ಕನ್ನಡಪ್ರಭ ವಾರ್ತೆ ಹಿರಿಯೂರು : ಬಡವರ ಮತ್ತು ತುಳಿತಕ್ಕೊಳಗಾದವರ ಧ್ವನಿಯಾಗಿ ದೇವರಾಜ ಅರಸರು ಕೆಲಸ ಮಾಡಿದರು ಎಂದು ತಹಸೀಲ್ದಾರ್ ರಾಜೇಶ್ ಕುಮಾರ್ ಅಭಿಪ್ರಾಯಪಟ್ಟರು. ನಗರದ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ತಾಲೂಕು ಆಡಳಿತ, ನಗರಸಭೆ, ತಾಲೂಕು ಪಂಚಾಯ್ತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅರಸುರವರ 109 ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಅಜಯ್ ಕುಮಾರ್, ಸರ್ಕಾರಿ ಪಾಲಿಟೆಕ್ನಿಕ್ ನ ಪ್ರಾಂಶುಪಾಲ ವಾಸುದೇವ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಂ. ಶಿವಕುಮಾರ್, ಮುಖ್ಯ ಶಿಕ್ಷಕ ತಿಪ್ಪೇರುದ್ರಪ್ಪ, ಕಾಡುಗೊಲ್ಲ ಹೋರಾಟಗಾರ ತಿಮ್ಮಯ್ಯ, ಸವಿತಾ ಸಮಾಜದ ಮುಖಂಡ ಬಸವರಾಜು, ಈಶ್ವರಪ್ಪ, ವೀರಕರಿಯಪ್ಪ, ನಾಗರಾಜ್ ಹಾಗೂ ನಿಲಯ ಮೇಲ್ವಿಚಾರಕರು, ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಜರಿದ್ದರು.
ಈ ವೇಳೆ 2023 24 ನೇ ಸಾಲಿನಲ್ಲಿ ಅತೀ ಹೆಚ್ಚು ಅಂಕ ಪಡೆದ ಎಸ್ ಎಸ್ ಎಲ್ ಸಿ, ಪಿಯುಸಿ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.