ಬಳ್ಳಾರಿ: ಹನ್ನೆರಡನೇ ಶತಮಾನದ ವಚನ ಚಳವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ತಮ್ಮ ವಚನಗಳ ಮೂಲಕ ಸಮಾಜದ ತಾರತಮ್ಯ ಹೋಗಲಾಡಿಸಿದರು ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ. ಚಿದಾನಂದಪ್ಪ ಹೇಳಿದರು.
ನಿವೃತ್ತ ಮುಖ್ಯಗುರು ಸಿ. ಕೊಟ್ರಪ್ಪ ವಿಶೇಷ ಉಪನ್ಯಾಸ ನೀಡಿದರು. ಜಂಗಮ ಹೊಸಹಳ್ಳಿಯ ಶ್ರೀ ಶಿವಲಿಂಗ ಶಿವಾಚಾರ್ಯ ಸಾನ್ನಿಧ್ಯ ವಹಿಸಿದ್ದರು. ಸಿರುಗುಪ್ಪದ ವೀರೇಶ ದಳವಾಯಿ ಅವರ ತಂಡದವರು ವಚನ ಸಂಗೀತ ಪ್ರಸ್ತುತ ಪಡಿಸಿದರು. ಸಿಂಧುವಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕೋಲಾಟ ಕಲೆಯ ಪ್ರದರ್ಶನ ನೀಡಿದ ಮಕ್ಕಳನ್ನು ಸನ್ಮಾನಿಸಲಾಯಿತು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ, ಬಳ್ಳಾರಿ ಜಿಲ್ಲಾ ಹಡಪದ ಅಪ್ಪಣ್ಣ ಸೇವಾ ಸಮಿತಿ ಅಧ್ಯಕ್ಷ ಎಚ್. ರುದ್ರಪ್ಪ, ಕುರುಗೋಡು ತಾಲೂಕು ಹಡಪದ ಅಪ್ಪಣ್ಣ ಸೇವಾ ಸಮಿತಿ ಅಧ್ಯಕ್ಷ ಎಚ್. ಮಂಜುನಾಥ, ಬಳ್ಳಾರಿ ತಾಲೂಕು ಹಡಪದ ಅಪ್ಪಣ್ಣ ಸೇವಾ ಸಮಿತಿ ಅಧ್ಯಕ್ಷ ಸದಾಶಿವ ಉಪಸ್ಥಿತರಿದ್ದರು.ಶಿವಶರಣ ಹಡಪದ ಅಪ್ಪಣ್ಣ ಅವರ ಜಯಂತಿ ಅಂಗವಾಗಿ ನಗರದಲ್ಲಿ ಸಂಭ್ರಮದ ಮೆರವಣಿಗೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್ಪೇಟೆ ಪೊಲೀಸ್ ಠಾಣೆ ರಸ್ತೆ, ತೇರು ಬೀದಿ, ಎಚ್.ಆರ್. ಗವಿಯಪ್ಪ ವೃತದ ಮೂಲಕ ಡಾ. ಜೋಳದರಾಶಿ ದೊಡ್ಡನಗೌಡ ರಂಗಮದಿರದ ವೇದಿಕೆ ಸಭಾಂಗಣ ತಲುಪಿ ಸಂಪನ್ನಗೊಂಡಿತು.