ಮಧ್ಯಪ್ರದೇಶದಲ್ಲಿ ಆರ್ಥಿಕ ಹೊರೆಯಾಗುತ್ತಿಲ್ಲವೆ?

KannadaprabhaNewsNetwork |  
Published : Apr 29, 2024, 01:32 AM IST
ಪೂರ್ಣಿಮಾ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಯಮಕನಮರಡಿ: ಬಿಜೆಪಿಯವರು ಮಧ್ಯಪ್ರದೇಶದಲ್ಲಿ ನೀಡುತ್ತಿರುವ ಯೋಜನೆಗಳಿಂದ ಆರ್ಥಿಕ ಹೊರೆಯಾಗುತ್ತಿಲ್ಲವೆ ಎಂದು ಕಾಂಗ್ರೆಸ್‌ ಮುಖಂಡ ಡಿ.ಟಿ.ಶ್ರೀನಿವಾಸ್‌ ಪ್ರಶ್ನಿಸಿದರು.

ಕನ್ನಡಪ್ರಭ ವಾರ್ತೆ ಯಮಕನಮರಡಿಬಿಜೆಪಿಯವರು ಮಧ್ಯಪ್ರದೇಶದಲ್ಲಿ ನೀಡುತ್ತಿರುವ ಯೋಜನೆಗಳಿಂದ ಆರ್ಥಿಕ ಹೊರೆಯಾಗುತ್ತಿಲ್ಲವೆ ಎಂದು ಕಾಂಗ್ರೆಸ್‌ ಮುಖಂಡ ಡಿ.ಟಿ.ಶ್ರೀನಿವಾಸ್‌ ಪ್ರಶ್ನಿಸಿದರು.

ಕಾಂಗ್ರೆಸ್‌ ಪಕ್ಷ ಕರ್ನಾಟಕದಲ್ಲಿ ಮಹಿಳೆಯರಿಗೆ ₹2000 ನೀಡುತ್ತಿರುವುದು ಆರ್ಥಿಕ ಹೊರೆಯಾಗುತ್ತಿದೆ ಎಂದು ಟೀಕಿಸುತ್ತಿರುವ ಬಿಜೆಪಿಗೆ ತಿರುಗೇಟು ನೀಡಿದ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ 15ಕ್ಕೂ ಹೆಚ್ಚು ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕ, ಮಧ್ಯಪ್ರದೇಶ, ತಮಿಳನಾಡು, ತೆಲಂಗಾಣ ಸೇರಿದಂತೆ ಕೆಲ ರಾಜ್ಯಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಭವಿಷ್ಯ ಈ ಚುನಾವಣೆಯಿಂದ ತಿಳಿಯಲಿದೆ ಎಂದು ಭವಿಷ್ಯ ನುಡಿದರು.

ಹಿಡಕಲ್ ಡ್ಯಾಂ ಶಿಧಿಹಟ್ಟಿಯಲ್ಲಿ ಹಣಬರ ಸಮಾಜದವರನ್ನು ಭೇಟಿಯಾಗಿ ಪ್ರಿಯಾಂಕಾ ಜಾರಕಿಹೊಳಿ ಬೆಂಬಲಿಸುವಂತೆ ಮನವಿ ಮಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಪೂರ್ಣಿಮಾ ಶ್ರೀನಿವಾಸ್‌ ಮಾತನಾಡಿ, ಈ ಬಾರಿ ಚಿಕ್ಕೋಡಿ ಹಾಗೂ ಬೆಳಗಾವಿ ಕ್ಷೇತ್ರದಲ್ಲಿ ಫಲಿತಾಂಶ ಕಾಂಗ್ರೆಸ್‌ ಪರವಾಗಿರಲಿದೆ. ಕಾರಣ 2 ಕ್ಷೇತ್ರಗಳ ಮತದಾರರು ಪಕ್ಷಕ್ಕೆ ಉತ್ತಮ ಬೆಂಬಲ ಸೂಚಿಸುತ್ತಿದ್ದಾರೆ. ಬೆಳಗಾವಿ ಹಾಗೂ ರಾಜ್ಯ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಅಭಿವೃದ್ಧಿ ಕಾರ್ಯಗಳು ವರದಾನವಾಗಲಿದೆ ಎಂದು ತಿಳಿಸಿದರು.

ಚಿಕ್ಕೋಡಿ ಕ್ಷೇತ್ರದಲ್ಲಿ ಹಣಬರ ಸಮಾಜದವರು ಯಾವ್ಯಾವ ಗ್ರಾಮಗಳಲ್ಲಿದ್ದಾರೋ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದೇವೆ. ಅಲ್ಲದೇ, ಸತೀಶ ಜಾರಕಿಹೊಳಿಯವರು ಎಲ್ಲರನ್ನು ಜೊತೆಗೆ ತೆಗೆದುಕೊಂಡು ಹೋಗುವ ಸಾಮರ್ಥ್ಯ ಹೊಂದಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಹಣಬರ ಸಮಾಜದ ಜಿಲ್ಲಾಧ್ಯಕ್ಷ ಶೀತಲ ಮುಂಡೆ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಮಂಜುನಾಥ ಪಾಟೀಲ, ವಿಠ್ಠಲ ಮಾದರ, ಸುವರ್ಣಾ ಮಗದುಮ್ಮ, ಧರ್ಮಣ್ಣ ತೋಳಿ, ಯಾದವಾಡದ ನಾಗಪ್ಪ ಮಿರ್ಜಿ, ರುದ್ರಪ್ಪ ಸಂಗಪ್ಪಗೋಳ, ಶಿವಲಿಂಗ ಪೂಜೇರಿ, ಸರ್ಫರಾಜ ಫಿರಜಾದೆ, ಕಲ್ಲಪ್ಪ ಜುಜಂಗಗೋಳ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ