-ರಾಜ್ಯ ರೈತ ಸಂಘ, ತಾಲೂಕು ಸಂಯುಕ್ತ ರೈತ ಸಂಘದಿಂದ ಎಸಿಗೆ ಮನವಿ ಸಲ್ಲಿಕೆ
ಕನ್ನಡಪ್ರಭ ವಾರ್ತೆ ಸಾಗರ
ಕಸ್ತೂರಿ ರಂಗನ್ ವರದಿ ತಿರಸ್ಕರಿಸುವಂತೆ ಒತ್ತಾಯಿಸಿ ಹಾಗೂ ಚಾಮರಾಜನಗರದಲ್ಲಿ ರೈತರ ಮೇಲೆ ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ ಕುರಿತು ನ್ಯಾಯಾಂಗ ತನಿಖೆ ನಡೆಸಿ, ಮೃತರ ಕುಟುಂಬಗಳಿಗೆ ಅತಿಹೆಚ್ಚು ಪರಿಹಾರ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ತಾಲೂಕು ಸಂಯುಕ್ತ ರೈತ ಸಂಘದಿಂದ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕಸ್ತೂರಿ ರಂಗನ್ ಪರಿಷ್ಕೃತ ವರದಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು.
ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ, ಪ್ರಧಾನ ಕಾರ್ಯದರ್ಶಿ ಎನ್.ಡಿ.ವಸಂತ ಕುಮಾರ್, ಸಂಯುಕ್ತ ರೈತ ಸಂಘದ ಗೌರವಾಧ್ಯಕ್ಷ ಜಿನೇಶ್ ಕುಮಾರ್, ಅಧ್ಯಕ್ಷ ಹೊಯ್ಸಳ ಗಣಪತಿಯಪ್ಪ, ಎಂ.ಬಿ. ಮಂಜಪ್ಪ, ಸುಂದರ ಸಿಂಗ್, ಪ್ರಮುಖರಾದ ರಾಮಪ್ಪ ಶಿರವಾಳ, ಎಚ್.ಬಿ. ರಾಘವೇಂದ್ರ, ಮಂಜು ವಡ್ನಾಲ, ದೇವು ಆಲಳ್ಳಿ, ರಮೇಶ್ ಐಗಿನಬೈಲು, ಬೇಬಿ ಗೋಳಗೋಡು, ಸತೀಶ್ ಅಂಗಡಿ ಇದ್ದರು.
ಅರಣ್ಯ ಸಿಬ್ಬಂದಿ ನಡೆಸಿದ ಎನ್ಕೌಂಟರ್ ಕುರಿತು ನ್ಯಾಯಾಂಗ ತನಿಖೆ ನಡೆಸಿ, ಮೃತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ತಾಲೂಕು ಸಂಯುಕ್ತ ರೈತ ಸಂಘದಿಂದ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.