ಬ್ಲಾಕ್‌ ಕಾಂಗ್ರೆಸ್‌ ಸಮಿತಿ ಅಧ್ಯಕ್ಷರ ನೇಮಕ

KannadaprabhaNewsNetwork |  
Published : Jan 16, 2025, 12:45 AM IST
15ಎಚ್ಎಸ್ಎನ್3 : ನೂತನವಾಗಿ  ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ  ಕೆ. ಟಿ. ಸೋಮಶೇಖರ್ ಮತ್ತು ರಾಜೇಗೌಡ ಅವರನ್ನು ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು  ಹರ್ಷೋದ್ಘಾರಗಳೊಂದಿಗೆ ಬರಮಾಡಿಕೊಂಡರು. | Kannada Prabha

ಸಾರಾಂಶ

ಅರಕಲಗೂಡು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಕಬ್ಬಳಿಗೆರೆ ಗ್ರಾಮದ ಕೆ.ಟಿ. ಸೋಮಶೇಖರ್ ಹಾಗೂ ವಿಧಾನಸಭಾ ವ್ಯಾಪ್ತಿಯ ಹಳ್ಳಿಮೈಸೂರು ಹೋಬಳಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಜೇಗೌಡ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ್ ನೇಮಕ ಮಾಡಿದ್ದಾರೆ. ಪಕ್ಷದ ಬಲವರ್ಧನೆ ಮತ್ತು ಸಂಘಟನೆಗೆ ಶ್ರಮಿಸುವಂತೆ ಸೂಚಿಸಿದ್ದಾರೆ. ಪಕ್ಷ ವಹಿಸಿರುವ ಜವಾಬ್ದಾರಿಯನ್ನು ಕಾರ್ಯಕರ್ತರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಇಲ್ಲಿ ಜಯಗಳಿಸುವಂತೆ ಕಾರ್ಯ ನಿರ್ವಹಿಸುವುದಾಗಿ ಹೇಳಿದರು.

ಕನ್ನಡಪ್ರಭ ವಾರ್ತೆ ಅರಕಲಗೂಡು

ಅರಕಲಗೂಡು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಕಬ್ಬಳಿಗೆರೆ ಗ್ರಾಮದ ಕೆ.ಟಿ. ಸೋಮಶೇಖರ್ ಹಾಗೂ ವಿಧಾನಸಭಾ ವ್ಯಾಪ್ತಿಯ ಹಳ್ಳಿಮೈಸೂರು ಹೋಬಳಿಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ರಾಜೇಗೌಡ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ. ಕೆ.ಶಿವಕುಮಾರ್ ನೇಮಕ ಮಾಡಿದ್ದಾರೆ. ಪಕ್ಷದ ಬಲವರ್ಧನೆ ಮತ್ತು ಸಂಘಟನೆಗೆ ಶ್ರಮಿಸುವಂತೆ ಸೂಚಿಸಿದ್ದಾರೆ.

ನೂತನವಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಕೆ. ಟಿ. ಸೋಮಶೇಖರ್ ಮತ್ತು ರಾಜೇಗೌಡ ಅವರನ್ನು ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹರ್ಷೋದ್ಘಾರಗಳೊಂದಿಗೆ ಬರಮಾಡಿಕೊಂಡರು. ಅನಕೃ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ನಡೆಸಿದರು. ಸೋಮಶೇಖರ್ ಹಾಗೂ ರಾಜೇಗೌಡ ಮಾತನಾಡಿ, ಪಕ್ಷ ವಹಿಸಿರುವ ಜವಾಬ್ದಾರಿಯನ್ನು ಕಾರ್ಯಕರ್ತರು ಹಾಗೂ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ಷೇತ್ರದಲ್ಲಿ ಪಕ್ಷವನ್ನು ಸಂಘಟಿಸಿ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಇಲ್ಲಿ ಜಯಗಳಿಸುವಂತೆ ಕಾರ್ಯ ನಿರ್ವಹಿಸುವುದಾಗಿ ಹೇಳಿದರು.

ಪಪಂ ಉಪಾಧ್ಯಕ್ಷ ಸುಬಾನ್ ಷರೀಫ್‌, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗುರುಮೂರ್ತಿ, ಐಎನ್‌ಟಿಯುಸಿ ಅಧ್ಯಕ್ಷ ಎ. ಎಸ್. ರಂಗನಾಥ್, ಬಗರ್‌ಹುಕುಂ ಸಮಿತಿ ಸದಸ್ಯರಾದ ಎಸ್. ಎಲ್. ಗಣಪತಿ, ಪುಟ್ಟಯ್ಯ, ಕೆಡಿಪಿ ಸದಸ್ಯ ಸುರೇಶ್, ಮುಖಂಡರಾದ ದಶರಥ, ನಿಂಗರಾಜ್, ಸತ್ಯರಾಜ್, ಸಲೀಮ್ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲು ಸಾಲು ರಜೆ, ಪ್ರವಾಸಿ ತಾಣ ರಷ್‌
ಭೂಮಿ ಮಾರಿದ ಇನ್ಫಿ ಬಗ್ಗೆ ಕಾರ್ತಿ ತೀವ್ರ ಆಕ್ರೋಶ