ಅರ್ಹರಿಗೆ ಪಡಿತರ ಚೀಟಿ ನೀಡಲು ಸರ್ಕಾರಕ್ಕೆ ಮನವಿ

KannadaprabhaNewsNetwork |  
Published : Sep 21, 2025, 02:00 AM IST
೨೦ಕೆಎಲ್‌ಆರ್-೮ಕೋಲಾರದ ತಾಪಂ ಸಭಾಂಗಣದಲ್ಲಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಮಿತಿಯ ಅಧ್ಯಕ್ಷ ವಿ.ಎಂ.ಮುನಿಯಪ್ಪ ಇದ್ದರು. | Kannada Prabha

ಸಾರಾಂಶ

ಸರ್ಕಾರ ಗ್ಯಾರಂಟಿ ಯೋಜನೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದರ ಜತೆಗೆ ಯೋಜನೆಯು ಎಲ್ಲ ಫಲಾನುಭವಿಗಳಿಗೆ ದೊರಕುವಂತೆ ಕರ್ತವ್ಯ ನಿರ್ವಹಿಸಬೇಕು. ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಯೊಂದು ಇಲಾಖೆಯ ಮುಂದೆ ಪ್ರಚಾರದ ನಾಮಫಲಕಗಳನ್ನು ಅಳವಡಿಸಬೇಕು

ಕನ್ನಡಪ್ರಭ ವಾರ್ತೆ ಕೋಲಾರತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ ಸಮಿತಿಯ ಅಧ್ಯಕ್ಷ ವಿ.ಎಂ.ಮುನಿಯಪ್ಪ ಅಧ್ಯಕ್ಷತೆಯಲ್ಲಿ ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.ಸಭೆಯಲ್ಲಿ ಹಿಂದಿನ ಪ್ರಗತಿ ಪರಿಶೀಲನಾ ಸಭೆಯ ಅನುಷ್ಠಾನ ವರದಿ ಮಂಡಿಸಿ ಅದರ ಸಾಧಕ ಬಾಧಕಗಳ ಬಗ್ಗೆ ಚರ್ಚೆಗಳ ಜತೆಗೆ ಯಾವ ಹಂತದಲ್ಲಿ ಅಧಿಕಾರಿಗಳು ಯೋಜನೆಯ ಪ್ರಗತಿಗೆ ಕಾರ್ಯೊನ್ಮುಖರಾಗಿದ್ದಾರೆ ಎಂಬುದರ ಬಗ್ಗೆ ಚರ್ಚೆ ನಡೆಸಲಾಯಿತು.ಪಡಿತರ ಚೀಟಿ ನೀಡಲು ಮನವಿ

ಸಮಿತಿಯ ಅಧ್ಯಕ್ಷ ವಿ.ಎಂ ಮುನಿಯಪ್ಪ ಮಾತನಾಡಿ, ಕೆಲವು ಕಾರಣಾಂತರಗಳಿಂದ ಅರ್ಹ ಫಲಾನುಭವಿಗಳು ರೇಷನ್ ಕಾರ್ಡ್ ಮಾಡಿಸಲು ಸಾಧ್ಯವಾಗಿಲ್ಲ ಕೂಡಲೇ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ.ರೇವಣ್ಣರಿಗೆ ಪತ್ರ ಬರೆದು ರಾಜ್ಯಾದ್ಯಂತ ಕಾರ್ಡ್ ಮಾಡಿಕೊಳ್ಳಲು ಅವಕಾಶ ನೀಡುವಂತೆ ಸರ್ಕಾರದ ಮೇಲೆ ಒತ್ತಡ ತರುವಂತೆ ಮನವಿ ಮಾಡಲಾಗುವುದು ಎಂದರು.

ಸರ್ಕಾರ ಗ್ಯಾರಂಟಿ ಯೋಜನೆಗಳ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದರ ಜತೆಗೆ ಯೋಜನೆಯು ಎಲ್ಲ ಫಲಾನುಭವಿಗಳಿಗೆ ದೊರಕುವಂತೆ ಕರ್ತವ್ಯ ನಿರ್ವಹಿಸಬೇಕು. ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಯೊಂದು ಇಲಾಖೆಯ ಮುಂದೆ ಪ್ರಚಾರದ ನಾಮಫಲಕಗಳನ್ನು ಅಳವಡಿಸಬೇಕು ಎಂದು ಹೇಳಿದರು.

ಯೋಜನೆ ಎಲ್ಲರಿಗೂ ತಲುಪಬೇಕು

ಬಡಜನರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಮಾಡಿದೆ. ಯೋಜನೆಯ ಲಾಭ ಎಲ್ಲರ ಮನೆಗೆ ತಲುಪಿಸಲು ಅಧಿಕಾರಿಗಳು ಮುಂದಾಗಬೇಕು. ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಲಕಾಲಕ್ಕೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಸಮಸ್ಯೆ ಇದ್ದರೆ ಕೂಡಲೇ ಬಗೆಹರಿಸಬೇಕು ಎಂದರು.

ಪ್ರಚಾರಾಂದೋಲನ ಅಗತ್ಯ

ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್ ಮಾತನಾಡಿ, ಸರ್ಕಾರದ ಯೋಜನೆಗಳು ಅರ್ಹ ಪಲಾನುಭವಿಗಳಿಗೆ ತಲುಪಬೇಕು ಇದರಲ್ಲಿ ಲೋಪ ದೋಷಗಳ ಇದ್ದರೆ ಅಧಿಕಾರಿಗಳನ್ನು ಹೊಣೆ ಮಾಡಲಾಗುತ್ತದೆ. ಜನರಿಗೆ ತೊಂದರೆ ಕೊಡುವ ಪಡಿತರ ಅಂಗಡಿಗಳ ಮೇಲೆ ಕ್ರಮ ಕೈಗೊಳ್ಳಬೇಕು ತೂಕ ಮತ್ತು ಅಳತೆಯಲ್ಲಿ ವ್ಯತ್ಯಾಸವಾಗದಂತೆ ಕ್ರಮ ವಹಿಸಬೇಕು. ಕೋಲಾರ ನಗರ ಸಾರಿಗೆ ಬಗ್ಗೆ ಪ್ರಚಾರಾಂದೋಲನ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಪಂ ಇಒ ಮಂಜುನಾಥ್, ಸಹಾಯಕ ನಿರ್ದೇಶಕ ಮಂಜುನಾಥ್ ಪ್ರಸಾದ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಇದಾಹಿತ್ ಉಲ್ಲಾ ಷರೀಫ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ