ಸೋಮವಾರಪೇಟೆ: ಕಂದಾಯ ಇಲಾಖೆ ಸಮಸ್ಯೆ ಬಗೆಹರಿಸಲು ಮನವಿ

KannadaprabhaNewsNetwork |  
Published : Oct 21, 2024, 12:39 AM IST
ಸಲ್ಲಿಸಲಾಯಿತು. | Kannada Prabha

ಸಾರಾಂಶ

ತಹಸೀಲ್ದಾರ್‌ ಶ್ರೀಧರ್‌ ಕಂಕನವಾಡಿ ಅವರನ್ನು ಭೇಟಿ ಮಾಡಿ ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಸಲಾಯಿತು. ಅರ್ಜಿಗಳನ್ನು ತನ್ನ ಹಂತದಲ್ಲಿ ವಿಲೇವಾರಿ ಮಾಡಲು ಕ್ರಮ ವಹಿಸಲಾಗುವುದು ಎಂದು ತಹಸೀಲ್ದಾರ್‌ ಭರವಸೆ ನೀಡಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ವತಿಯಿಂದ ತಹಸೀಲ್ದಾರ್ ಶ್ರೀಧರ್ ಕಂಕನವಾಡಿ ಅವರನ್ನು ಭೇಟಿ ಮಾಡಿ ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮನವಿ ಸಲ್ಲಿಸಲಾಯಿತು.

ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್‌ರನ್ನು ಭೇಟಿ ಮಾಡಿದ ನಿಯೋಗ, ಕಳೆದ ಹಲವಾರು ತಿಂಗಳುಗಳಿಂದ ತಾಲೂಕು ಕಚೇರಿಗೆ ನೀಡುತ್ತಾ ಬಂದಿರುವ ಮನವಿಗಳ ಪ್ರಗತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಸಿ ಮತ್ತು ಡಿ ಜಾಗ ಸಮಸ್ಯೆ, ಕಂದಾಯ ಭೂಮಿಗೆ ದಾಖಲೆ ನೀಡದೇ ಎದುರಾಗಿರುವ ಸಮಸ್ಯೆಗಳು, ಬಗರ್‌ಹುಕುಂ ಅಡಿಯಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿ, ಪೋಡಿ, ದುರಸ್ತಿ ಸೇರಿದಂತೆ ಇನ್ನಿತರ ಹಲವಾರು ಸಮಸ್ಯೆಗಳಿಗೆ ಕಂದಾಯ ಇಲಾಖೆಯಿಂದ ಯಾವುದೇ ಸ್ಪಂದನೆ ಲಭಿಸುತ್ತಿಲ್ಲ ಎಂದು ಸಮಿತಿಯ ಅಧ್ಯಕ್ಷ ಅರುಣ್ ಕುಮಾರ್ ಗಮನ ಸೆಳೆದರು.

ಶಾಂತಳ್ಳಿ ಹೋಬಳಿ ನಾಡಕಚೇರಿ ಸೇರಿದಂತೆ ಕಂದಾಯ ಇಲಾಖೆಯ ಹಲವಷ್ಟು ಕಚೇರಿಗಳಲ್ಲಿ ಸಿಬ್ಬಂದಿ ಇರುವುದಿಲ್ಲ. ಸರಿಯಾದ ಸಮಯ ಪಾಲನೆ ಮಾಡುತ್ತಿಲ್ಲ. ತಾಲೂಕು ಕಚೇರಿಯನ್ನೂ ಒಳಗೊಂಡಂತೆ ಕಂದಾಯ ಇಲಾಖೆಯ ಇತರ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯನ್ನು ಅಳವಡಿಸಬೇಕು ಎಂದು ಒತ್ತಾಯಿಸಿದರು.

ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಇರಬೇಕೆಂಬ ನಿಯಮವನ್ನು ಸರ್ಕಾರ ಅಳವಡಿಸಿದ್ದರೂ ಹಲವಷ್ಟು ಅಧಿಕಾರಿಗಳು ಸೋಮವಾರಪೇಟೆಯಲ್ಲಿ ನೆಲೆಸಿಲ್ಲ.ಇದರೊಂದಿಗೆ ಕಂದಾಯ ಇಲಾಖೆಯಲ್ಲಿ ಕಳೆದ ಹಲವಾರು ವರ್ಷಗಳಿಂದಲೂ ಒಂದೇ ಸ್ಥಳದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ತಕ್ಷಣ ಬೇರೆಡೆಗೆ ವರ್ಗಾವಣೆ ಮಾಡಬೇಕು ಎಂದು ಪದಾಧಿಕಾರಿಗಳು ಮನವಿ ಮಾಡಿದರು.

ಈ ಸಂದರ್ಭ ಮಾತನಾಡಿದ ತಹಸೀಲ್ದಾರ್ ಶ್ರೀಧರ್ ಅವರು, ತಾಲೂಕು ಕಚೇರಿಯಲ್ಲಿ ಬಯೋಮೆಟ್ರಿಕ್ ಅಳವಡಿಸಲಾಗುವುದು. ಅರ್ಜಿಗಳನ್ನು ತನ್ನ ಹಂತದಲ್ಲಿ ವಿಲೇವಾರಿ ಮಾಡಲು ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭ ತಾಲೂಕು ಅಭಿವೃದ್ಧಿ ಹೋರಾಟ ಸಮಿತಿ ಉಪಾಧ್ಯಕ್ಷ ಕೆ.ಎನ್. ದೀಪಕ್, ಕಾರ್ಯದರ್ಶಿ ಆದರ್ಶ್ ತಮ್ಮಯ್ಯ, ಪದಾಧಿಕಾರಿಗಳಾದ ಹೂವಯ್ಯ, ಮಂಜೂರು ತಮ್ಮಣ್ಣಿ, ಸುಲೈಮಾನ್, ನ.ಲ. ವಿಜಯ, ತ್ರಿಶೂಲ್, ಅನಂತ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿದ್ದರಾಮಯ್ಯ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ : ಕುತೂಹಲ!
ಬೆಂಗ್ಳೂರಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ