ಪಾಠ್ ಶಾಲಾ ಜೀವನ್ ಯಾತ್ರಾ ಪುಸ್ತಕಕ್ಕೆ ನಿರ್ಮಲಾ ಸೀತಾರಾಮನ್ ಮೆಚ್ಚುಗೆ

KannadaprabhaNewsNetwork |  
Published : Nov 26, 2024, 12:45 AM IST
39 | Kannada Prabha

ಸಾರಾಂಶ

ಶಾಲೆಯ ನಾಲ್ಕರಿಂದ ಹತ್ತನೇ ತರಗತಿಯವರೆಗಿನ 104 ವಿದ್ಯಾರ್ಥಿಗಳು ತಮ್ಮ ಬದುಕಿನ ಸಣ್ಣ ಸಣ್ಣ ಅನುಭವಗಳು, ಪ್ರವಾಸ, ಸೃಜನಶೀಲ ಆಲೋಚನೆಗಳು, ತಮ್ಮನ್ನು ಪ್ರಭಾವಿಸಿದ ಸಂಗತಿಗಳು- ವ್ಯಕ್ತಿಗಳ ಬಗ್ಗೆ ಬರೆದಿರುವ 189 ಲೇಖನಗಳ ಗುಚ್ಛ ಈ ಪುಸ್ತಕ.

ಕನ್ನಡಪ್ರಭ ವಾರ್ತೆ ಮೈಸೂರುಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಗರದ ಪೂರ್ಣ ಚೇತನ ಶಾಲೆಯ ಮಕ್ಕಳೇ ಬರೆದು, ಸಂಪಾದಿಸಿ, ಪ್ರಕಟಿಸಿರುವ ಪಾಠ್ ಶಾಲಾ- ಜೀವನ್ ಯಾತ್ರಾ ಪುಸ್ತಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಅವರನ್ನು ಅಭಿನಂದಿಸಿದ್ದಾರೆ.ಶಾಲೆಯ ಸಿಇಒ ಬಿ. ದರ್ಶನ್ ರಾಜ್ ಹಾಗು ಶಾಲೆಯ ಮುಖ್ಯ ಆಡಳಿತಾಧಿಕಾರಿ ಮಾಧುರ್ಯ ರಾಮಸ್ವಾಮಿ ಅವರು ಇತ್ತೀಚಿಗೆ ಸಚಿವರನ್ನು ಅವರ ನವದೆಹಲಿಯ ಕಚೇರಿಯಲ್ಲಿ ಭೇಟಿಯಾಗಿ ಈ ಪುಸ್ತಕವನ್ನು ಅವರಿಗೆ ಅರ್ಪಿಸಿದರು. ಈ ವೇಳೆ ಸಚಿವರು ಮಕ್ಕಳ ಕ್ರಿಯಾಶೀಲತೆ ಹಾಗೂ ಸೃಜನಶೀಲತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.ಶಾಲೆಯ ನಾಲ್ಕರಿಂದ ಹತ್ತನೇ ತರಗತಿಯವರೆಗಿನ 104 ವಿದ್ಯಾರ್ಥಿಗಳು ತಮ್ಮ ಬದುಕಿನ ಸಣ್ಣ ಸಣ್ಣ ಅನುಭವಗಳು, ಪ್ರವಾಸ, ಸೃಜನಶೀಲ ಆಲೋಚನೆಗಳು, ತಮ್ಮನ್ನು ಪ್ರಭಾವಿಸಿದ ಸಂಗತಿಗಳು- ವ್ಯಕ್ತಿಗಳ ಬಗ್ಗೆ ಬರೆದಿರುವ 189 ಲೇಖನಗಳ ಗುಚ್ಛ ಈ ಪುಸ್ತಕ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!