ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಎಂಸಿಸಿ ಬಿ ಬ್ಲಾಕ್ನಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ವಿಸರ್ಜನೆಗೆ ಮುನ್ನ ಗುರುವಾರ ಏರ್ಪಡಿಸಲಾಗಿದ್ದ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಭಕ್ತಾದಿಗಳಿಗೆ ಪ್ರಸಾದ ಬಡಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಶ್ರದ್ಧಾ ಭಕ್ತಿಯಿಂದ ಗಣೇಶೋತ್ಸವ ಆಚರಿಸಲಾಗುತ್ತಿದೆ. ಪೂಜೆ ಪುನಸ್ಕಾರವೂ ಜೋರಾಗಿ ನಡೆಯುತ್ತಿದೆ. ಗಣೇಶ ಮೂರ್ತಿ ಮೆರವಣಿಗೆಯು ಶಾಂತಿಯುತವಾಗಿ ಸಾಗಿ ವಿಸರ್ಜನೆ ನಡೆಯುತ್ತಿದ್ದು, ಇದು ದಾವಣಗೆರೆ ಜನರು ಶಾಂತಿಪ್ರಿಯರು ಎಂದು ತೋರಿಸುತ್ತದೆ. ಜಿಲ್ಲೆಯ ಜನರು, ಭಕ್ತಾದಿಗಳು ಯಾವುದೇ ಸಂಘರ್ಷಕ್ಕೆ ಎಡೆ ಮಾಡಿಕೊಡದೇ ಆಚರಣೆ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಹೇಳಿದರು.ಡಿಜೆ ಸಿಸ್ಟಂ ನಿಷೇಧ ಮಾಡಿರುವುದರಿಂದ ಗಣೇಶೋತ್ಸವದಲ್ಲಿ ಸಂಸ್ಕೃತಿ ಬಿಂಬಿಸುವ, ಗಣಪತಿ ಮಹತ್ವ ಸಾರುವಂಥ ಸಂದೇಶವುಳ್ಳ ಕಲಾ ತಂಡಗಳ ಮೆರವಣಿಗೆಯು ಮತ್ತಷ್ಟು ಅಂದಗಾಣಿಸಲ್ಪಟ್ಟಿದೆ. ಇಲ್ಲಿಯವರೆಗೆ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದಂತೆ ಹಬ್ಬ ಆಚರಣೆ ಮಾಡಲಾಗಿದ್ದು, ಎಲ್ಲರಿಗೂ ಮಾದರಿಯಾಗಿದೆ. ಹಬ್ಬವನ್ನು ಸಂಭ್ರಮದಿಂದ ನಾಡಿನೆಲ್ಲೆಡೆ ನಡೆಯುತ್ತಿದೆ. ಇನ್ನೂ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ಇದ್ದು, ಶಾಂತಿಯುತವಾಗಿ ನಡೆಯಬೇಕು ಎಂದು ಸಲಹೆ ನೀಡಿದರು.
ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಗಡಿಗುಡಾಳ್ ಮಂಜುನಾಥ್ ಮಾತನಾಡಿ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಸೂಚನೆ ಮೇರೆಗೆ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಯು ಶಾಂತಿಯುತವಾಗಿ, ಯಾವುದೇ ರೀತಿಯ ಗಲಾಟೆಗೆ ಆಸ್ಪದ ನೀಡದಂತೆ ಮುನ್ನಚ್ಚರಿಕೆ ವಹಿಸಿ ಶಾಂತಿ ಕಾಪಾಡುವ ಮೂಲಕ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದು, ಹಬ್ಬದ ಸಂಭ್ರಮಕ್ಕೆ ಈ ಬಾರಿ ಕಲಾ ತಂಡಗಳು ಮೆರಗು ನೀಡಿವೆ ಎಂದು ತಿಳಿಸಿದರು.