ನದಿಗೆ ವಿಶೇಷ ಸಂರಕ್ಷಣೆಗೆ ಸರ್ಕಾರಕ್ಕೆ ಮನವಿ

KannadaprabhaNewsNetwork |  
Published : Jun 18, 2025, 11:49 PM IST
18ಎಚ್ಎಸ್ಎನ್15 : ಮೈದುಂಬಿ ಹರಿಯುತ್ತಿರುವ ಕಾವೇರಿ ನದಿ. | Kannada Prabha

ಸಾರಾಂಶ

ಈ ಬಾರಿ ಜೂನ್ ತಿಂಗಳಲ್ಲಿ ಕಾವೇರಿ ನದಿ 2ನೇ ಬಾರಿಗೆ ಮೈದುಂಬಿ ಹರಿಯುತ್ತಿದ್ದು, ಸುತ್ತಮುತ್ತಲಿನ ಕೆಲ ಗ್ರಾಮಸ್ಥರು ಅಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ. ಜೀವಜಲವಾದ ಕಾವೇರಿ ನದಿ ಸಂರಕ್ಷಣೆಗೆ ವಿಶೇಷ ಕಾಯ್ದೆ ರೂಪುಗೊಳ್ಳಬೇಕು ಎಂಬುದು ನಮ್ಮ ಆಶಯವಾಗಿದ್ದು, ಇಲ್ಲಿಯ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ವತಿಯಿಂದ ನಿರಂತರ ಕಾವೇರಿ ಅಭಿಯಾನ ಯಾತ್ರೆ ಮಾಡಿಕೊಂಡು ಬರುತ್ತಿರುವುದಕ್ಕೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಅರ್.ಎಸ್ ನರಸಿಂಹಮೂರ್ತಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಕಾವೇರಿ ನದಿ ಉಳಿಸಲು ನದಿ ಸಂರಕ್ಷಣೆಗೆ ವಿಶೇಷ ಕಾಯ್ದೆ ಜಾರಿಗೆ ತಂದು ಕಾವೇರಿ ಮಲಿನವಾಗದ ರೀತಿ ಸ್ವಚ್ಛತೆ ಕಾಪಾಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಅವರು ಒತ್ತಾಯಿಸಿದರು.

ರಾಮನಾಥಪುರ: ಈ ಬಾರಿ ಜೂನ್ ತಿಂಗಳಲ್ಲಿ ಕಾವೇರಿ ನದಿ 2ನೇ ಬಾರಿಗೆ ಮೈದುಂಬಿ ಹರಿಯುತ್ತಿದ್ದು, ಸುತ್ತಮುತ್ತಲಿನ ಕೆಲ ಗ್ರಾಮಸ್ಥರು ಅಗಮಿಸಿ ಪೂಜೆ ಸಲ್ಲಿಸುತ್ತಿದ್ದಾರೆ.

ಜೀವಜಲವಾದ ಕಾವೇರಿ ನದಿ ಸಂರಕ್ಷಣೆಗೆ ವಿಶೇಷ ಕಾಯ್ದೆ ರೂಪುಗೊಳ್ಳಬೇಕು ಎಂಬುದು ನಮ್ಮ ಆಶಯವಾಗಿದ್ದು, ಇಲ್ಲಿಯ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ವತಿಯಿಂದ ನಿರಂತರ ಕಾವೇರಿ ಅಭಿಯಾನ ಯಾತ್ರೆ ಮಾಡಿಕೊಂಡು ಬರುತ್ತಿರುವುದಕ್ಕೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಅರ್.ಎಸ್ ನರಸಿಂಹಮೂರ್ತಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಡಗಿನ ತಲಕಾವೇರಿಯಲ್ಲಿ ಮಳೆ ಆರ್ಭಟ ಹೆಚ್ಚಾಗಿ ಕಾವೇರಿ ನದಿ ನೀರು ಪೂರ್ಣ ಕಾವೇರಿಯಾಗಿ ಮೈದುಂಬಿ ಹರಿಸುತ್ತಿರುವ ಪರಿಣಾಮ ರಾಮನಾಥಪುರದ ರಾಮೇಶ್ವರಸ್ವಾಮಿ ದೇವಾಲಯದ ಪಕ್ಕ ವಹ್ನಿಪುಕ್ಷರಣಿಯಲ್ಲಿ ಕಾವೇರಿ ಮೈದುಂಬಿ ಹರಿಯುತ್ತಿದ್ದು, ಹಿಂದಿನಿಂದಲೂ ಸಾಧುಸಂತರು ಹಾಗೂ ಸಮಿತಿಯವರು ಕಾವೇರಿ ರಕ್ಷಣೆಗಾಗಿ ಆಗ್ರಹಿಸಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಹಾಗೂ ಜನಪ್ರತಿನಿಧಿಗಳನ್ನು ಒತ್ತಾಯಿಸುತ್ತಾ ಬಂದಿದ್ದಾರೆ. ಇಂತಹ ಸಂದರ್ಭದಲ್ಲಿ ಕಾವೇರಿ ನದಿ ಉಳಿಸಲು ನದಿ ಸಂರಕ್ಷಣೆಗೆ ವಿಶೇಷ ಕಾಯ್ದೆ ಜಾರಿಗೆ ತಂದು ಕಾವೇರಿ ಮಲಿನವಾಗದ ರೀತಿ ಸ್ವಚ್ಛತೆ ಕಾಪಾಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಅವರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ ಅಧ್ಯಕ್ಷರಾದ ಎಂ.ಎನ್. ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ಕಾಳಬೋಯಿ, ಖಜಾಂಚಿ ರಘು , ಸಂಘಟನೆ ಕಾರ್ಯದರ್ಶಿ ಪಿ.ಎನ್.ಟಿ. ಶಿವಪ್ಪ, ತಾಲೂಕು ಅಧ್ಯಕ್ಷ ಸಿದ್ಧರಾಜು, ಖಜಾಂಚಿ ಕೇಶವ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲು ಸಾಲು ರಜೆ, ಪ್ರವಾಸಿ ತಾಣ ರಷ್‌
ಭೂಮಿ ಮಾರಿದ ಇನ್ಫಿ ಬಗ್ಗೆ ಕಾರ್ತಿ ತೀವ್ರ ಆಕ್ರೋಶ