ಹಳೆ ಮೀಸಲಾತಿ ಪದ್ಧತಿ ಯಥಾವತ್‌ ಜಾರಿಗೆ ಮನವಿ

KannadaprabhaNewsNetwork |  
Published : Mar 10, 2026, 03:15 AM IST
ಹಳೆ ಮೀಸಲಾತಿ ಪದ್ಧತಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. | Kannada Prabha

ಸಾರಾಂಶ

ಈ ಹಿಂದೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ(ಶೇ. 17) ಮತ್ತು ಪರಿಶಿಷ್ಟ ಪಂಗಡಗಳ(ಶೇ.7) ಮೀಸಲಾತಿಯನ್ನು ಹೆಚ್ಚಳ ಮಾಡಿರುವ ಆದೇಶವನ್ನು ಸಂವಿಧಾನದ 9ನೇ ಷೆಡ್ಯೂಲ್‌ನಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಪ್ರಧಾನಿ ಬಳಿ ನಿಯೋಗ ಹೋಗಬೇಕು.

ಗದಗ: 2022ರ ಪೂರ್ವದಲ್ಲಿನ ಹಳೆ ಮೀಸಲಾತಿ ಪದ್ಧತಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ಬಂಜಾರ, ಭೋವಿ, ಕೊರಚ ಮತ್ತು ಕೊರಮ ಸಮಾಜಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಬಂಜಾರ ಸಮಾಜದ ಹಿರಿಯರಾದ ಕುಬೇರಪ್ಪ ಪವಾರ ಮಾತನಾಡಿ, 2022ರ ಪೂರ್ವದಲ್ಲಿನ ಹಳೆ ಮೀಸಲಾತಿ ಪದ್ಧತಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ನಮ್ಮ ಸಂಘವು ಚರ್ಚಿಸಿ ನಿರ್ಣಯ ತೆಗೆದುಕೊಂಡಿದ್ದು, ಹಳೆಯ ಮೀಸಲಾತಿಯ ನಿಯಮ ಶೇ. 50ರ ಅನ್ವಯ ನೇಮಕಾತಿ ಮತ್ತು ಶೈಕ್ಷಣಿಕ ಪ್ರವೇಶ ಪ್ರಕ್ರಿಯೆಯನ್ನು ಮುಂದುವರಿಸುವುದಾಗಿ ರಾಜ್ಯ ಸರ್ಕಾರ ಪ್ರಕಟಣೆ ಮಾಡಿರುವುದು ಸ್ವಾಗತಾರ್ಹ. ಇದನ್ನು ತ್ವರಿತವಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕು.ಈ ಹಿಂದೆ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿ(ಶೇ. 17) ಮತ್ತು ಪರಿಶಿಷ್ಟ ಪಂಗಡಗಳ(ಶೇ.7) ಮೀಸಲಾತಿಯನ್ನು ಹೆಚ್ಚಳ ಮಾಡಿರುವ ಆದೇಶವನ್ನು ಸಂವಿಧಾನದ 9ನೇ ಷೆಡ್ಯೂಲ್‌ನಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಪ್ರಧಾನಿ ಬಳಿ ನಿಯೋಗ ಹೋಗಬೇಕು.

ರಾಜ್ಯದಲ್ಲಿ ಒಳಮೀಸಲಾತಿಯ ಪ್ರಕ್ರಿಯೆಯ ನಡೆಸುವ ಮುನ್ನ ನಮ್ಮ ಸಮುದಾಯಗಳ ಮುಖಂಡರ ಜತೆಗೆ ಸಮಾಲೋಚನೆ ಮಾಡಬೇಕು. ಶಿಕ್ಷಣ ಪ್ರವೇಶ, ಹಾಸ್ಟೆಲ್ ಪ್ರವೇಶ ಮತ್ತು ಉದ್ಯೋಗ ನೇಮಕಾತಿ ರೋಸ್ಟರ್ ಹಂಚಿಕೆ ಮಾಡಿ ಈ ಹಿಂದೆ ಸರ್ಕಾರ ಹೊರಡಿಸಿರುವ ಎಲ್ಲ ಆದೇಶ, ಸುತ್ತೋಲೆಗಳನ್ನು ಹಿಂಪಡೆಯಬೇಕು. ಈಗಾಗಲೇ ನಡೆಸಲಾಗಿರುವ ವಿವಿಧ ನೇಮಕಾತಿಗಳನ್ನು ರದ್ದುಗೊಳಿಸಬೇಕು. ಪರಿಶಿಷ್ಟ ಜಾತಿ ಪವರ್ಗ ಎ,ಬಿ,ಸಿ, ಎಂದು ನಮೂದಿಸಿ ನೀಡಲಾಗಿರುವ ಜಾತಿ ಪ್ರಮಾಣಪತ್ರಗಳನ್ನು ಹಿಂಪಡೆಯಬೇಕು. ಹಳೆಯ ಜಾತಿ ಪ್ರಮಾಣ ಪತ್ರಗಳನ್ನೆ ಪರಿಗಣಿಸಬೇಕು. ಉಚ್ಚ ನ್ಯಾಯಾಲಯದ ತೀರ್ಪಿನ ನಂತರವೆ ಒಳಮೀಸಲಾತಿಯನ್ನು ಮಾನ್ಯ ಮಾಡಬೇಕು.

ಕೇರಳ ಮಹಾರಾಷ್ಟ್ರ, ಗೋವಾ ಮುಂತಾದ ರಾಜ್ಯಗಳಿಗೆ ವಲಸೆ ಹೋಗಿರುವ ಬಂಜಾರ ಕೂಲಿ ಕಾರ್ಮಿಕರ ಸಮೀಕ್ಷೆ ಮಾಡಲು ಪ್ರತ್ಯೇಕ ಸಮೀಕ್ಷಾ ತಂಡವನ್ನು ರಚನೆ ಮಾಡಿದ ನಂತರವೇ ಒಳಮೀಸಲಾತಿಯನ್ನು ಜಾರಿಗೆ ತರಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಈ ವೇಳೆ ಬಂಜಾರ ಸಮಾಜದ ಹಿರಿಯರಾದ ಕುಬೇರಪ್ಪ ಪವಾರ, ಪಾಂಡಪ್ಪ ಪೂಜಾರಿ, ಕೇಶಪ್ಪ ನಭಾಪುರ, ಪುಟ್ಟಪ್ಪ ಚನ್ನಳ್ಳಿ. ಶಿವು ನಾಯಕ, ಕೇಶವ, ಕೇಶವ ಛಬ್ಬಿ, ಧನಂಜಯ್ ನಭಾಪುರ, ವಿನಾಯಕ್ ರಾಥೋಡ, ತುಕಾರಾಮ ಲಮಾಣಿ, ತಿಪ್ಪಣ್ಣ ಪೂಜಾರಿ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನಿಷ್ಠವೇತನ ನೀಡಿ, ಇಲ್ಲವಾದರೆ ಸೀರೆ ವಾಪಸ್‌ ಕಳುಹಿಸುತ್ತೇವೆ-ರೇವಣಕರ
ಕಾರಿನ ಮೇಲೆ ಕಂಟೈನರ್ ಬಿದ್ದು 8 ವರ್ಷದ ಮಗು ಬಲಿ