ಕಡಲೆ ಖರೀದಿ ಕೇಂದ್ರ ಪ್ರಾರಂಭಿಸಲು ರಾಜ್ಯ ಸರ್ಕಾರಕ್ಕೆ ಮನವಿ

KannadaprabhaNewsNetwork |  
Published : Jan 09, 2026, 02:30 AM IST
(8ಎನ್.ಆರ್.ಡಿ1 ಸರ್ಕಾರ ಕಡಲೆ ಕೇಂದ್ರ ಪ್ರಾರಂಭ ಮಾಡಬೇಕೆಂದು ರೈತರು ತಹಸೀಲ್ದಾರರಗೆ ಮನವಿ ನೀಡಿದರು.)   | Kannada Prabha

ಸಾರಾಂಶ

ಮುಂಗಾರು ಬೆಳೆ ಅತಿವೃಷ್ಟಿಯಿಂದಾಗಿ ಹಾನಿಯಾಗಿದ್ದು, ಹಲವು ರೈತರಿಗೆ ಇನ್ನೂ ಪರಿಹಾರ ಬಂದಿಲ್ಲ. ನೀರಾವರಿ ಕಾಲುವೆಗೆ ನೀರು ಬಿಟ್ಟು ಎರಡು ತಿಂಗಳಾದರೂ ನೀರು ನಿರ್ವಹಣೆ ಮಾಡಲು ಟೆಂಡರ್ ಮಾಡಿಲ್ಲ.

ನರಗುಂದ: ಹಿಂಗಾರು ಹಂಗಾಮಿನಲ್ಲಿ ತಾಲೂಕಿನಲ್ಲಿ ಶೇ. 75ರಷ್ಟು ಕಡಲೆ ಬಿತ್ತನೆಯಾಗಿದೆ. 20 ದಿನದೊಳಗಾಗಿ ಫಸಲು ಕಟಾವಿಗೆ ಬರಲಿದೆ. ಸರ್ಕಾರ ಶೀಘ್ರ ಖರೀದಿ ಕೇಂದ್ರ ಪ್ರಾರಂಭಿಸಬೇಕು. ಪ್ರತಿ ರೈತರ ಖಾತೆಯಿಂದ 30 ಕ್ವಿಂಟಲ್ ಕಡಲೆ ಖರೀದಿ ಮಾಡಬೇಕೆಂದು ಭಾರತೀಯ ಕಿಸಾನ್ ಸಂಘದ ಜಿಲ್ಲಾಧ್ಯಕ್ಷ ಎಸ್ .ಎಸ್. ಪಾಟೀಲ ಆಗ್ರಹಿಸಿದರು.

ಗುರುವಾರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಭಾರತೀಯ ಕಿಸಾನ್ ಸಂಘ ನರಗುಂದ ಘಟಕದಿಂದ ತಹಸೀಲ್ದಾರರಿಗೆ ಮನವಿ ನೀಡಿ ನಂತರ ಮಾತನಾಡಿ, ಪ್ರಸಕ್ತ ವರ್ಷ ಹಿಂಗಾರು ಹಂಗಾಮಿನಲ್ಲಿ ಕಡಿಮೆ ತೇವಾಂಶದಲ್ಲಿ ಬೆಳೆಯಾದ ಕಡಲೆಯನ್ನು ರೈತ ಸಮುದಾಯ ತಾಲೂಕಿನಲ್ಲಿ ರೈತರು ಬಿತ್ತನೆ ಮಾಡಿದ್ದಾರೆ. ಆದ್ದರಿಂದ ಬೆಳೆಯನ್ನು ರೈತರು ಈಗಾಗಲೇ ಕಟಾವು ಮಾಡಲು ಪ್ರಾರಂಭಿಸಿದ್ದಾರೆ. ಸರ್ಕಾರ ಬೇಗ ಕಡಲೆ ಖರೀದಿ ಮಾಡಲು ಬೆಂಬಲ ಬೆಲೆ ಕೇಂದ್ರ ಪ್ರಾರಂಭಿಸಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.

ಮುಂಗಾರು ಬೆಳೆ ಅತಿವೃಷ್ಟಿಯಿಂದಾಗಿ ಹಾನಿಯಾಗಿದ್ದು, ಹಲವು ರೈತರಿಗೆ ಇನ್ನೂ ಪರಿಹಾರ ಬಂದಿಲ್ಲ. ನೀರಾವರಿ ಕಾಲುವೆಗೆ ನೀರು ಬಿಟ್ಟು ಎರಡು ತಿಂಗಳಾದರೂ ನೀರು ನಿರ್ವಹಣೆ ಮಾಡಲು ಟೆಂಡರ್ ಮಾಡಿಲ್ಲ. ರೈತರ ಜಮೀನಿಗೆ ನೀರು ಬರದೆ ಬೆಳೆಗಳು ಕುಂಠಿತಗೊಂಡಿವೆ. ನೀರಾವರಿ ಇಲಾಖಾ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಿ ರೈತರಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.ತಾಲೂಕಾಧ್ಯಕ್ಷ ನಾಗೇಶ ಅಪ್ಪೋಜಿ ಮಾತನಾಡಿ, ಹದಲಿ ಗಂಗಾಪುರ ಜಾಕವೆಲ್‌ಗಳು ಇನ್ನೂ ಪ್ರಾರಂಭವಾಗಿಲ್ಲ. ಜಾಕವೆಲ್‌ ಅವಲಂಬಿತ ಜಮೀನುಗಳಲ್ಲಿನ ಬೆಳೆಗಳು ನೀರು ಇಲ್ಲದೇ ಒಣಗುತ್ತಿವೆ. ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಕರ್ತವ್ಯಲೋಪದಿಂದ ರೈತರು ನಷ್ಟವನ್ನು ಅನುಭವಿಸುತ್ತಿದ್ದಾರೆ. ಅಂತಹ ರೈತರಿಗೆ ನೀರಾವರಿ ಇಲಾಖೆ ಎಕರೆಗೆ ₹50,000 ಪರಿಹಾರ ಒದಗಿಸಬೇಕು ಎಂದರು. ಉಪತಹಸೀಲ್ದಾರ್ ಪರಶುರಾಮ ಕಲಾಲ ರೈತರ ಮನವಿ ಸ್ವೀಕರಿಸಿ ಸರ್ಕಾರಕ್ಕೆ ರವಾನೆ ಮಾಡಲಾಗುವುದೆಂದು ಹೇಳಿದರು.

ಈ ಸಂದರ್ಭದಲ್ಲಿ ವಿಠ್ಠಲ ಮುಧೋಳೆ, ಮುತ್ತು ಯಲಿಗಾರ, ಹನುಮಂತ ಹಡಗಲಿ, ಅಡಿವೆಪ್ಪ ಮೆಣಸಿನಕಾಯಿ, ಶ್ರೀಶೈಲ ಮೇಟಿ, ಬಸವರಾಜ ಘಾಟಗೆ, ಯೋಗೇಶ ಗುಡಾರದ, ಎಂ.ಎಸ್. ಹಂಚಿನಾಳ, ಶಿದ್ದನಗೌಡ ವೀರನಗೌಡ್ರ, ಶರಣಬಸಪ್ಪ ಪಾರ್ವತಿ ಸೇರಿದಂತೆ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ