ಕನ್ನಡಪ್ರಭ ವಾರ್ತೆ ಮಂಡ್ಯ
ಭಾರತದ ಮೊಟ್ಟ ಮೊದಲ ಸಂವಿಧಾನ ಭವನ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿರುವ ಈ ಭವ್ಯ ಭವನಕ್ಕೆ ೭ ಕೋಟಿ ರು. ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಅಂದಾಜುಪಟ್ಟಿ ತಯಾರಿಸಿದೆ. ಮೊದಲ ಹಂತದಲ್ಲಿ ರಾಜ್ಯ ಸರ್ಕಾರ ೩ ಕೋಟಿ ರು. ಹಣವನ್ನು ಬಿಡುಗಡೆ ಮಾಡಿದೆ.
ನಾಲ್ಕು ಮಹಡಿಗಳನ್ನು ಹೊಂದಿರುವ ಸಂವಿಧಾನ ಭವನದ ನೆಲ ಮಹಡಿಯಲ್ಲಿ ಪಾರ್ಕಿಂಗ್, ಮೊದಲ ಮಹಡಿಯಲ್ಲಿ ರಿಸೆಪ್ಷನ್, ಸಂವಿಧಾನದ ಗ್ಯಾಲರಿ ಇರಲಿದೆ. ಅದರಲ್ಲಿ ಕಾನೂನು ಪುಸ್ತಕ, ಸಂವಿಧಾನ ರಚನೆಗೆ ಸಂಬಂಧಿಸಿದ ಕನ್ನಡ, ಆಂಗ್ಲ ಪುಸ್ತಕಗಳಿರಲಿವೆ. ಎರಡನೇ ಮಹಡಿಯಲ್ಲಿ ನೂರು ಮಂದಿ ಸಾಮರ್ಥ್ಯದ ಸಭಾಂಗಣ ಹಾಗೂ ಮೂರನೇ ಮಹಡಿಯಲ್ಲಿ ಕ್ಯಾಂಟೀನ್ ಸೌಲಭ್ಯವಿರಲಿದೆ. ಪುಸ್ತಕದ ಮಾದರಿಯಲ್ಲಿ ಕಟ್ಟಡದ ವಿನ್ಯಾಸವನ್ನು ರೂಪಿಸಲಾಗಿದೆ.ಜಿಲ್ಲಾ ವಕೀಲರ ಸಂಘದ ಕಟ್ಟಡದ ಪಕ್ಕದಲ್ಲೇ ಇರುವ ನಾಲ್ಕು ಗುಂಟೆ ಜಾಗವನ್ನು ಸಂವಿಧಾನ ಭವನಕ್ಕೆ ಕಾಯ್ದಿರಿಸಲಾಗಿದೆ. ಕಳೆದ ೨೦೨೫ರ ನವೆಂಬರ್ನಲ್ಲೇ ಜಿಲ್ಲಾ ವಕೀಲರ ಸಂಘ ಸಮಾಜ ಕಲ್ಯಾಣ ಸಚಿವರ ಮೂಲಕ ಲೋಕೋಪಯೋಗಿ ಇಲಾಖೆ ಮತ್ತು ಮುಖ್ಯಮಂತ್ರಿಗಳಿಗೆ ೫ ಕೋಟಿ ರು. ವೆಚ್ಚದಲ್ಲಿ ಭವನ ನಿರ್ಮಾಣಕ್ಕೆ ಪ್ರಸ್ತಾವನೆ ಕಳುಹಿಸಿತ್ತು. ಸರ್ಕಾರ ಅದಕ್ಕೆ ಅನುಮೋದನೆ ನೀಡಿದ ನಂತರದಲ್ಲಿ ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ೩ ಕೋಟಿ ರು. ಹಣವನ್ನು ಮೊದಲ ಹಂತದಲ್ಲಿ ಬಿಡುಗಡೆ ಮಾಡಿ ಮುಖ್ಯ ಇಂಜಿನಿಯರ್ಗೆ ಕೆಲವೊಂದು ಷರತ್ತುಗಳನ್ನು ವಿಧಿಸಿತ್ತು.
- ಪಿ.ರವಿಕುಮಾರ್, ಶಾಸಕರು, ಮಂಡ್ಯ ವಿಧಾನಸಭಾ ಕ್ಷೇತ್ರಸಂವಿಧಾನ ಭವನ ಜಿಲ್ಲಾ ವಕೀಲರ ಸಂಘದ ಕನಸಿನ ಕೂಸು. ಅದರ ತ್ರೀ-ಡಿ ಮಾದರಿ ಇದೀಗ ಅಂತಿಮಗೊಂಡಿದೆ. ೭ ಕೋಟಿ ರು. ಅಂದಾಜು ವೆಚ್ಚದಲ್ಲಿ ನಿರ್ಮಾಣವಾಗಲಿರುವ ಭವನಕ್ಕೆ ೩ ಕೋಟಿ ರು. ಹಣ ಬಿಡುಗಡೆಯಾಗಿದೆ. ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ನಡೆಸಿ ಕಾಮಗಾರಿಗೆ ಚಾಲನೆ ನೀಡಲಾಗುವುದು.