ಸಾಹಿತ್ಯ ಸಮ್ಮೇಳನಕ್ಕೆ ಬರುವವರಿಗೆ ಸೂಕ್ತ ಆರೋಗ್ಯ ಸೇವೆ: ದಿನದ 24 ಗಂಟೆ ವೈದ್ಯ ತಂಡ ಸನ್ನದ್ಧ

KannadaprabhaNewsNetwork |  
Published : Dec 10, 2024, 12:32 AM IST
ಸಮ್ಮೇಳನಕ್ಕೆ  | Kannada Prabha

ಸಾರಾಂಶ

ದಿನದ 24 ಗಂಟೆಯು ವೈದ್ಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಕೆಲಸ ಮಾಡುವ ತಂಡ ರಚನೆ ಮಾಡಲಾಗಿದೆ. ಹೆಲ್ತ್ ಡೆಸ್ಕ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಸದರಿ ತಾತ್ಕಾಲಿಕ ಆಸ್ಪತ್ರೆಯಲ್ಲಿ 10 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಫಾರ್ಮಸಿ ಮತ್ತು ಲ್ಯಾಬ್ ಘಟಕ ಕೂಡ ಕಾರ್ಯನಿರ್ವಹಿಸಲಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಗಣ್ಯರು, ಸಾಹಿತ್ಯಾಸಕ್ತರು ಹಾಗೂ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಮತ್ತು ವೈದ್ಯಕೀಯ ನೆರವು ಸಮಿತಿ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಆರೋಗ್ಯ ಸೇವೆ ನೀಡಲು ಮುಂದಾಗಿದೆ.

ದಿನದ 24 ಗಂಟೆಯು ವೈದ್ಯರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ಕೆಲಸ ಮಾಡುವ ತಂಡ ರಚನೆ ಮಾಡಲಾಗಿದೆ. ಹೆಲ್ತ್ ಡೆಸ್ಕ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಸದರಿ ತಾತ್ಕಾಲಿಕ ಆಸ್ಪತ್ರೆಯಲ್ಲಿ 10 ಬೆಡ್‌ಗಳ ವ್ಯವಸ್ಥೆ ಮಾಡಲಾಗಿದೆ. ಫಾರ್ಮಸಿ ಮತ್ತು ಲ್ಯಾಬ್ ಘಟಕ ಕೂಡ ಕಾರ್ಯನಿರ್ವಹಿಸಲಿದೆ.

ಇಸಿಜಿ ಮಿಷಿನ್, ಆಕ್ಸಿಜನ್ ಕನ್ಸನ್ ಟ್ರೇಟರ್ ಒಳಗೊಂಡಂತೆ ತೀವ್ರ ನಿಗಾ ಘಟಕಕ್ಕೆ ಅವಶ್ಯವಿರುವ ಕನಿಷ್ಠ ಉಪಕರಣಗಳ ವ್ಯವಸ್ಥೆ ಕೂಡ ಮಾಡಲಾಗುತ್ತಿದೆ. ತುತ್ತು ಸೇವೆಗಾಗಿ ಆಂಬ್ಯುಲೆನ್ಸ್ ಸಿದ್ಧಗೊಳಿಸಲಾಗಿದೆ. ತಜ್ಞರ ತಪಾಸಣೆಗಾಗಿ ತಾತ್ಕಾಲಿಕ ಆಸ್ಪತ್ರೆ ಒಳಗಡೆ 2 ಟೇಬಲ್ ಮತ್ತು ಚೇರ್ ಗಳ ವ್ಯವಸ್ಥೆ ಮಾಡಲಾಗುವುದು.

ಸಮ್ಮೇಳನದ ಲೋಗೋ ಒಳಗೊಂಡ ಒಪಿಡಿ ಸ್ಲಿಪ್ ವಿತರಣೆಗೆ ಒಪಿಡಿ ರಿಜಿಸ್ಟ್ರೇಷನ್ ಕೌಂಟರ್ ವ್ಯವಸ್ಥೆ ಮಾಡಲಾಗುವುದು. ಫಾರ್ಮಸಿ ಘಟಕದಲ್ಲಿ ಅತ್ಯವಶ್ಯಕ ಔಷಧಗಳ ವಿತರಣೆ ಮತ್ತು ಲ್ಯಾಬ್ ಘಟಕದಲ್ಲಿ ತುರ್ತು ಚಿಕಿತ್ಸಾ ಪರೀಕ್ಷೆ ಮಾಡಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ನಾಲ್ಕು ವೀಲ್ ಚೇರ್ ಹಾಗೂ 5 ಸ್ಟ್ರೇಚರ್‌ಗಳ ವ್ಯವಸ್ಥೆ ಕೂಡ ಇರಲಿದೆ.

ಬೆಳಗ್ಗೆ, ಮಧ್ಯಾಹ್ನ ಮತ್ತು ರಾತ್ರಿ ಪಾಳಿಯಲ್ಲಿ ಪ್ರತ್ಯೇಕ ತಂಡಗಳಲ್ಲಿ ವೈದ್ಯ ಸಿಬ್ಬಂದಿ ಕಾರ್ಯನಿರ್ವಹಿಸಲಿದ್ದಾರೆ. ಮುಂಜಾಗೃತ ಕ್ರಮವಾಗಿ ಜಿಲ್ಲಾಸ್ಪತ್ರೆಯಲ್ಲಿ 20 ಬೆಡ್‌ಗಳ ಸುಸಜ್ಜಿತ ವಾರ್ಡ್ ಅನ್ನು ಮೀಸಲಿರಿಸಲಾಗಿದೆ. ಪ್ರಧಾನ ವೇದಿಕೆ, ಸಮಾನಂತರ ವೇದಿಕೆ ಹಾಗೂ ವಸ್ತುಪ್ರದರ್ಶನ ಮಳಿಗೆ, ಆಹಾರ ಕೌಂಟರ್ ಸೇರಿದಂತೆ ಹಲವೆಡೆ ವೈದ್ಯ ಸಿಬ್ಬಂದಿಗಳನ್ನು ನಿಯೋಜಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ನಿರ್ಧರಿಸಿದ್ದಾರೆ.ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವವರ ಆರೋಗ್ಯದ ಹಿತದೃಷ್ಟಿಯಿಂದ ಹಲವು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಉಚಿತ ಆರೋಗ್ಯ ಸೇವೆ ನೀಡಲಾಗುವುದು. ತಾತ್ಕಾಲಿಕ ಆಸ್ಪತ್ರೆ, ಬೆಡ್‌ಗಳ ವ್ಯವಸ್ಥೆ, ಪ್ರಾಥಮಿಕ ಆರೋಗ್ಯ ಕೇಂದ್ರ ತೆರೆಯಲಾಗಿದೆ. ಆರೋಗ್ಯ ಇಲಾಖೆಯಿಂದ ಹಲವು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

-ಕೆ.ಎಂ.ಉದಯ್, ಶಾಸಕರು ಹಾಗೂ ಆರೋಗ್ಯ ಮತ್ತು ವೈದ್ಯಕೀಯ ನೆರವು ಸಮಿತಿ ಅಧ್ಯಕ್ಷರು

ಸಮ್ಮೇಳನದಲ್ಲಿ ದಿನದ 24 ಗಂಟೆ ಆರೋಗ್ಯ ಸೇವೆ ಕಲ್ಪಿಸಲು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ವಾರ್ಡ್ ಮೀಸಲಿರಸಲಾಗಿದೆ. ಪಾಳಿಯಲ್ಲಿ ವೈದ್ಯರ ತಂಡ ಕಾರ್ಯನಿರ್ವಹಿಸಲಿದೆ. ಮಹಿಳೆಯರು ಮತ್ತು ಮಕ್ಕಳ ಕ್ಲಿನಿಕ್, ಸ್ಟೇಜ್ ಪಕ್ಕದಲ್ಲೇ ತಾತ್ಕಾಲಿಕ ಕ್ಲಿನಿಕ್ ಗಳನ್ನು ತೆರೆಯಲಾಗುವುದು. ನರ್ಸಿಂಗ್, ಫಾರ್ಮಸಿ ಸೇರಿದಂತೆ ಮೇಲುಸ್ತುವಾರಿಗಾಗಿ ಸಮಿತಿಗಳನ್ನು ಕೂಡ ರಚಿಸಲಾಗಿದೆ.

-ಡಾ.ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌