ಭಟ್ಕಳ: ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಅರ್ಜಿ ಸಲ್ಲಿಸಿದ ಅರಣ್ಯವಾಸಿಗಳ ಸಾಗುವಳಿ ಕ್ಷೇತ್ರಕ್ಕೆ ಸಂಬಂಧಿಸಿ ಕಾನೂನಿಗೆ ವ್ಯತಿರಿಕ್ತವಾಗಿ ನಡೆದ ಅಸಮರ್ಪಕ ಜಿಪಿಎಸ್ಗೆ ಅರಣ್ಯವಾಸಿಯು ಹಕ್ಕು ಸಮಿತಿಯ ಪ್ರಾಧಿಕಾರಕ್ಕೆ ಸಲ್ಲಿಸಿದ ಮೇಲ್ಮನವಿ ಪುನರ್ ಪರಿಶೀಲಿಸಲು ಕಾನೂನಿನಲ್ಲಿ ಅವಕಾಶವಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರ ರವೀಂದ್ರ ನಾಯ್ಕ ತಿಳಿಸಿದರು.
ಅವುಗಳಲ್ಲಿ ಶೇ. ೭೨ರಷ್ಟು ಅರ್ಜಿಗಳಿಗೆ ಅಸಮರ್ಪಕವಾಗಿ ಜಿಪಿಎಸ್ ಮಾಡಲಾಗಿದೆ. ಸಾಗುವಳಿ ಕ್ಷೇತ್ರ, ಬಾವಿ, ಅಂಗಳ, ಕೊಟ್ಟಿಗೆ ಮುಂತಾದವುಗಳನ್ನು ಬಿಟ್ಟು ಜಿಪಿಎಸ್ ಆಗದಿರುವುದರಿಂದ ಅನ್ಯಾಯಕ್ಕೊಳಗಾದ ಅರಣ್ಯವಾಸಿಗಳು ಹೋರಾಟಗಾರರ ವೇದಿಕೆಯ ನೇತೃತ್ವದಲ್ಲಿ ಮೇಲ್ಮನವಿ ಸಲ್ಲಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಸಭೆಯಲ್ಲಿ ಅರಣ್ಯ ಹಕ್ಕು ಹೋರಾಟಗಾರರ ವೇದಿಕೆಯ ಜಿಲ್ಲಾ ಸಂಚಾಲಕ ದೇವರಾಜ ಗೊಂಡ, ಹರಿ ನಾಯ್ಕ, ಓಂಕಾರ, ಶಬ್ಬೀರ್, ಖಯ್ಯೂಂ ಕೋಲಾ, ಮಂಜುನಾಥ ನಾಯ್ಕ, ದೇವು ಗೋಮ ಮರಾಠಿ, ಅಣ್ಣಪ್ಪ ನಾಯ್ಕ, ಮಂಜುನಾಥ ಹಾಡುಹಳ್ಳಿ, ದತ್ತು ನಾಯ್ಕ, ಮೋಹನ ಸಣ್ಣು ಗೊಂಡ, ಮಂಗಲಾ ಶೆಟ್ಟಿ ಗುಡಿಹಿತ್ಲು ಮುಂತಾದವರಿದ್ದರು.