ಹುಬ್ಬಳ್ಳಿ:
ಅವರು ಭಾನುವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಕು ಹರಿಯುವ ಮೊದಲೇ 6 ಗಂಟೆಗೂ ಮುನ್ನ ನಮಾಜ್ ಮಾಡಬಹುದು. ಆದರೆ, ಹಿಂದೂಗಳು ಹನುಮಾನ್ ಚಾಲೀಸ್ ಹಾಕುವುದು ತಪ್ಪೇ? ಹನುಮಾನ್ ಚಾಲೀಸ್ ಪಠಣ ಪ್ರಕರಣದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆ ಖಂಡನೀಯ ಎಂದರು.
ಈ ಹಿಂದೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದಾಗಲೂ ಹೀಗೇ ಹಿಂದೂ ವಿರೋಧಿ ನೀತಿ ಅನುಸರಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕರ್ನಾಟಕವನ್ನು ಆಳುತ್ತಿದ್ದಾರೋ? ಅಥವಾ ಮೂಲಭೂತವಾದಿ ಇಸ್ಲಾಮಿಕ್ ರಾಷ್ಟ್ರವನ್ನು ಆಳುತ್ತಿದ್ದಾರೋ? ಎಂದು ತರಾಟೆಗೆ ತೆಗೆದುಕೊಂಡರು. ರಾಜ್ಯ ಸರ್ಕಾರ ಕೂಡಲೇ ಹನುಮಾನ್ ಚಾಲೀಸ್ ಪಠಿಸಿದವರ ಮೇಲೆ ಪ್ರಕರಣ ದಾಖಲಿಸಿರುವುದನ್ನು ಕೈ ಬಿಡಬೇಕು ಎಂದು ಒತ್ತಾಯಿಸಿದ ಅವರು, ಕೇಂದ್ರದ ಅನುದಾನ ಹಂಚಿಕೆ ಬಗ್ಗೆ ಈಗಾಗಲೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿವರ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ನಾಯಕರು ಅನುದಾನ ಹಂಚಿಕೆ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎನ್ನುತ್ತಿದ್ದಾರೆ. ಬಹಿರಂಗ ಚರ್ಚೆ ಎಂದರೇನು? ಸಾರ್ವಜನಿಕರನ್ನು ಕರೆತಂದು ಹೊಡೆದಾಡುವುದು ಇರುತ್ತದೆಯೇ? ಮಾಧ್ಯಮಗಳ ಮೂಲಕ ಸದ್ಯ ನಡೆಯುತ್ತಿರುವುದು ಬಹಿರಂಗ ಚರ್ಚೆ ಅಲ್ಲವೇ ಎಂದು ಪ್ರಶ್ನಿಸಿದರು.ಒಂದೇ ವೇದಿಕೆಯಲ್ಲಿ ಚರ್ಚೆಗೆ ಸಿದ್ಧ:
ನೀವೇನು ಸತ್ಯ ಹರಿಶ್ಚಂದ್ರರಾ?
ಚೀನಾಕ್ಕೆ ಭಾರತ ಭೂಮಿ ಬಿಟ್ಟುಕೊಟ್ಟಿದೆ ಎಂಬ ಕಾಂಗ್ರೆಸ್ ಟೀಕೆಗೆ ಉತ್ತರಿಸಿದ ಜೋಶಿ, ನೀವೇನು ಸತ್ಯ ಹರಿಶ್ಚಂದ್ರರಾ? ಹಾಗಿದ್ದರೆ ಜನ ನಿಮ್ಮನ್ನು ಯಾಕೆ ಮೂಲೆಗುಂಪು ಮಾಡುತ್ತಿದ್ದರು? ನೀವು ಹುಚ್ಚರಂತೆ ಮಾತನಾಡಿದ್ದಕ್ಕೆ ಜನ ನಿಮ್ಮನ್ನು ಸೋಲಿಸಿದ್ದಾರೆ. ಕಾಂಗ್ರೆಸ್ ಮತ್ತು ಸುಳ್ಳು ಒಂದು ನಾಣ್ಯದ ಎರಡು ಮುಖ ಎಂದರು.