ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಹೊರವಲಯದ ಸಾಂಜೋ ಆಸ್ಪತ್ರೆ ಹಿಂಭಾಗ ನಿರ್ಮಾಣವಾಗುತ್ತಿರುವ ಸಾಹಿತ್ಯ ಸಮ್ಮೇಳನ ವೇದಿಕೆ ನಿರ್ಮಾಣದ ಸಿದ್ಧತೆ ವೀಕ್ಷಿಸಿ ಮಾತನಾಡಿದ ಅವರು, ಸಮ್ಮೇಳನದ ಸಿದ್ಧತಾ ಕಾರ್ಯವನ್ನು ಜಿಲ್ಲಾಧಿಕಾರಿಗಳು ಸಾಹಿತ್ಯ ಪರಿಷತ್ ಅಧ್ಯಕ್ಷರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಸಾಹಿತ್ಯ ಪರಿಷತ್, ರಾಜ್ಯ ಸಾಹಿತ್ಯ ಪರಿಷತ್, ಸಂಘ ಸಂಸ್ಥೆಗಳು, ಸಾರ್ವಜನಿಕರು ಎಲ್ಲರೂ ಒಟ್ಟಾಗಿ ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿ ಎಂದು ಹರ್ಷ ವ್ಯಕ್ತಪಡಿಸಿದರು.
ಮುಂದಿನ ಮಂಗಳವಾರ ಅಥವಾ ಬುಧವಾರದೊಳಗೆ ವೇದಿಕೆ ಕಾಮಗಾರಿ ಪೂರ್ಣಗೊಳ್ಳಲಿದೆ. ನಾಳೆಯಿಂದ ನಾನು ಸಹ ಸಂಪೂರ್ಣವಾಗಿ ವೇದಿಕೆ ನಿರ್ಮಾಣದ ಸ್ಥಳದಲ್ಲಿ ಇದ್ದು ವೇದಿಕೆ ಕಾರ್ಯಗಳನ್ನು ವೀಕ್ಷಿಸಲಿದ್ದೇನೆ ಎಂದರು.ಸಮ್ಮೇಳನದಲ್ಲಿ ಭಾಗವಹಿಸುವ ಎಲ್ಲ ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ವ್ಯವಸ್ಥೆಯನ್ನು ಸೂಕ್ತವಾಗಿ ಕಲ್ಪಿಸಲಾಗುವುದು. ಸಮ್ಮೇಳನದಲ್ಲಿ ಗೋಷ್ಠಿಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಕೃಷಿ, ಸಾಹಿತ್ಯ, ಸಂಸ್ಕೃತಿಕ ಇನ್ನೂ ಅನೇಕ ವಿಚಾರಗಳ ಗೋಷ್ಠಿಗಳು ನಡೆಯಲಿವೆ ಎಂದರು.
ಇಂದು ಗುರುವಂದನೆ, ಹಿರಿಯ ವಿದ್ಯಾರ್ಥಿಗಳ ಸಂಘ ಉದ್ಘಾಟನೆ