ಕಾರ್ಕಳ: ನಿವೇಶನ, ಭೂಮಿಗಾಗಿ ಕೊರಗ ಸಂಘಗಳ ಒಕ್ಕೂಟ ಮನವಿ

KannadaprabhaNewsNetwork |  
Published : Dec 26, 2024, 01:03 AM IST
25ಕೊರಗ | Kannada Prabha

ಸಾರಾಂಶ

ಜನವರಿ 4ರಂದು ಇಲಾಖೆಯ ವತಿಯಿಂದ ನಡೆಸುವ ಅಕ್ರಮ ಸಕ್ರಮ ಸಭೆಯಲ್ಲಿ ಕೊರಗರ ಅರ್ಜಿಗಳನ್ನು ವಿಶೇಷವಾಗಿ ಪರಿಗಣಿಸಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ತಹಸೀಲ್ದಾರ್ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಕಾರ್ಕಳ

ಇಲ್ಲಿನ ಕೊರಗ ಸಂಘಗಳ ಒಕ್ಕೂಟವು ತಮ್ಮ ಸಮುದಾಯಕ್ಕೆ ನಿವೇಶನ, ಭೂಮಿಯನ್ನು ವಿತರಿಸುವಂತೆ ಆಗ್ರಹಿಸಿ ಕಾರ್ಕಳ ತಾಲೂಕು ತಹಸೀಲ್ದಾರ್‌ಗೆ ಮನವಿ ಸಲ್ಲಿಸಿತು.

ಮುಖ್ಯವಾಗಿ ಇಲ್ಲಿನ ಬಂಡಿಮಠದಲ್ಲಿರುವ ಹದಿಮೂರು ಕುಟುಂಬಗಳ ನಿವೇಶನದ ಹಕ್ಕು ಪತ್ರಕ್ಕಾಗಿ ಆಗ್ರಹಿಸಲಾಯಿತು. ಅಲ್ಲದೆ ದರ್ಕಾಸು ಭೂಮಿಗಾಗಿ ಸಲ್ಲಿಸಿರುವ ಅರ್ಜಿಗಳ ಮಂಜೂರಾತಿಯ ಬಗ್ಗೆಯೂ ತಹಸೀಲ್ದಾರರೊಂದಿಗೆ ಸಮುದಾಯದ ಮುಖಂಡರು ಮಾತುಕತೆ ನಡೆಸಿದರು. ಜನವರಿ 4ರಂದು ಇಲಾಖೆಯ ವತಿಯಿಂದ ನಡೆಸುವ ಅಕ್ರಮ ಸಕ್ರಮ ಸಭೆಯಲ್ಲಿ ಕೊರಗರ ಅರ್ಜಿಗಳನ್ನು ವಿಶೇಷವಾಗಿ ಪರಿಗಣಿಸಿ ಸಮಸ್ಯೆಗಳನ್ನು ಪರಿಹರಿಸುವುದಾಗಿ ತಹಸೀಲ್ದಾರ್ ಭರವಸೆ ನೀಡಿದರು ಮತ್ತು 10 ದಿನಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರತ್ಯೇಕ ಸಭೆ ನಡೆಸಿ, ಶೀಘ್ರವಾಗಿ ಇತರ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ಮಾಡುವುದಾಗಿಯೂ ತಿಳಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಪ್ರಮುಖರಾದ ಪುತ್ರನ್ ಹೆಬ್ರಿ, ನರಸಿಂಹ ಪೆರ್ಡೂರು, ಶೇಖರ್ ಕೆಂಜೂರು, ಅಮರ್ ಪಳ್ಳಿ ಹಾಗೂ ಕಾರ್ಕಳ ಬಂಡಿಮಠದ ನಿವಾಸಿಗಳಾದ ಸುನಂದಾ, ಲೀಲಾ, ಲಲಿತಾ, ಚಂದ್ರಾವತಿ, ಶಕುಂತಲಾ, ಗಣೇಶ್, ವಸಂತ, ಪ್ರಸಾದ್, ಶಶಿಕಲಾ ನಕ್ರೆ, ಅಕ್ಕು ತೆಳ್ಳಾರ್ ಮತ್ತು ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ