ ಸ್ಮಗ್ಲಿಂಗ್!
ತಾಂತ್ರಿಕ ಶಿಕ್ಷಣದ ಕೊರತೆ ನೀಗಿಸಲು ಶ್ರಮಿಸಿ