ದೇವರಹಿಪ್ಪರಗಿ ಕ್ಷೇತ್ರದ ಪ್ರಚಾರ ಉಸ್ತುವಾರಿಗಳ ನೇಮಕ

KannadaprabhaNewsNetwork |  
Published : Mar 29, 2024, 12:45 AM IST
ಕೆಪಿಸಿಸಿ ಅಧ್ಯಕ್ಷರಿಂದ ದೇವರಹಿಪ್ಪರಗಿ ಕ್ಷೇತ್ರದ ಪ್ರಚಾರ ಉಸ್ತುವಾರಿಗಳ ನೇಮಕ. | Kannada Prabha

ಸಾರಾಂಶ

ವಿಜಯಪುರ ಲೋಕಸಭಾ ಚುನಾವಣಾ ಹಿನ್ನೆಲೆ ದೇವರಹಿಪ್ಪರಗಿ ಮತಕ್ಷೇತ್ರದ ವ್ಯಾಪ್ತಿಯ ಪ್ರಚಾರ ಉಸ್ತುವಾರಿಗಳ ನೇಮಕವನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರವರು ಉಸ್ತುವಾರಿ ಸಚಿವರಿಗೆ ಆದೇಶ ಪತ್ರ ನೀಡಿ ಸೂಚಿಸಿದ್ದಾರೆ ಎಂದು ಮತಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿಯ ಸಂಚಾಲಕ ಬಿ.ಎಸ್.ಪಾಟೀಲ(ಯಾಳಗಿ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ

ವಿಜಯಪುರ ಲೋಕಸಭಾ ಚುನಾವಣಾ ಹಿನ್ನೆಲೆ ದೇವರಹಿಪ್ಪರಗಿ ಮತಕ್ಷೇತ್ರದ ವ್ಯಾಪ್ತಿಯ ಪ್ರಚಾರ ಉಸ್ತುವಾರಿಗಳ ನೇಮಕವನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರವರು ಉಸ್ತುವಾರಿ ಸಚಿವರಿಗೆ ಆದೇಶ ಪತ್ರ ನೀಡಿ ಸೂಚಿಸಿದ್ದಾರೆ ಎಂದು ಮತಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿಯ ಸಂಚಾಲಕ ಬಿ.ಎಸ್.ಪಾಟೀಲ(ಯಾಳಗಿ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಜಯಪುರ ಲೋಕಸಭ ಕ್ಷೇತ್ರದ ವ್ಯಾಪ್ತಿಯ ದೇವರಹಿಪ್ಪರಗಿ ವಿಧಾನಸಭೆ ಪ್ರಚಾರ ಉಸ್ತುವಾರಿಗಳ ನೇಮಕವನ್ನು ಮಾಡಿ ಆದೇಶ ಹೊರಡಿಸಿದ್ದಾರೆ. ವಿಧಾನ ಪರಿಷತ್‌ ಸದಸ್ಯರಾದ ಸುನೀಲಕುಮಾರ ಪಾಟೀಲ, ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಸುಭಾಷ ಛಾಯಗೋಳ, ಡಾ.ಪ್ರಭುಗೌಡ.ಬಿ.ಲಿಂಗದಳ್ಳಿ(ಚಬನೂರ), ಆನಂದಗೌಡ ದೊಡ್ಡಮನಿ, ಗೌರಮ್ಮ ಮುತ್ತತ್ತಿ, ಬಸೀರ್‌ ಅಹ್ಮದ್ ಬೇಪಾರಿ, ಬಾಳಸಾಹೇಬಗೌಡ ಪಾಟೀಲ, ಎಸ್.ಎಂ.ದೇಸಾಯಿ, ಸಾಯಿಕುಮಾರ ಹಾಗೂ ಸಂಚಾಲಕರಾಗಿ ಬಿ.ಎಸ್.ಪಾಟೀಲ(ಯಾಳಗಿ) ಆಯ್ಕೆ ಮಾಡಲಾಗಿದೆ ಎಂದು ದೇವರಹಿಪ್ಪರಗಿ ಮತಕ್ಷೇತ್ರದ ಪ್ರಚಾರ ಉಸ್ತುವಾರಿ ಸಂಚಾಲಕರು ಹಾಗೂ 2018ರ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾದ ಬಿ.ಎಸ್.ಪಾಟೀಲ(ಯಾಳಗಿ) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!