ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಇಲ್ಲಿನ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾವು ಬಿಡುಗಡೆ ಮಾಡಿದ ಪ್ರಣಾಳಿಕೆಯಲ್ಲಿ ದೇಶದಲ್ಲಿ ನಗದು ರಹಿತ ವಾಣಿಜ್ಯ ವಹಿವಾಟಿಗೆ, ಸಾಮಾಜಿಕ ಸವಲತ್ತು ಕಲ್ಪಿಸಿಕೊಡಲು ಹಾಗೂ ಶೋಷಿತ ಸಮುದಾಯದ ಏಳ್ಗೆಗೆ ಆದ್ಯತೆ ನೀಡಿದ್ದೇವೆ ಎಂದರು.
ದೇಶದ ಮೂಲಭೂತ ಸೌಕರ್ಯ ಅಭಿವೃದ್ಧಿ ಪಡಿಸಿದ್ದೇವೆ. ಇದರ ಆಧಾರದ ಮೇಲೆ ವಿಕಸಿತ ಭಾರತದ ಅಭಿವೃದ್ಧಿಗೆ ಆದ್ಯತೆ ಕೊಡಲಾಗುತ್ತಿದೆ. ಆದರೆ, ಕಾಂಗ್ರೆಸ್ನವರು ಒಂದೇ ಸಮುದಾಯದ ಓಲೈಕೆ ಗಮನದಲ್ಲಿಟ್ಟುಕೊಂಡು ತಮ್ಮ ಪ್ರಣಾಳಿಕೆ ಸಿದ್ಧಪಡಿಸಿದ್ದಾರೆ ಎಂದು ಆರೋಪಿಸಿದರು.ಭ್ರಷ್ಟಾಚಾರ ರಹಿತವಾದ ಉತ್ತಮ ಆಡಳಿತ ನೀಡುವುದೇ ನಮ್ಮ ಪಕ್ಷದ ಅಜೆಂಡಾ ಆಗಿದ್ದು, ಈ ಹಿನ್ನೆಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಬಿಜೆಪಿ ಜಯಗಳಿಸುವ ವಿಶ್ವಾಸವಿದೆ.
ರಾಷ್ಟ್ರೀಯ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಆಗಿನ ಪ್ರಧಾನಮಂತ್ರಿ ಡಾ. ಮನಮೋಹನ ಸಿಂಗ್ ಈ ದೇಶದ ಸಂಪನ್ಮೂಲಗಳ ಮೇಲೆ ಮುಸ್ಲಿಮರಿಗೆ ಮೊದಲ ಹಕ್ಕು ಇದೆ ಎಂದು ಹೇಳಿದ್ದರು. 2009ರಲ್ಲಿ ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅದನ್ನು ಪುನರುಚ್ಛರಿಸಿದ್ದರು. ಇದರ ಮುಂದುವರಿದ ಭಾಗವಾಗಿ ಪ್ರಸ್ತುತ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಮುಸ್ಲಿಮರಿಗೆ ವಿಶೇಷವಾಗಿ ಯೋಜನೆ ಪ್ರಕಟಿಸಿದೆ. ಇದೇ ನೀತಿಯನ್ನು ಮುಂದಿಟ್ಟುಕೊಂಡು ಇಂಡಿಯಾ ಒಕ್ಕೂಟ ರಚಿಸಿದ್ದಾರೆ. ಇವರದು ಘಟಬಂಧನವಲ್ಲ, ಕಟ್ಬಂಧನ ಎಂದು ವ್ಯಂಗ್ಯವಾಡಿದರು.
ಕನ್ನಡಪ್ರಭ ವಾರ್ತೆ ಹುಬ್ಬಳ್ಳಿರಾಜ್ಯಕ್ಕೆ ಎನ್ಡಿಎ ಅವಧಿಯಲ್ಲಿ ಯುಪಿಎಗಿಂತ ಶೇ. 40ರಷ್ಟು ಹೆಚ್ಚು ಅನುದಾನವನ್ನೇ ನೀಡಿದೆ. ಹಾಗಿದ್ದರೂ ರಾಜ್ಯ ಕಾಂಗ್ರೆಸ್ ಸರ್ಕಾರ ಡ್ರಾಮಾ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಿಡಿ ಕಾರಿದರು.
ರಾಜ್ಯ ಸರ್ಕಾರದ್ದು ಡ್ರಾಮಾ:ಕೇಂದ್ರದಿಂದ ರಾಜ್ಯಕ್ಕೆ ಅನುದಾನ ಹಂಚಿಕೆ ವಿಷಯದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂ ಕೋರ್ಟ್ಗೆ ಹೋಗುವ ಅವಶ್ಯಕತೆ ಇರಲಿಲ್ಲ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಡ್ರಾಮಾ ಮಾಡುತ್ತಿದ್ದಾರೆ ಅಷ್ಟೇ ಎಂದು ಆರೋಪಿಸಿದರು.