ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ‘ಹವ್ಯಕ ಭಾಷಾ ಅಕಾಡೆಮಿ’ ಮತ್ತು ಕೊಡವ ಅಭಿವೃದ್ಧಿ ನಿಗಮವನ್ನು ಘೋಷಿಸಿರುವುದು, ಜೊತೆಗೆ ಕುಂಬಾರ, ಈಡಿಗ, ಕಾಡುಗೊಲ್ಲ, ತಿಗಳ, ಗಾಣಿಗ, ಉಪ್ಪಾರ ಸಮುದಾಯಗಳಿಗೆ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿರುವುದು ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸುವಲ್ಲಿ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ಸಂಘಟನೆ ಅಧ್ಯಕ್ಷ ಎನ್.ಯು. ನಾಚಪ್ಪ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ ಮಡಿಕೇರಿ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ‘ಹವ್ಯಕ ಭಾಷಾ ಅಕಾಡೆಮಿ’ ಮತ್ತು ಕೊಡವ ಅಭಿವೃದ್ಧಿ ನಿಗಮವನ್ನು ಘೋಷಿಸಿರುವುದು, ಜೊತೆಗೆ ಕುಂಬಾರ, ಈಡಿಗ, ಕಾಡುಗೊಲ್ಲ, ತಿಗಳ, ಗಾಣಿಗ, ಉಪ್ಪಾರ ಸಮುದಾಯಗಳಿಗೆ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಿರುವುದು ಸಾಂಸ್ಕೃತಿಕ ಪರಂಪರೆಯನ್ನು ರಕ್ಷಿಸುವಲ್ಲಿ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್ಸಿ) ಸಂಘಟನೆ ಅಧ್ಯಕ್ಷ ಎನ್.ಯು. ನಾಚಪ್ಪ ಹೇಳಿದ್ದಾರೆ.ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರಕಾರದ ಈ ನಿರ್ಧಾರವು ಕೊಡವ ಮತ್ತು ಇತರ ಪಟ್ಟಿ ಮಾಡಲಾದ ಸಮುದಾಯಗಳಿಗೆ ಪ್ರಯೋಜನಕಾರಿಯಾಗಲಿದ್ದು, ಅವರ ಭಾಷೆ, ಸಂಸ್ಕೃತಿ ಮತ್ತು ಆರ್ಥಿಕ ಬೆಳವಣಿಗೆಗೆ ಬೆಂಬಲ ನೀಡಲಿದೆ. ಕೊಡವ ನ್ಯಾಷನಲ್ ಕೌನ್ಸಿಲ್ ಮೊದಲಿನಿಂದಲೂ ಕೊಡವ ಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ, ಆದಿಮ ಸಂಜಾತ ಕೊಡವರಿಗೆ ಎಸ್ಟಿ ವರ್ಗೀಕರಣ, ಸಂವಿಧಾನಾತ್ಮಕವಾಗಿ ಕೊಡವ ಧಾರ್ಮಿಕ ಸಂಸ್ಕಾರ ಶಸ್ತ್ರಾಸ್ತ್ರದ ಹಕ್ಕುಗಳ ಖಾತರಿ ಮತ್ತು ಕೊಡವ ಭಾಷೆಯನ್ನು 8ನೇ ಶೆಡ್ಯೂಲ್ ಗೆ ಸೇರಿಸುವಂತೆ ಒತ್ತಾಯಿಸುತ್ತಾ ಬಂದಿದೆ ಎಂದು ಹೇಳಿದ್ದಾರೆ.‘ಹವ್ಯಕ ಭಾಷಾ ಅಕಾಡೆಮಿ’ ರಚಿಸುವ ಮೂಲಕ ಸರಕಾರ ಪಶ್ಚಿಮಘಟ್ಟಗಳ ಸಹ್ಯಾದ್ರಿ ಶ್ರೇಣಿಯ ಉತ್ತರ ಕನ್ನಡ, ಶಿವಮೊಗ್ಗ, ತುಳುನಾಡು ಮತ್ತು ಕಾಸರಗೋಡುವರೆಗೆ ಹರಡಿರುವ, ಆದಿಶಂಕರರ ಅದ್ವೈತ ತತ್ವಶಾಸ್ತ್ರದ ಅನುಯಾಯಿಗಳಾದ ಹವ್ಯಕ ಬ್ರಾಹ್ಮಣರ ವಿಶಿಷ್ಟ ಕೃಷಿ ಆಧರಿತ ಸಂಸ್ಕೃತಿಯನ್ನು ಗುರುತಿಸಿದೆ. ಅವರ ಭಾಷೆ ಮತ್ತು ಜೀವನಶೈಲಿ ವಿಶಿಷ್ಟವಾಗಿದ್ದು, ನ್ಯಾಯಾಂಗ, ವೈದ್ಯಕೀಯ, ಆಧ್ಯಾತ್ಮಿಕತೆ, ಪತ್ರಿಕೋದ್ಯಮ, ಕ್ರೀಡೆ, ಸಾಹಿತ್ಯ, ಸಂಗೀತ, ಸಹಕಾರ, ಪ್ರಗತಿಪರ ಕೃಷಿ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಅವರು ಅಪಾರ ಕೊಡುಗೆ ನೀಡಿದ್ದಾರೆ. ಪಂಚಾಯತ್ ರಾಜ್ ವ್ಯವಸ್ಥೆಯ ಶಿಲ್ಪಿ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರು ಇದೇ ಸಮುದಾಯದವರು ಎಂಬುದು ಹೆಮ್ಮೆಯ ವಿಷಯ.ಹವ್ಯಕ ಸಮುದಾಯದ ಬಹು ಕಾಲದ ಬೇಡಿಕೆಯನ್ನು ಈಡೇರಿಸಿದ ಮತ್ತು ಕೊಡವ ಅಭಿವೃದ್ಧಿ ನಿಗಮ ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಅವರಿಗೆ ಸಿಎನ್ಸಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಹೇಳಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.