ಸೊಸೈಟಿಗಳಿಗೆ ಪಡಿತರ, ರಸಗೊಬ್ಬರ ವಿತರಣೆಗೆ ಮನವಿ

KannadaprabhaNewsNetwork |  
Published : Oct 31, 2025, 02:15 AM IST
28ಕೆಆರ್ ಎಂಎನ್ 3.ಜೆಪಿಜಿರಾಮನಗರ ನಗರಸಭೆ ವ್ಯಾಪ್ತಿಯ ಬಾಲಗೇರಿಯಲ್ಲಿ ಮಂಗಳವಾರ ಆಹಾರ ಪಡಿತರ ವಿತರಣಾ ಕೇಂದ್ರಕ್ಕೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಎಚ್.ಮಂಜು ಹಾಗೂ ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ (ದೊಡ್ಡಿ) ಚಾಲನೆ ನೀಡಿದರು. | Kannada Prabha

ಸಾರಾಂಶ

ರಾಮನಗರ: ತಾಲೂಕು ವ್ಯಾಪ್ತಿಯ ಸೊಸೈಟಿಗಳಿಗೆ ಟಿಎಪಿಸಿಎಂಎಸ್ ಮೂಲಕ ಪಡಿತರ ಆಹಾರ ಮತ್ತು ರಸಗೊಬ್ಬರ ವಿತರಣೆ ಮಾಡಲು ಕ್ರಮ ವಹಿಸುವಂತೆ ಸಂಬಂಧಿಸಿದ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದು ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ತಿಳಿಸಿದರು.

ರಾಮನಗರ: ತಾಲೂಕು ವ್ಯಾಪ್ತಿಯ ಸೊಸೈಟಿಗಳಿಗೆ ಟಿಎಪಿಸಿಎಂಎಸ್ ಮೂಲಕ ಪಡಿತರ ಆಹಾರ ಮತ್ತು ರಸಗೊಬ್ಬರ ವಿತರಣೆ ಮಾಡಲು ಕ್ರಮ ವಹಿಸುವಂತೆ ಸಂಬಂಧಿಸಿದ ಸಚಿವರಲ್ಲಿ ಮನವಿ ಮಾಡಲಾಗಿದೆ ಎಂದು ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ತಿಳಿಸಿದರು.

ನಗರಸಭೆ ವ್ಯಾಪ್ತಿಯ ಬಾಲಗೇರಿಯಲ್ಲಿ ಆಹಾರ ಪಡಿತರ ವಿತರಣಾ ಕೇಂದ್ರಕ್ಕೆ ಚಾಲನೆ ನೀಡಿದ ಅವರು, ಈ ಹಿಂದೆ ಟಿಎಪಿಸಿಎಂಎಸ್ ನಿಂದ ಪಡಿತರ ವಿತರಣೆ ಮಾಡುತ್ತಿದ್ದ ಕೇಂದ್ರ ಕೆಲವು ಕಾರಣಾಂತರಗಳಿಂದ ಮುಚ್ಚಿ ಹೋಗಿತ್ತು. ಇದೀಗ ಈ ಭಾಗದ ಜನರಿಗೆ ನೆರವಾಗಲೆಂದು ಜಿಲ್ಲಾಧಿಕಾರಿಗಳಿಗೆ ಆಹಾರ ಪಡಿತರ ವಿತರಣಾ ಕೇಂದ್ರಕ್ಕೆ ಮನವಿ ಮಾಡಿದ್ದೇವು. ಅವರ ಆದೇಶದಂತೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಹೆಚ್.ಮಂಜು ಅವರ ಸಹಕಾರದಲ್ಲಿ ಪುನರ್ ಪ್ರಾರಂಭ ಮಾಡಿದ್ದೇವೆ ಎಂದರು.

ಟಿಎಪಿಸಿಎಂಎಸ್ ಸಂಘಕ್ಕೆ ಆರ್ಥಿಕವಾಗಿ ಶಕ್ತಿ ತುಂಬಲು ತಾಲೂಕಿನ ಎಲ್ಲ ಸೊಸೈಟಿಗಳಿಗೆ ನಮ್ಮ ಸಂಘದ ಮೂಲಕ ಪಡಿತರ ಆಹಾರ ಮತ್ತು ರಸಗೊಬ್ಬರ ವಿತರಣೆ ಮಾಡಲು ಅನುಮತಿ ನೀಡಬೇಕೆಂದು ಆಹಾರ ಮತ್ತು ಸರಬರಾಜು ಇಲಾಖೆ ಸಚಿವರಾದ ಕೆ.ಎಚ್.ಮುನಿಯಪ್ಪ ಅವರನ್ನು ಭೇಟಿ ಮಾಡಿ ಮನವಿ ಮಾಡಲಾಗಿದೆ. ಅವರು ಸಹ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಮ್ಮ ಪ್ರಯತ್ನ ಫಲಿಸಿದರೆ ಸಂಘದ ಕಾರ್ಯ ಚಟುವಟಿಕೆಗಳು ಕ್ರಿಯಾಶೀಲವಾಗಿ ನಡೆಯುವ ಜೊತೆಗೆ ಲಾಭ ಸಹ ಪಡೆಯಬಹುದು ಎಂದು ಸುರೇಶ್ ತಿಳಿಸಿದರು.

1.5ಕೋಟಿ ವೆಚ್ಚದಲ್ಲಿ ಫುಡ್ ಬಜಾರ್ :

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಎಚ್.ಮಂಜು ಮಾತನಾಡಿ, ಬಾಲಗೇರಿಯಲ್ಲಿ ರದ್ದಾಗಿದ್ದ ನ್ಯಾಯಬೆಲೆ ಅಂಗಡಿಗೆ ಎಲ್ಲ ನಿರ್ದೇಶಕರ ಸಹಕಾರದಲ್ಲಿ ಸುಮಾರು 350 ಪಡಿತರ ಕಾರ್ಡ್ ಗಳನ್ನು ಹೊಂದಿರುವ ಕುಟುಂಬಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಪುನರ್ ಆರಂಭ ಮಾಡಿದ್ದೇವೆ. ತಾಲ್ಲೂಕಿನಲ್ಲಿ ಇರುವ 21 ಸೊಸೈಟಿಗಳಿಗೆ ಟಿಎಪಿಸಿಎಂಎಸ್ ಮೂಲಕ ಪಡಿತರ, ರಸಗೊಬ್ಬರ ವಿತರಣೆ ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಆನೇಕಲ್ ಮತ್ತು ಹೊಸಕೋಟೆ ಮಾದರಿಯಲ್ಲಿ ಸುಮಾರು 1.5 ಕೋಟಿ ರುಪಾಯಿ ವೆಚ್ಚದಲ್ಲಿ ಸಿಸಿಎಲ್ ಸಾಲ ಪಡೆದು ರಾಮನಗರದಲ್ಲಿ ಒಂದು ವರ್ಷದಲ್ಲಿ ಪುಡ್ ಬಜಾರ್ ನಿರ್ಮಿಸಲು ರೂಪುರೇಷೆಗಳನ್ನು ಸಿದ್ದಪಡಿಸಿಕೊಂಡಿದ್ದೇವೆ. ಇದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್, ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್, ಶಾಸಕರಾದ ಎಚ್.ಎ.ಇಕ್ಬಾಲ್ ಹುಸೇನ್, ಎಚ್.ಸಿ.ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯ ಎಸ್.ರವಿ ಸಹಕಾರದಲ್ಲಿ ಕಾರ್ಯಗತಗೊಳಿಸಲಾಗುವುದು ಎಂದರು.

ಈ ವೇಳೆ ಸಂಘದ ಉಪಾಧ್ಯಕ್ಷ ರಾಜು, ನಿರ್ದೇಶಕರಾದ ನಾಗರಾಜು, ಮಹದೇವಯ್ಯ, ಪಿ.ಸುಧಾರಾಣಿ, ಶಂಕರ್, ಶ್ರೀನಿವಾಸ್, ಅಂಜನಾಪುರ ವಾಸು , ಸಿಇಒ ಜನಾರ್ದನ್ ಹಾಜರಿದ್ದರು.

28ಕೆಆರ್ ಎಂಎನ್ 3.ಜೆಪಿಜಿ

ರಾಮನಗರ ನಗರಸಭೆ ವ್ಯಾಪ್ತಿಯ ಬಾಲಗೇರಿಯಲ್ಲಿ ಮಂಗಳವಾರ ಆಹಾರ ಪಡಿತರ ವಿತರಣಾ ಕೇಂದ್ರಕ್ಕೆ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ವೈ.ಎಚ್.ಮಂಜು ಹಾಗೂ ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಚಾಲನೆ ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''